Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ನಾಮಫಲಕಗಳಲ್ಲಿ ಕನ್ನಡ ಕಡ್ಡಾಯಕ್ಕೆ ಅಂಗೀಕಾರ : ದಂಡ ವಿಧಿಸುವಂತೆ ಸೂಚನೆ

---Advertisement---

 

 

ಬೆಂಗಳೂರು: ವಾಣಿಜ್ಯ ಮಳಿಗೆಗಳು ಸೇರಿದಂತೆ ಅಂಗಡಿ, ಮುಂಗಟ್ಟುಗಳ ಮುಂದಿನ ಬೋರ್ಡ್ ಗಳಲ್ಲಿ ಕನ್ನಡ ಕಡ್ಡಾಯಕ್ಕೆ ಕನ್ನಡಪರ ಸಂಘಟನೆಗಳು ಹೋರಾಡುತ್ತಿವೆ. ಕಳೆದ ಕೆಲದಿನಗಳ ಹಿಂದೆ ಕನ್ನಡಪರ ಸಂಘಟನೆಗಳು ದೊಡ್ಡ ಮಟ್ಟದಲ್ಲಿ ಪ್ರತಿಭಟನೆಯನ್ನೇ ಮಾಡಿದ್ದವು. ಆದರೆ ಇದರಿಂದ ಅರೆಸ್ಟ್ ಕೂಡ ಆಗಿದ್ದಾರೆ. ಈ ಸಂಬಂಧ ಕನ್ನಡ ಕಡ್ಡಾಯದ ವಿಚಾರದ ಪ್ರಸ್ತಾವನೆಯನ್ನು ರಾಜ್ಯಪಾಲರ ಬಳಿಗೆ ಕಳುಹಿಸಿ, ಅಂಗೀಕಾರ ಮಾಡಿಸಿಕೊಳ್ಳಲು ಪ್ರಯತ್ನ ನಡೆಸಿತ್ತು. ಆದರೆ ರಾಜ್ಯಪಾಲರು ಅದನ್ನು ಸದನದಲ್ಲಿ ಮಂಡಿಸಿ, ಅನುಮತಿ ಪಡೆಯಿರಿ ಎಂದೇ ಹೇಳಿದ್ದರು. ಇದೀಗ ಇಂದಿನ ಸದನದಲ್ಲಿ ಅಂಗೀಕಾರ ಮಾಡಲಾಗಿದೆ.

ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ತಿದ್ದುಪಡಿ ವಿಧೇಯಕದ ಮೇಲಿನ ಚರ್ಚೆ ವೇಳೆ, ಕನ್ನಡ ಸಂಸ್ಕೃತಿ ಸಚಿವ ಶಿವರಾಜ್ ತಂಗಡಗಿ ಮಾತನಾಡಿದ್ದು, ಅಂಗಡಿ, ಮುಂಗಟ್ಟು ಎಲ್ಲಾ ಕಡೆ ಕನ್ನಡ ಕಡ್ಡಾಯಗೊಳಿಸಬೇಕು. ನಾಮ ಫಲಕಗಳಲ್ಲಿ ಶೇಕಡಾ 60 ರಷ್ಟು ಕನ್ನಡ ಇರಬೇಕು. ಈ ಬಗ್ಗೆ ವಿಧೇಯಕವನ್ನು ನಾವೂ ತಂದಿದ್ದೇವೆ. ಈ ತಿದ್ದುಪಡಿಯನ್ನು ಅಂಗೀಕರಿಸಬೇಕೆಂದು ಸಚಿವ ಶಿವರಾಜ್ ತಂಗಡಗಿ ಹೇಳಿದ್ದಾರೆ.

ಈ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ವಿಪಕ್ಷ ನಾಯಕ ಆರ್ ಅಶೋಕ್, ಕನ್ನಡ ಕಡ್ಡಾಯ ಎಂದು ಕೇಳಿ ಕೇಳಿ ಸಾಕಾಗಿದೆ. ಆದರೆ ಕನ್ನಡ ಕಡ್ಡಾಯ ಅನುಷ್ಠಾನವೂ ಆಗಬೇಕು. ಮಾಲ್ ಮಾಲೀಕರು ಕನ್ನಡ ಕಡ್ಡಾಯ ನೋಟೀಸ್ ಗೆ ತಡೆ ತರುತ್ತಾರೆ. ಮೊನ್ನೆ ಹೋರಾಟದ ವೇಳೆ ಏನೆಲ್ಲಾ ಆಗಿದೆ ಎಂಬುದನ್ನು ನೋಡಿದ್ದೇವೆ. ಸರ್ಕಾರ ಮಾಲ್ ಗಳನ್ನು ಮುಚ್ಚಬೇಕೆಂಬ ಹೋರಾಟ ನಡೆಯಿತು. ಆದರೆ ಐದೇ ನಿಮಿಷದಲ್ಲಿ ಆ ವಿಚಾರಕ್ಕೆ ತಡೆ ತಂದರು. ಹೀಗಾಗಿ ಇದರಲ್ಲಿ ದಂಡವನ್ನು ವಿಧಿಸುವ ಅಂಶವನ್ನು ತರಬೇಕೆಂದು ಆರ್ ಅಶೋಕ್ ಒತ್ತಾಯಿಸಿದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment