Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಹಬ್ಬ ರದ್ದು ಮಾಡಿ‌ ಇಡೀ ಗ್ರಾಮವೇ ಅಪ್ಪುಗೆ ಶ್ರದ್ಧಾಂಜಲಿ ಸಲ್ಲಿಸಿದೆ

Facebook
Twitter
Telegram
WhatsApp

ಹಾವೇರಿ: ಪುನೀತ್ ರಾಜ್ ಕುಮಾರ್ ಅಂದ್ರೆ ಒಂದು ಎರಡು ವರ್ಗಕ್ಕಲ್ಲ. ಸಿನಿಮಾ ಪ್ರೀತಿಸುವ ಎಲ್ಲಾ ವರ್ಗದವರಿಗೆ ಅಪ್ಪು ಅಂದ್ರೆ ಪ್ರೀತಿ. ಹೀಗಿರುವಾಗ ಅಪ್ಪು ಇನ್ನಿಲ್ಲ ಅಂದಾಗ ಅದನ್ನ ಸಹಿಸುವುದಾದರೂ ಹೇಗೆ. ಹತ್ರತ್ರ 25 ಲಕ್ಷ ಜನ ಅಪ್ಪು ಅಂತಿಮ ದರ್ಶನ ಪಡೆದಿದ್ದಾರೆ. ಇನ್ನು ಅದೆಷ್ಟೋ ಜನಕ್ಕೆ ಅಂತಿಮ ದರ್ಶನ ಸಿಗಲೇ ಇಲ. ಹೀಗಿರುವಾಗ ಈಗಲೂ ಸಮಾಧಿ ಬಳಿ ತೆರಳಿ ದರ್ಶನ ಪಡೆದು ಗೋಳಾಡುತ್ತಿದ್ದಾರೆ. ಅಲ್ಲೊಂದು ಗ್ರಾಮ ಅಪ್ಪುಗೆ ಶ್ರದ್ಧಾಂಜಲಿ ಸಲ್ಲಿಸಿದೆ.

ಹಾವೇರಿ ತಾಲೂಕಿನ ಕುಳೇನೂರು ಗ್ರಾಮದಲ್ಲಿ ಅಪ್ಪು ಅಗಲಿಕೆ ನೋವು ಮನೆ ಮಾಡಿದೆ. ಇದ್ದ ಹಬ್ಬವನ್ನ ಕೈ ಬಿಟ್ಟು ಇಡೀ ಗ್ರಾಮ ಶ್ರದ್ಧಾಂಜಲಿ ಸಲ್ಲಿಸಿದೆ. ಪ್ರತಿ ವರ್ಷ ಈ ಊರಲ್ಲಿ ಹೋರಿ ಬೆದರಿಸುವ ಹಬ್ಬವನ್ನ ವಿಜೃಂಭಣೆಯಿಂದ ಆಚರಿಸಿಕೊಂಡು ಬಂದಿದ್ದರು. ಆದ್ರೆ ಅಪ್ಪು ಅಗಲಿಕೆಯಿಂದ ನೊಂದ ಗ್ರಾಮಸ್ಥರು, ಹಬ್ಬ ಬಿಟ್ಟು ಶ್ರದ್ಧಾಂಜಲಿ ಸಲ್ಲಿಸಿದ್ದಾರೆ.

ಹತ್ತು ನಿಮಿಷಗಳ ಮೌನಾಚರಣೆ ಮಾಡಿ, ಅಪ್ಪು ಆತ್ಮಕ್ಕೆ ಶಾಂತಿ ಸಿಗಲೆಂದು ಬೇಡಿಕೊಂಡಿದ್ದಾರೆ. ಬಸವೇಶ್ವರ ದೇವಾಸ್ಥಾನದಲ್ಲಿ ಅಪ್ಪು ಫೋಟೋ ಇಟ್ಟು ಪೂಜೆ ಸಲ್ಲಿಸಿದ್ದಾರೆ. ಎಲ್ಲರ ಬಾಯಲ್ಲೂ ಅಪ್ಪು ಅಪ್ಪು ಎಂಬ ಘೋಷ ವಾಕ್ಯ ಜೋರಾಗಿ ಕೇಳಿ ಬರ್ತಾ ಇತ್ತು. ಇದು ಅವರ ಅಭಿಮಾನವನ್ನ ಎತ್ತಿ ತೋರಿಸುತ್ತಿತ್ತು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಗಾಳಿ ಮಳೆಗೆ ಕರೆಂಟ್ ಹೋದ್ರೆ ಈ ನಂಬರ್ ಗೆ ವಾಟ್ಸಾಪ್ ಮಾಡಿ

ಬೆಂಗಳೂರು: ಇನ್ನು ಮಳೆಗಾಲ ಶುರುವಾಯ್ತು. ಈ ಮಳೆಗಾಲ ಬಂತು ಅಂದ್ರೆ ಸಾಕು ಎಲ್ಲೆಡೆ ಮರಗಿಡಗಳು ಬೀಳುತ್ತವೆ, ಪವರ್ ಕಟ್ ಸಮಸ್ಯೆಗಳು ಕೂಡ ಕಾಡುತ್ತವೆ. ಈ ವೇಳೆ ಬೆಸ್ಕಾಂನವರು ಜನರ ಕೈಗೆ ಸಿಗುವುದು ಕಷ್ಟವಾಗಿದೆ. ಆದರೆ

ಹಣ ಉಳಿತಾಯಕ್ಕೆ RD ಅಥವಾ FD.. ಯಾವುದು ಬೆಟರ್..?

ಮನುಷ್ಯನ ಈಗಿನ ಜೀವನಶೈಲಿಯಿಂದ ಹಣದ ಅವಶ್ಯಕತೆ ಬಹಳ ಇದೆ. ಬೆಲೆ ಏರಿಕೆಯ ನಡುವೆ ಮುಂದಿನ ಜೀವನಕ್ಕಾಗಿ ಹಣ ಉಳಿಸಲೇಬೇಕಾಗಿದೆ‌. ಆದರೆ ಹಣ ಉಳಿಕೆಗೆ ಅಥವಾ ಇರುವ ಹಣಕ್ಕೆ ಬ್ಯಾಂಕ್ ನಲ್ಲಿ ಯಾವ ಮಾರ್ಗವನ್ನು ಬಳಸಬೇಕೆಂಬುದು

ರೇವಣ್ಣ ಜಾಮೀನು ಅರ್ಜಿ ಇಂದು ವಿಚಾರಣೆ : ಅನಾರೋಗ್ಯದಿಂದ ಆಸ್ಪತ್ರೆಯಲ್ಲಿರುವ ರೇವಣ್ಣಗೆ ಜೈಲಾ..? ಬೇಲಾ..?

ಬೆಂಗಳೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಿಳೆಯ ಕಿಡ್ನ್ಯಾಪ್ ಕೇಸಲ್ಲಿ ಮಾಜಿ ಸಚಿವ ಹೆಚ್ ಡಿ ರೇವಣ್ಣ ಅವರನ್ನು ಬಂಧಿಸಲಾಗಿದೆ. 8ನೇ ತಾರೀಖಿನ ತನಕವೂ ವಶಕ್ಕೆ ಪಡೆದಿದ್ದರು. ಆದರೆ ಇಂದು ಅವರ

error: Content is protected !!