ಸುದ್ದಿಒನ್, ಹಿರಿಯೂರು, ಫೆಬ್ರವರಿ.16 : ತಾಲ್ಲೂಕಿನ ಹರಿಯಬ್ಬೆ ಗ್ರಾಮದ ಭಾರತಮಾತಾ ಶಾಲಾ ಸಮೀಪ ಯಾವುದೋ ಅಪರಿಚಿತ ಕಾರೊಂದು ಅಪಘಾತಪಡಿಸಿದ್ದರಿಂದ 55ದಿಂದ 60 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ.
ಅಪಘಾತದ ಬಗ್ಗೆ ಅಬ್ಬಿನಹೊಳೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ. ಮೃತನು ಅಪರಿಚಿತ ಗಂಡ್ಸಾಗಿದ್ದು, ಹೆಸರು ವಿಳಾಸ ಮತ್ತು ವಾರಸುದಾರರು ಬಂದಿರುವುದಿಲ್ಲ. ಹಾಗಾಗಿ ಮೃತನ ಗುರುತು ಪತ್ತೆಯಾಗಿರುವುದಿಲ್ಲ. ಮೃತ ವ್ಯಕ್ತಿಯು ದುಂಡು ಮುಖ, ಗೋದಿ ಮೈಬಣ್ಣ ಬಿಳಿ ಕುರುಚಲು ಗಡ್ಡವಿರುತ್ತದೆ.
ತುಂಬು ತೋಳಿನ ಬಿಳಿ ಅಂಗಿ, ಬಿಳಿ ಬನಿಯನ್ ನೀಲಿ ಮತ್ತು ಕಾಫಿ ಬಣ್ಣದ ಚೌಕುಳಿಯ ಪಂಚೆ, ಆಕಾಶ ನೀಲಿ ಬಿಳಿ ಹಾಗೂ ಕಪ್ಪುಗೆರೆಯುಳ್ಳ ಟವಲ್, ಕಂದು ಬಣ್ಣದ ಡ್ರಾಯರ್ (ಚಡ್ಡಿ) ಧರಿಸಿರುತ್ತಾರೆ. ಪ್ರಕರಣದಲ್ಲಿ ವರಸುದಾರರ ಗುರುತು ಕಂಡಲ್ಲಿ ಐಮಂಗಳ ವೃತ್ತ ನಿರೀಕ್ಷಕರು 9480 80313 ಹಾಗೂ ಚಿತ್ರದುರ್ಗ ಕಂಟ್ರೋಲ್ ರೂಂ 9480803100 ನಂಬರ್ ಗೆ ಕರೆ ಮಾಡಿ ಎಂದು ಅಬ್ಬಿನಹೊಳೆ ಪೊಲೀಸ್ ಠಾಣೆ ಪಿಎಸ್ಐ ಬಾಹುಬಲಿ ಪಡನಾಡ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.


















