Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಕಾರ್ಖಾನೆಯಿಂದ ಬಿಜೆಪಿ ಶಾಸಕನಿಗೆ ಸಂಕಷ್ಟ : 24 ಗಂಟೆಗಳಲ್ಲಿ ನೀಡಬೇಕಿದೆ ಉತ್ತರ..!

Facebook
Twitter
Telegram
WhatsApp

ವಿಜಯಪುರ: ಬಿಜೆಪಿಯಲ್ಲಿ ಫೈರ್ ಬ್ರ್ಯಾಂಡ್ ಅಂತಾನೇ ಗುರುತಿಸಿಕೊಂಡಿರುವವರು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್. ತಮ್ಮ ಪಕ್ಷದವರ ಬಗ್ಗೆಯೇ ಆಗಾಗ ಗರಂ ಆಗುತ್ತಿರುತ್ತಾರೆ. ಅದರಲ್ಲೂ ಮಾಜಿ ಸಿಎಂ ಯಡಿಯೂರಪ್ಪ ಅವರ ಕುಟುಂಬದ ಮೇಲೆ ವಾಗ್ದಾಳಿ ನಡೆಸುತ್ತಲೆ ಇರುತ್ತಾರೆ. ಇದೀಗ ಫೈಯರ್ ಬ್ರಾಂಡ್ ಗೆ ಸಂಕಷ್ಟ ಎದುರಾಗಿದೆ. ಅವರ ಕಾರ್ಖಾನೆಯಿಂದಾಗಿಯೇ ಸಂಕಷ್ಟ ಶುರುವಾಗಿದೆ.

 

ಕಲಬುರಗಿಯ ಚಿಂಚೋಳಿ ತಾಲೂಕಿನಲ್ಲಿ ಸಿದ್ಧಸಿರಿ ಎಂಬ ಸಕ್ಕರೆ ಕಾರ್ಖಾನೆಯಿದೆ. ಮೂಲಗಳ ಪ್ರಕಾರ ಈ ಕಾರ್ಖಾನೆಯ ಮಾಲೀಕರು ಬಸನಗೌಡ ಪಾಟೀಲ್ ಯತ್ನಾಳ್ ಎಂದೇ ಹೇಳಲಾಗುತ್ತಿದೆ. ಹೀಗಾಗಿ ಕಾರ್ಖಾನೆಯ ವಿಚಾರಕ್ಕೆ24 ಗಂಟೆಯಲ್ಲಿ ಉತ್ತರಿಸಬೇಕೆಂದು ಇಲಾಖೆಯೂ ನೋಟೀಸ್ ನೀಡಿದೆ.

ಕಬ್ಬು ಇಲಾಖೆ ಹಾಗೂ ಸಕ್ಕರೆ ಇಲಾಖೆಯೂ ಈ ನೋಟೀಸ್ ಜಾರಿ ಮಾಡಿದೆ. ಮುಂದಿನ 24 ಗಂಟೆಗಳಲ್ಲಿ ನೋಟೀಸ್ ಗೆ ಉತ್ತರಿಸಬೇಕೆಂದು ಸೂಚನೆ ನೀಡಿದೆ. ಸಿದ್ದಸಿರಿ ಕಾರ್ಖಾನೆಯಲ್ಲಿ ಅನುಮತಿ ಪಡೆಯದೆ ಕಬ್ಬು ಅರೆಯಲಾಗಿದೆಯಂತೆ. ಕಬ್ಬು ಅರೆದಿರುವುದು ವಾಯು ನಿಯಂತ್ರಣ ಮಂಡಳಿ ಕಾಯ್ದೆಯ ಉಲ್ಲಂಘನೆಯಾಗಿದೆ ಎಂದು ನೋಟೀಸ್ ನೀಡಲಾಗಿದೆ. ಹೀಗಾಗಿ ನಿಯಮ ಉಲ್ಲಂಘನೆ ಮಾಡಿರಯವ ಆರೋಪದ ಮೇಲೆ ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೆ ನೋಟೀಸ್ ಜಾರಿ ಮಾಡಲಾಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಮಳೆರಾಯನನ್ನೇ ಬೇಡಿದ ಅಭಿಮಾನಿಗಳು : RCB ಗೆಲುವಿಗಾಗಿ ವಿಶೇಷ ಪೂಜೆ

RCB ಅಭಿಮಾನಿಗಳು ಕಡೆಯ ತನಕ ತಮ್ಮ ಟೀಂ ಬಗ್ಗೆ ಹೋಪ್ ಕಳೆದುಕೊಳ್ಳುವುದೇ ಇಲ್ಲ. ಯಾಕಂದ್ರೆ ಆರ್ಸಿಬಿ ಆಟಗಾರರು ಸಹ ಅದೇ ಥರ ಕೊನೆಯಲ್ಲಿ ಚೋಕ್ ಕೊಡ್ತಾರೆ. ಈ ಬಾರಿಯ ಐಪಿಎಲ್ ನಲ್ಲಿ ಆರಂಭದ ಅಷ್ಟು

ಈ ರಾಶಿಯವರು ಕೆಲಸದಲ್ಲಿ ಎಷ್ಟೇ ಶ್ರದ್ಧೆಯಿಂದ ದುಡಿದರೂ ಅಪವಾದ, ನಿಂದನೆ, ಆರ್ಥಿಕ ನಷ್ಟ ತಪ್ಪಿದ್ದಲ್ಲ

ಈ ರಾಶಿಯವರು ಕೆಲಸದಲ್ಲಿ ಎಷ್ಟೇ ಶ್ರದ್ಧೆಯಿಂದ ದುಡಿದರೂ ಅಪವಾದ, ನಿಂದನೆ, ಆರ್ಥಿಕ ನಷ್ಟ ತಪ್ಪಿದ್ದಲ್ಲ. ಶುಕ್ರವಾರ- ರಾಶಿ ಭವಿಷ್ಯ ಮೇ-17,2024 ಸೂರ್ಯೋದಯ: 05:47, ಸೂರ್ಯಾಸ್ತ : 06:37 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ

ಚಿತ್ರದುರ್ಗದಲ್ಲಿ ಐವರ ಅಸ್ಥಿಪಂಜರ ಪ್ರಕರಣ | ಕೊನೆಗೂ ಸಿಕ್ತು ಸಾವಿನ ಸುಳಿವು: ಎಸ್.ಪಿ. ಮಾಹಿತಿ…!

ಸುದ್ದಿಒನ್, ಚಿತ್ರದುರ್ಗ, ಮೇ. 16 : 2023ರ ಡಿಸೆಂಬರ್ ನಲ್ಲಿ ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ಪ್ರಕರಣ ಅದು. ನಗರದ ಬೆಂಗಳೂರು ರಸ್ತೆಯಲ್ಲಿರುವ ಪಾಳು ಬಿದ್ದ ಮನೆಯಲ್ಲಿ ಐವರ ಮೃತದೇಹ ಪತ್ತೆಯಾಗಿತ್ತು. ಅದು ಅವರೆಲ್ಲಾ ಸಾವನ್ನಪ್ಪಿ

error: Content is protected !!