Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ರಾಜ್ಯಸಭಾ ಚುನಾವಣೆ : ಅಡ್ಡಮತದಾನದ ಆತಂಕದಲ್ಲಿ ಕಾಂಗ್ರೆಸ್..!

Facebook
Twitter
Telegram
WhatsApp

 

ಬೆಂಗಳೂರು: ರಾಜ್ಯಸಭಾ ಚುನಾವಣೆಗೆ ನಾಮಪತ್ರ ಸಲ್ಲಿಕೆಗೆ ಇಂದು ಕೊನೆಯ ದಿನವಾಗಿದೆ. ರಾಜ್ಯದಲ್ಲಿ ಕಾಂಗ್ರೆಸ್ ಸ್ಪಷ್ಟಬಹುಮತ ಹೊಂದಿದೆ. ಆದರೂ ಇಂದಿನ ಬೆಳವಣಿಗೆ ಕಾಂಗ್ರೆಸ್ ಗೆ ಅಡ್ಡಮತದಾನದ ಆತಂಕ ಶುರುವಾಗಿದೆ. ಫೆಬ್ರವರಿ 27ರಂದು ರಾಜ್ಯಸಭೆ ಚುನಾವಣೆ ನಡೆಯಲಿದ್ದು, ಈಗ ಶಾಸಕರು ಅಡ್ಡ ಮತದಾನ ಮಾಡಲಿದ್ದಾರೆಯೇ ಎಂಬ ಅನುಮಾನ ಶುರುವಾಗಿದೆ.

ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಪಕ್ಷ ಮೈತ್ರಿ ಮಾಡಿಕೊಂಡಿದೆ. ಈ ಮೈತ್ರಿ ಮೂಲಕ ಚುನಾವಣೆ ಎದುರಿಸಲಿದೆ. ಇದೀಗ ರಾಜ್ಯಸಭಾ ಚುನಾವಣೆಯಲ್ಲೂ ಮೈತ್ರಿ ಮುಂದುವರೆಸಿದೆ. ಕಡೆ ಗಳಿಗೆಯಲ್ಲಿ ಮೈತ್ರಿ ಅಭ್ಯರ್ಥಿಯನ್ನು ಕಣಕ್ಕೆ ಇಳಿಸಿದೆ. ಐದನೇ ಅಭ್ಯರ್ಥಿಯಾಗಿ ರಾಜ್ಯಸಭೆಯ ಮಾಜಿ ಸದಸ್ಯ ಕುಪೇಂದ್ರ ರೆಡ್ಡಿ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.

ಬಿಜೆಪಿ ವಿಧಾನಸಭೆಯಲ್ಲಿ 66 ಸದಸ್ಯ ಬಲವನ್ನು ಹೊಂದಿದೆ. ಹೀಗಾಗಿ ಒಂದು ಸ್ಥಾನವನ್ನು ಸುಲಭವಾಗಿ ಗೆಲ್ಲಬಹುದಾಗಿದೆ. ಬಿಜೆಪಿ-ಜೆಡಿಎಸ್ ಮೈತ್ರಿ ಸದಸ್ಯ ಕುಪೇಂದ್ರ ರೆಡ್ಡಿ ಅವರನ್ನು ಕಣಕ್ಕೆ ಇಳಿಸಿದ್ದು, ಹೊಸ ಲೆಕ್ಕಚಾರ ಶುರುವಾಗಿದೆ. ಬಿಜೆಪಿಗೆ ತನ್ನ ಅಭ್ಯರ್ಥಿ ಗೆಲ್ಲಿಸಿದರು 20 ಮತಗಳು ಉಳಿಯುತ್ತವೆ. ಜೆಡಿಎಸ್ 19 ಶಾಸಕರು ಇದ್ದಾರೆ. ನಾಲ್ವರು ಪಕ್ಷೇತರರು ಕುಪೇಂದ್ರ ರೆಡ್ಡಿ ಬೆಂಬಲಿಸಿದರು.

ಕಾಂಗ್ರೆಸ್ ನ ಐದು ಶಾಸಕರು ಅಡ್ಡಮತದಾನದ ಮಾಡಿದರೆ ಮೈತ್ರಿಕೂಟದ ಅಭ್ಯರ್ಥಿ ಗೆಲುವು ಖಚಿತ. ಇದೇ ಕಾರಣಕ್ಕೆ ಚುನಾವಣೆ ತೀವ್ರ ಕುತೂಹಲ ಮೂಡಿಸಿದೆ. ಈ ಅಡ್ಡಮತದಾನವನ್ನು ತಡೆಯುವುದಕ್ಕೆ ಕಾಂಗ್ರೆಸ್ ತಮ್ಮ ಶಾಸಕರಿಗೆ ವಿಪ್ ಜಾರಿ ಮಾಡುವ ಸಾಧ್ಯತೆ ಇದೆ. ಇದರ ಜೊತೆಗೆ ಶಾಸಕರನ್ನು ರೆಸಾರ್ಟ್ ಗೆ ಕರೆದುಕೊಂಡು ಹೋಗುವ ಚಿಂತನೆಯನ್ನು ನಡೆಸಿದೆ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಮುರುಘಾಮಠದಲ್ಲಿ ಬಸವೇಶ್ವರರ ಜಯಂತ್ಯೋತ್ಸವ ಆಚರಣೆ | ಪ್ರತಿಯೊಬ್ಬರ ಮನೆಯಲ್ಲಿ ಬಸವಧರ್ಮ ಗ್ರಂಥ ಇರಬೇಕು : ಶ್ರೀ ಬಸವನವಲಿಂಗ ಸ್ವಾಮೀಜಿ

ಸುದ್ದಿಒನ್, ಚಿತ್ರದುರ್ಗ, ಮೇ. 10 : ಬಸವಾದಿ ಪ್ರಮಥರು ಜೀವನೋದ್ಧಾರಕ್ಕಾಗಿ ಕಾಯಕ, ಆತ್ಮೋದ್ಧಾರಕ್ಕಾಗಿ ಶಿವಯೋಗ, ಜೀವನ್ಮುಕ್ತಿಗಾಗಿ ದಾಸೋಹವನ್ನು ಮಾಡಿದರು ಎಂದು ಶಿವಮೊಗ್ಗ ಪ್ರಭುದೇವ ಜ್ಞಾನಕೇಂದ್ರದ ಶ್ರೀ ಬಸವನವಲಿಂಗ ಶರಣರು ನುಡಿದರು. ಶ್ರೀ ಮುರುಘರಾಜೇಂದ್ರ ಬೃಹನ್ಮಠದಲ್ಲಿ

ಎಲ್ಲರ ಹೃದಯದಲ್ಲಿ ಜಗಜ್ಯೋತಿ ಬಸವೇಶ್ವರ ಅನಾವರಣವಾಗಲಿ : ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಅಭಿಮತ

Let Jagajyoti Basaveshwara be unveiled in everyone’s heart: ADC BT Kumaraswamy ಚಿತ್ರದುರ್ಗ‌.  ಮೇ.10:   ಸರ್ಕಾರದ ಆದೇಶದಂತೆ ಎಲ್ಲಾ ಕಚೇರಿಗಳಲ್ಲಿ ಬಸವೇಶ್ವರ ಭಾವಚಿತ್ರವನ್ನು ಅನಾವರಣಗೊಳಿಸಲಾಗಿದೆ. ನಿಜವಾಗಿಯೂ ನಮ್ಮೆಲ್ಲರ ಹೃದಯದಲ್ಲಿ ಜಗಜ್ಯೋತಿ ಬಸವೇಶ್ವರರು

T20 ವಿಶ್ವಕಪ್ ಗೂ ಮುನ್ನವೇ ಕೋಚ್ ರಾಹುಲ್ ದ್ರಾವಿಡ್ ಅವಧಿ ಮುಕ್ತಾಯ.. ಮುಂದೇನು ಕಥೆ..?

ಸದ್ಯಕ್ಕೆ ಐಪಿಎಲ್ ನಡೆಯುತ್ತಿದೆ. ಈ ಐಪಿಎಲ್ ಪಂದ್ಯಗಳು ಮುಗಿಯುತ್ತಿದ್ದಂತೆ ಟಿ20 ವಿಶ್ವಕಪ್ ಆರಂಭವಾಗಲಿದೆ‌. ಜೂನ್ 2ರಿಂದ ವಿಶ್ವಕಪ್ ಆರಂಭವಾಗಲಿದೆ. ಆದರೆ ಅದಕ್ಕೂ ಮುನ್ನವೇ ಟೀಂ ಇಂಡಿಯಾಕ್ಕೆ ಆಘಾತಕಾರಿ ಸುದ್ದಿಯೊಂದು ಸಿಕ್ಕಿದೆ. ಬಿಸಿಸಿಐ ನಿಂದ ಕೋಚ್

error: Content is protected !!