Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಹೈ ಸೆಕ್ಯೂರಿಟಿ ರಿಜಿಸ್ಟ್ರೇಷನ್ ಪ್ಲೇಟ್ ಅಳವಡಿಕೆಗೆ ಸಮಯ ವಿಸ್ತರಣೆ : ಸಚಿವ ರಾಮಲಿಂಗಾ ರೆಡ್ಡಿ 

Facebook
Twitter
Telegram
WhatsApp

 

ಬೆಂಗಳೂರು: ಕಳೆದ ಕೆಲವು ದಿನಗಳಿಂದ ವಾಹನ ಮಾಲೀಕರು ಸುಸ್ತಾಗಿ ಹೋಗಿದ್ದರು. ತಮ್ಮ ತಮ್ಮ ಗಾಡಿಗಳಿಗೆ ಹೈ ಸೆಕ್ಯೂರಿಟಿ ರಿಜಿಸ್ಟ್ರೇಷನ್ ನಂಬರ್ ಪ್ಲೇಟ್ ಹಾಕಿಸಲು, ಆನ್ಲೈನ್ ಮೊರೆ ಹೋಗಿದ್ದರು. ಕೊನೆಯ ದಿನ ಸಮೀಪಿಸಿದ್ದ ಕಾರಣ, ಈ ನಂಬರ್ ಪ್ಲೇಟ್ ಹಾಕಿಸಲು ಒದ್ದಾಡುತ್ತಿದ್ದರು. ಇದೀಗ ಕೊಂಚ ರಿಲ್ಯಾಕ್ಸ್ ಆಗುವಂತ ಘೋಷಣೆಯನ್ನು ಸರ್ಕಾರ ಮಾಡಿದೆ.

ವಿಧಾನ ಪರಿಷತ್ ಕಲಾಪದಲ್ಲಿ ಈ ವಿಚಾರವಾಗಿ ಚರ್ಚೆ ನಡೆದಿದೆ. ಕಲಾಪದ ವೇಳೆ ಸದಸ್ಯ ಮಾದೇಗೌಡ ಈ ಬಗ್ಗೆ ಪ್ರಶ್ನೆ ಮಾಡಿದ್ದಾರೆ. ರಾಜ್ಯದಲ್ಲಿ ಒಟ್ಟು ಎರಡು ಕೋಟಿಗೂ ಅಧಿಕ ವಾಹನಗಳಿವೆ. ಹಳ್ಳಿಗಾಡಿನ ವಾಹನಗಳಿಗೂ ಹೆಚ್ ಎಸ್ ಆರ್ ಪಿ ನೇಮ್ ಪ್ಲೇಟ್ ಹಾಕಿಸಬೇಕಿದೆ. ಸರ್ಕಾರ ಇದಕ್ಕೆ ನೀಡಿರುವ ಗಡುವನ್ನು ವಿಸ್ತಾರ ಮಾಡಬೇಕಿದೆ. ಇದರ ಜೊತೆಗೆ ಆನ್ಲೈನ್ ನೋಂದಣಿ ಮಾಡಬೇಕಿರುವ ಕಾರಣ ಫೇಕ್ ವೆಬ್ಸೈಟ್ ಗಳ ಹಾವಳಿಯೂ ಹೆಚ್ಚಾಗಿದೆ. ಇದರ ಬಗ್ಗೆ ಸಾರಿಗೆ ಇಲಾಖೆ ಕ್ರಮ ತೆಗೆದುಕೊಳ್ಳಬೇಕಿದೆ ಎಂದು ಮನವಿ ಮಾಡಿದ್ದಾರೆ.

ಈ ವೇಳೆ ಈ ಪ್ರಶ್ನೆಗಳಿಗೆ ಉತ್ತರ ನೀಡಿರುವ ಸಾರಿಗೆ ಸಚುವ ರಾಮಲಿಂಗಾ ರೆಡ್ಡಿ, ಎಚ್ ಎಸ್ ಆರ್ ಪಿ ಪ್ಲೇಟ್ ಹಾಕಿಸಲು ಮೂರು ತಿಂಗಳುಗಳ ಕಾಲ ಗಡುವುದು ವಿಸ್ತರಣೆ ಮಾಡಲಾಗಿದೆ‌. ಫೇಕ್ ವೆಬ್ಸೈಟ್ ಗಳ ಬಗ್ಗೆಯೂ ಎಚ್ಚರವಹಿಸಲಾಗುವುದು. ಈ ಯೋಜನೆ ಪಾರದರ್ಶಕವಾಗಿದೆ ಎಂದಿದ್ದಾರೆ. ಈ ಮೂಲಕ ನಂಬರ್ ಪ್ಲೇಟ್ ಹಾಕಿಸಲು ಇನ್ನು ಮೂರು ತಿಂಗಳುಗಳ ಕಾಲ ಗಡುವು ವಿಸ್ತರಣೆಯಾಗಿದೆ. ಈ ಮೊದಲು ಫೆಬ್ರವರಿ 17 ಕೊನೆಯ ದಿನವಾಗಿತ್ತು. ಸರ್ವರ್ ಸಮಸ್ಯೆಯಿಂದ ಎಲ್ಲವೂ ನಿಧಾನವಾಗುತ್ತಿತ್ತಿ. ಈಗ ವಿಸ್ತರಣೆಯಾಗಿರುವುದು ನೆಮ್ಮದಿ ತಂದಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಇದೆಲ್ಲಾ ಮಾಡಿಸಿದ್ದು ಡಿಕೆಶಿ.. ನಾನು ಹೊರಗೆ ಬಂದ ದಿನ ಸರ್ಕಾರ ಪತನವಾಗುತ್ತೆ : ವಕೀಲ ದೇವರಾಜೇಗೌಡ ಶಾಕಿಂಗ್ ಹೇಳಿಕೆ..!

ಹಾಸನ: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಬಿಜೆಪಿ ನಾಯಕ, ವಕೀಲ ದೇವರಾಜೇಗೌಡರನ್ನು ಪೊಲೀಸರು ಅರೆಸ್ಟ್ ಮಾಡಿ, ತನಿಖೆ ಚುರುಕುಗೊಳಿಸಿದ್ದಾರೆ. ಎಸ್ಐಟಿ ಅಧಿಕಾರಿಗಳು ಇಂದು ಕೋರ್ಟ್ ಮುಂದೆ ದೇವರಾಜೇಗೌಡರನ್ನು ಹಾಜರುಪಡಿಸಿದ್ದರು. ಹೆಚ್ಚಿನ

ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಅಯೋಧ್ಯೆ ರಾಮಮಂದಿರವನ್ನು ಕೆಡವಲಿದೆ : ನರೇಂದ್ರ ಮೋದಿ

ಸುದ್ದಿಒನ್ : ದೇಶದಲ್ಲಿ ಲೋಕಸಭಾ ಚುನಾವಣಾ ಪ್ರಚಾರ ಜೋರಾಗಿದೆ. ಚುನಾವಣೆ ಅಂತಿಮ ಘಟ್ಟ ಸಮೀಪಿಸುತ್ತಿದ್ದಂತೆ ಆಡಳಿತಾರೂಢ ಮತ್ತು ಪ್ರತಿಪಕ್ಷಗಳು ಪರಸ್ಪರ ಟೀಕೆಗಳ ಮೂಲಕ ಪ್ರಚಾರದ ಕಾವನ್ನು ಮತ್ತಷ್ಟು ಹೆಚ್ಚಿಸಿದೆ. ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ್ದ

ಮೋದಿ ಬಗ್ಗೆ ಹೊಗಳಿದ್ದ ನಟಿ : ಹಿಗ್ಗಾಮುಗ್ಗಾ ಟ್ರೋಲ್ ಆದ ರಶ್ಮಿಕಾ ಮಂದಣ್ಣ..!

ದೇಶದಲ್ಲಿ ಲೋಕಸಭಾ ಚುನಾವಣೆ ನಡೆಯುತ್ತಿದೆ. ಹ್ಯಾಟ್ರಿಕ್ ಬಾರಿಸುವ ಕನಸು ಕಾಣುತ್ತಿದ್ದಾರೆ ಮೋದಿ. ಈ ಮಧ್ಯೆ ರಶ್ಮಿಕಾ ಮಂದಣ್ಣ ಮೋದಿಯವರ ಅಭಿವೃದ್ಧಿ ಬಗ್ಗೆ ಮಾತನಾಡಿದ್ದಾರೆ. ಈ ವಿಚಾರ ಚರ್ಚೆಗೆ ಬಂದಿದ್ದು, ಪರ-ವಿರೋಧ ಕೇಳಿ ಬರುತ್ತಿದೆ. ರಶ್ಮಿಕಾ

error: Content is protected !!