Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಪದ್ಮರಾಜ್ ಗೆ ಜಾಮೀನು : ಬಿಡಗಡೆಯಾಗುತ್ತಿದ್ದ ವಿಪಕ್ಷ ನಾಯಕ ಅಶೋಕ್ ವಿರುದ್ಧ ಆರೋಪ..!

---Advertisement---

ಬೆಂಗಳೂರು: ಮಾಜಿ ಶಾಸಕ ಗೋಪಾಲಯ್ಯ ಅವರಿಗೆ ಜೀವ ಬೆದರಿಕೆ ಹಾಕಿದ್ದ ಪದ್ಮರಾಜ್, ಜಾಮೀನು ಮೇಲೆ ಬಿಡುಗಡೆಯಾಗಿದ್ದಾರೆ. ಇಂದು ಬಂಧಿಸಿದ ಬಳಿಕ ಪೊಲೀಸರು, ಪದ್ಮರಾಜ್ ಅವರನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದರು. 39ನೇ ಎಸಿಎಂಎಂ ಕೋರ್ಟ್ ನಿಂದ ಜಾಮೀನು ಮಂಜೂರಾಗಿದೆ.

 

ಜಾಮೀನು ಪಡೆದು ಹೊರಗೆ ಬರುತ್ತಿದ್ದಂತೆ ಆರ್ ಅಶೋಕ ಅವರ ಮೇಲೆಯೂ ಒಂದು ಕೋಟಿ ರೂಪಾಯಿ ಆರೋಪ ಮಾಡಿದ್ದಾರೆ. ‘2010ರಲ್ಲಿ ಬಿಜೆಪಿ ನಾಯಕ ಆರ್ ಅಶೋಕ್, ನನ್ನನ್ನು ಮೇಯರ್ ಮಾಡುತ್ತೇನೆಂದು ನಂಬಿಸಿ ಒಂದು ಕೋಟಿ ರೂಪಾಯಿ ಹಣ ಪಡೆದಿದ್ದರು. ಆದರೆ ಇವತ್ತಿಗೂ ಮೇಯರ್ ಮಾಡಿಲ್ಲ ಎಂದಿದ್ದಾರೆ. ಇದೇ ವೇಳೆ ಗೋಪಾಲಯ್ಯ ಅವರಿಗೆ ಕೊಲೆ ಬೆದರಿಕೆ ಬಗ್ಗೆ ಮಾತನಾಡಿ, ಇದು ಸತ್ಯಕ್ಕೆ ದೂರವಾದ ಮಾತು. ಕೊಲೆ ಬೆದರಿಕೆ ಹಾಕುವಂತ ವ್ಯಕ್ತಿ ನಾನಲ್ಲ. ಮಂಜುನಾಥನ ಮೇಲೆ ಆಣೆ ನಾನು ಬೆದರಿಕೆ ಹಾಕಿಲ್ಲ. ದೇವರು ಅವರಿಗೆ ಒಳ್ಳೆಯದು ಮಾಡಲಿ. ಗುತ್ತಿಗೆ ಕೊಡಿಸುವ ವಿಚಾರಕ್ಕೆ 15 ಲಕ್ಷ ಹಣ ಕೊಟ್ಟಿದ್ದೆ. ಬಳಿಕ ಗುತ್ತಿಗೆ ಕೊಡಿಲಿಲ್ಲ. ಅದಕ್ಕೆ ಕಾಲ್ ಮಾಡಿದ್ದೆ. ಆಗ ಒಂದಿಷ್ಟು ಮಾತುಕತೆಗಳು ನಡೆದವು. ಆದರೆ ಯಾವುದೇ ರೀತಿಯ ಬೆದರಿಕೆಗಳನ್ನು ಹಾಕಿಲ್ಲ ಎಂದಿದ್ದಾರೆ.

ಮಧ್ಯರಾತ್ರಿ ಗೋಪಾಲಯ್ಯ ಅವರ ಫೋನ್ ಗೆ ಕರೆ ಮಾಡಿ, ಹಣ ಕೊಡದೆ ಹೋದರೆ ಸುಮ್ಮನೆ ಇರುವುದಿಲ್ಲ. ನಿನ್ನ ಜೀವಂತವಾಗಿ ಬಿಡುವುದಿಲ್ಲ. ತಾಕತ್ತಿದ್ದರೆ ನಮ್ಮ ಮನೆ ಬಳಿ ಎಂದು ಪದ್ಮರಾಜ್ ಜೀವ ಬೆದರಿಕೆ ಹಾಕಿದ್ದಾರೆಂದು ಮಾಜಿ ಸಚಿವ ಗೋಪಾಲಯ್ಯ ರಾತ್ರೋರಾತ್ರಿ ಪೊಲೀಸ್ ಠಾಣೆಗೆ ದೂರು ನೀಡಿದ್ದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment