Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ರಾಜ್ಯಸಭಾ ಚುನಾವಣೆ : ಅಡ್ಡಮತದಾನದ ಆತಂಕದಲ್ಲಿ ಕಾಂಗ್ರೆಸ್..!

---Advertisement---

 

ಬೆಂಗಳೂರು: ರಾಜ್ಯಸಭಾ ಚುನಾವಣೆಗೆ ನಾಮಪತ್ರ ಸಲ್ಲಿಕೆಗೆ ಇಂದು ಕೊನೆಯ ದಿನವಾಗಿದೆ. ರಾಜ್ಯದಲ್ಲಿ ಕಾಂಗ್ರೆಸ್ ಸ್ಪಷ್ಟಬಹುಮತ ಹೊಂದಿದೆ. ಆದರೂ ಇಂದಿನ ಬೆಳವಣಿಗೆ ಕಾಂಗ್ರೆಸ್ ಗೆ ಅಡ್ಡಮತದಾನದ ಆತಂಕ ಶುರುವಾಗಿದೆ. ಫೆಬ್ರವರಿ 27ರಂದು ರಾಜ್ಯಸಭೆ ಚುನಾವಣೆ ನಡೆಯಲಿದ್ದು, ಈಗ ಶಾಸಕರು ಅಡ್ಡ ಮತದಾನ ಮಾಡಲಿದ್ದಾರೆಯೇ ಎಂಬ ಅನುಮಾನ ಶುರುವಾಗಿದೆ.

ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಪಕ್ಷ ಮೈತ್ರಿ ಮಾಡಿಕೊಂಡಿದೆ. ಈ ಮೈತ್ರಿ ಮೂಲಕ ಚುನಾವಣೆ ಎದುರಿಸಲಿದೆ. ಇದೀಗ ರಾಜ್ಯಸಭಾ ಚುನಾವಣೆಯಲ್ಲೂ ಮೈತ್ರಿ ಮುಂದುವರೆಸಿದೆ. ಕಡೆ ಗಳಿಗೆಯಲ್ಲಿ ಮೈತ್ರಿ ಅಭ್ಯರ್ಥಿಯನ್ನು ಕಣಕ್ಕೆ ಇಳಿಸಿದೆ. ಐದನೇ ಅಭ್ಯರ್ಥಿಯಾಗಿ ರಾಜ್ಯಸಭೆಯ ಮಾಜಿ ಸದಸ್ಯ ಕುಪೇಂದ್ರ ರೆಡ್ಡಿ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.

ಬಿಜೆಪಿ ವಿಧಾನಸಭೆಯಲ್ಲಿ 66 ಸದಸ್ಯ ಬಲವನ್ನು ಹೊಂದಿದೆ. ಹೀಗಾಗಿ ಒಂದು ಸ್ಥಾನವನ್ನು ಸುಲಭವಾಗಿ ಗೆಲ್ಲಬಹುದಾಗಿದೆ. ಬಿಜೆಪಿ-ಜೆಡಿಎಸ್ ಮೈತ್ರಿ ಸದಸ್ಯ ಕುಪೇಂದ್ರ ರೆಡ್ಡಿ ಅವರನ್ನು ಕಣಕ್ಕೆ ಇಳಿಸಿದ್ದು, ಹೊಸ ಲೆಕ್ಕಚಾರ ಶುರುವಾಗಿದೆ. ಬಿಜೆಪಿಗೆ ತನ್ನ ಅಭ್ಯರ್ಥಿ ಗೆಲ್ಲಿಸಿದರು 20 ಮತಗಳು ಉಳಿಯುತ್ತವೆ. ಜೆಡಿಎಸ್ 19 ಶಾಸಕರು ಇದ್ದಾರೆ. ನಾಲ್ವರು ಪಕ್ಷೇತರರು ಕುಪೇಂದ್ರ ರೆಡ್ಡಿ ಬೆಂಬಲಿಸಿದರು.

ಕಾಂಗ್ರೆಸ್ ನ ಐದು ಶಾಸಕರು ಅಡ್ಡಮತದಾನದ ಮಾಡಿದರೆ ಮೈತ್ರಿಕೂಟದ ಅಭ್ಯರ್ಥಿ ಗೆಲುವು ಖಚಿತ. ಇದೇ ಕಾರಣಕ್ಕೆ ಚುನಾವಣೆ ತೀವ್ರ ಕುತೂಹಲ ಮೂಡಿಸಿದೆ. ಈ ಅಡ್ಡಮತದಾನವನ್ನು ತಡೆಯುವುದಕ್ಕೆ ಕಾಂಗ್ರೆಸ್ ತಮ್ಮ ಶಾಸಕರಿಗೆ ವಿಪ್ ಜಾರಿ ಮಾಡುವ ಸಾಧ್ಯತೆ ಇದೆ. ಇದರ ಜೊತೆಗೆ ಶಾಸಕರನ್ನು ರೆಸಾರ್ಟ್ ಗೆ ಕರೆದುಕೊಂಡು ಹೋಗುವ ಚಿಂತನೆಯನ್ನು ನಡೆಸಿದೆ ಎಂದಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...