Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಏಪ್ರಿಲ್ ತಿಂಗಳಿಂದ ಹೊಸ ರೇಷನ್ ಕಾರ್ಡ್ ವಿತರಣೆ : ಸಚಿವ ಕೆ.ಹೆಚ್. ಮುನಿಯಪ್ಪ

Facebook
Twitter
Telegram
WhatsApp

 

ಬೆಂಗಳೂರು: ರೇಷನ್ ಕಾರ್ಡ್ ಗಾಗಿ ಎಷ್ಟೋ ಲಕ್ಷ ಜನ ಅರ್ಜಿ ಸಲ್ಲಿಕೆ ಮಾಡುತ್ತಿರುತ್ತಾರೆ. ಆದರೆ ಎಲ್ಲರಿಗೂ ರೇಷನ್ ಕಾರ್ಡ್ ಸಿಕ್ಕಿಲ್ಲ. ಇದೀಗ ಆಹಾರ ಸಚಿವ ಕೆ ಎಚ್ ಮುನಿಯಪ್ಪ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಏಪ್ರಿಲ್ ಒಂದರಿಂದ ಹೊಸ ರೇಷನ್ ಕಾರ್ಡ್ ಗಳನ್ನು ವಿತರಣೆ ಮಾಡಲಾಗುವುದು ಎಂದಿದ್ದಾರೆ. ಈ ಮೂಲಕ ಹೊಸ ರೇಷನ್ ಕಾರ್ಡ್ ಗಾಗಿ ಕಾಯುತ್ತಿದ್ದವರಿಗೆ ಸರ್ಕಾರ ಸಂತದ ಸುದ್ದಿ‌ ನೀಡಿದೆ.

 

ಆರೋಗ್ಯ ತುರ್ತು ಕಾರಣಕ್ಕೆ 744 ಜನರಿಗೆ ಬಿಪಿಎಲ್ ಕಾರ್ಡ್ ನೀಡಲಾಗಿತ್ತು. ಆರೋಗ್ಯ ಸಮಸ್ಯೆಯ ಅರ್ಜಿ ಸಲ್ಲಿಸಿದವರಿಗೆ ಮಾತ್ರ ಕಾರ್ಡ್ ವಿತರಣೆ ಮಾಡಲಾಗಿತ್ತು. ಹೊಸ ಪಡಿತರ ಚೀಟಿಗಾಗಿ ಇಲ್ಲಿಯವರೆಗೂ 2.95 ಲಕ್ಷ ಅರ್ಜಿ ಸಲ್ಲಿಕೆಯಾಗಿರುವುದು ಇನ್ನೂ ಬಾಕಿ ಉಳಿದಿದೆ. ಕಾಂಗ್ರೆಸ್ ಸರ್ಕಾರ ಇಲ್ಲಿಯವರೆಗೂ 57 ಸಾವಿರ ಹೊಸ ಕಾರ್ಡ್ ಗಳನ್ನು ವಿತರಣೆ ಮಾಡಿದೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದ ಮೇಲೆ ಐದು ಗ್ಯಾರಂಟಿಗಳನ್ನು ಚಾಲ್ತಿಗೆ ತಂದಿದೆ. ಗೃಹಲಕ್ಷ್ಮೀ ಹಾಗೂ ಅನ್ನಭಾಗ್ಯ ಯೋಜನೆಯ ಲಾಭ ಪಡೆಯುವವರು ರೇಷನ್ ಕಾರ್ಡ್ ಹೊಂದಿರಲೇಬೇಕು. ಆದರೆ ರೇಷನ್ ಕಾರ್ಡ್ ಸಿಗದೆ ಕೆಲವರು ಪರದಾಡುವಂತಾಗಿದೆ. ಹೀಗಾಗಿ ಏಪ್ರಿಲ್ ಒಂದರಿಂದ ಹೊಸ ಕಾರ್ಡ್ ಕೊಡಲು ನಿರ್ಧಾರ ಮಾಡಲಾಗಿದೆ.

 

ಹಲವು ತಿಂಗಳಿನಿಂದ ಕೂಡ ಹೊಸ ರೇಷನ್ ಕಾರ್ಡ್ ವಿತರಣೆ ಮಾಡಿ ಎಂಬ ಬೇಡಿಕೆ ಇತ್ತು‌. ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಕೆ ಮಾಡುವುದು ಕಳೆದ ಒಂದು ವರ್ಷದ ಹಿಂದೆ ಸ್ಥಗಿತಗೊಂಡಿತ್ತು. ವಿಧಾನಸಭಾ ಚುನಾವಣೆ ಬಳಿಕ ಸ್ಥಗಿತಗೊಳಿಸಲಾಗಿತ್ತು. ಇದೀಗ ಮತ್ತೆ ಶುರುವಾಗುತ್ತಿರುವುದು ಹಲವರಿಗೆ ಸಂತಸ ತಂದಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಹೂವಿನ ಹಡಗಲಿ | ಬೂದನೂರಿನಲ್ಲಿ ವಿಜೃಂಭಣೆಯಿಂದ ಜರುಗಿದ ಶ್ರೀ ವೀ­ರಭದ್ರೇಶ್ವರ ಜಾತ್ರೆ

ಸುದ್ದಿಒನ್, ವಿಜಯನಗರ, ಹೂವಿನ ಹಡಗಲಿ, ಮೇ. 09  : ತಾಲ್ಲೂಕಿನ ಬೂದನೂರು ಗ್ರಾಮದಲ್ಲಿ ಗುರುವಾರ ಸಂಜೆ 5 ಗಂಟೆಗೆ ವೀ­ರಭದ್ರೇಶ್ವರ ಜಾತ್ರಾ ಮಹೋತ್ಸವ ಅಂಗವಾಗಿ ಮಹಾರಥೋತ್ಸವ ಅನೇಕ ಭಕ್ತ ಸಮೂಹದ ನಡುವೆ ವಿಜೃಂಭಣೆಯಿಂದ ಜರುಗಿತು.

ನಾಳೆಯಿಂದ ಮೇ.17ರವರೆಗೂ ಎಲ್ಲಾ ಜಿಲ್ಲೆಗಳಲ್ಲೂ ಮಳೆಯ ಅಬ್ಬರ..!

ಕಳೆದ ಮೂರ್ನಾಲ್ಕು ದಿನದಿಂದ ವರುಣರಾಯನ ದರ್ಶನವಾಗುತ್ತಿದೆ. ಆದರೂ ಕೆಲವೊಂದು ಕಡೆ ಬಿಸಿ ಗಾಳಿಯ ಅನುಭವ ಮಾತ್ರ ಕಡಿಮೆಯಾಗಿಲ್ಲ. ಇಂದು ಸಂಜೆ ವೇಳೆಗೆ ಬೆಂಗಳೂರು ಸೇರಿದಂತೆ ಹಲವೆಡೆ ಜೋರು ಮಳೆಯಾಗಿದೆ. ಇದರಿಂದ ವಾಹನ ಸವಾರರು, ಕೆಲಸಕ್ಕೆ

ಚಿತ್ರದುರ್ಗ | ಮೊರಾರ್ಜಿ ದೇಸಾಯಿ ವಸತಿ ಶಾಲೆಗಳ ಎಸ್‌ಎಸ್‌ಎಲ್‌ಸಿ ಫಲಿತಾಂಶ : 100 ಕ್ಕೆ 100 ಫಲಿತಾಂಶ ಪಡೆದ 13 ಶಾಲೆಗಳು

ಸುದ್ದಿಒನ್, ಚಿತ್ರದುರ್ಗ, ಮೇ. 09 :   ಜಿಲ್ಲೆಯಲ್ಲಿ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ 35 ಮೊರಾರ್ಜಿ ದೇಸಾಯಿ/ಕಿತ್ತೂರು ರಾಣಿ ಚೆನ್ನಮ್ಮ/ಏಕಲವ್ಯ ಮಾದರಿ ವಸತಿ ಶಾಲೆಗಳ 2023-24ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ

error: Content is protected !!