ವಿಜಯಪುರ: ಬಿಜೆಪಿಯಲ್ಲಿ ಫೈರ್ ಬ್ರ್ಯಾಂಡ್ ಅಂತಾನೇ ಗುರುತಿಸಿಕೊಂಡಿರುವವರು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್. ತಮ್ಮ ಪಕ್ಷದವರ ಬಗ್ಗೆಯೇ ಆಗಾಗ ಗರಂ ಆಗುತ್ತಿರುತ್ತಾರೆ. ಅದರಲ್ಲೂ ಮಾಜಿ ಸಿಎಂ ಯಡಿಯೂರಪ್ಪ ಅವರ ಕುಟುಂಬದ ಮೇಲೆ ವಾಗ್ದಾಳಿ ನಡೆಸುತ್ತಲೆ ಇರುತ್ತಾರೆ. ಇದೀಗ ಫೈಯರ್ ಬ್ರಾಂಡ್ ಗೆ ಸಂಕಷ್ಟ ಎದುರಾಗಿದೆ. ಅವರ ಕಾರ್ಖಾನೆಯಿಂದಾಗಿಯೇ ಸಂಕಷ್ಟ ಶುರುವಾಗಿದೆ.
ಕಲಬುರಗಿಯ ಚಿಂಚೋಳಿ ತಾಲೂಕಿನಲ್ಲಿ ಸಿದ್ಧಸಿರಿ ಎಂಬ ಸಕ್ಕರೆ ಕಾರ್ಖಾನೆಯಿದೆ. ಮೂಲಗಳ ಪ್ರಕಾರ ಈ ಕಾರ್ಖಾನೆಯ ಮಾಲೀಕರು ಬಸನಗೌಡ ಪಾಟೀಲ್ ಯತ್ನಾಳ್ ಎಂದೇ ಹೇಳಲಾಗುತ್ತಿದೆ. ಹೀಗಾಗಿ ಕಾರ್ಖಾನೆಯ ವಿಚಾರಕ್ಕೆ24 ಗಂಟೆಯಲ್ಲಿ ಉತ್ತರಿಸಬೇಕೆಂದು ಇಲಾಖೆಯೂ ನೋಟೀಸ್ ನೀಡಿದೆ.

ಕಬ್ಬು ಇಲಾಖೆ ಹಾಗೂ ಸಕ್ಕರೆ ಇಲಾಖೆಯೂ ಈ ನೋಟೀಸ್ ಜಾರಿ ಮಾಡಿದೆ. ಮುಂದಿನ 24 ಗಂಟೆಗಳಲ್ಲಿ ನೋಟೀಸ್ ಗೆ ಉತ್ತರಿಸಬೇಕೆಂದು ಸೂಚನೆ ನೀಡಿದೆ. ಸಿದ್ದಸಿರಿ ಕಾರ್ಖಾನೆಯಲ್ಲಿ ಅನುಮತಿ ಪಡೆಯದೆ ಕಬ್ಬು ಅರೆಯಲಾಗಿದೆಯಂತೆ. ಕಬ್ಬು ಅರೆದಿರುವುದು ವಾಯು ನಿಯಂತ್ರಣ ಮಂಡಳಿ ಕಾಯ್ದೆಯ ಉಲ್ಲಂಘನೆಯಾಗಿದೆ ಎಂದು ನೋಟೀಸ್ ನೀಡಲಾಗಿದೆ. ಹೀಗಾಗಿ ನಿಯಮ ಉಲ್ಲಂಘನೆ ಮಾಡಿರಯವ ಆರೋಪದ ಮೇಲೆ ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೆ ನೋಟೀಸ್ ಜಾರಿ ಮಾಡಲಾಗಿದೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

















