Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಸುರೇಶ್ ಹಳ್ಳಿಯ ಸಂಸದ, ಅವರ ಎದುರು ಕುಮಾರಸ್ವಾಮಿ ಸ್ಪರ್ಧಿಸಿದರು ಚಿಂತೆ ಇಲ್ಲ : ಡಿಕೆ ಶಿವಕುಮಾರ್

ಡಿಕೆ ಶಿವಕುಮಾರ್
---Advertisement---

ಮಂಗಳೂರು: ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಕಾಂಪಿಟೇಷನ್ ಜೋರಾಗಿದೆ. ಬಿಜೆಪಿ ಹಾಗೂ ಜೆಡಿಎಸ್ ನಾಯಕರು ಒಟ್ಟಾಗಿ ಸೇರಿ ಕಾಂಗ್ರೆಸ್ ಅನ್ನು ಸೋಲಿಸಬೇಕು ಎಂಬ ಧ್ಯೇಯ ಹೊಂದಿದ್ದಾರೆ. ಇಬ್ಬರನ್ನು ಮೀರಿ ನಾವೂ ಹೆಚ್ಚು ಕ್ಷೇತ್ರಗಳನ್ನು ಗೆಲ್ಲಬೇಕೆಂದು ಕಾಂಗ್ರೆಸ್ ತಯಾರಿ ನಡೆಸುತ್ತಿದೆ. ಅದಕ್ಕಾಗಿಯೇ ಈಗಾಗಲೇ ಸಮಾವೇಶಗಳು, ಕಾರ್ಯಕ್ರಮಗಳು ಅಂತ ಓಡಾಡುತ್ತಿದೆ. ಇಂದು ಮಂಗಳೂರಿನಲ್ಲಿ ಕಾಂಗ್ರೆಸ್ ಬೃಹತ್ ಸಮಾವೇಶ ನಡೆಸುತ್ತಿದೆ.

ಲೋಕಸಭಾ ಚುನಾವಣೆಗೆ ಬೆಂಗಳೂರು ಗ್ರಾಮಾಂತರ ಕ್ಷೇತ್ರ ಕೂಡ ಹೆಚ್ಚಿನ ಸೌಂಡ್ ಮಾಡುತ್ತಿದೆ. ಕಾಂಗ್ರೆಸ್ ನಿಂದ ಡಿಕೆ ಸುರೇಶ್ ಫಿಕ್ಸ್ ಆಗಿದ್ದಾರೆ. ಅವರನ್ನು ಸೋಲಿಸಲು ಸರಿಯಾದ ಕ್ಯಾಂಡಿಡೇಟ್ ಹಾಕಲು ಬಿಜೆಪಿ ಹಾಗೂ ಜೆಡಿಎಸ್ ಥಿಂಕ್ ಮಾಡುತ್ತಿದೆ. ಕುಮಾರಸ್ವಾಮಿ ಅವರನ್ನೇ ನಿಲ್ಲಿಸಿದರೆ ಉತ್ತಮ ಎಂಬ ಮಾತುಗಳು ಕೇಳಿ ಬರುತ್ತಿದೆ. ಈ ಬಗ್ಗೆ ಮಂಗಳೂರಿನಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಮಾತನಾಡಿದ್ದಾರೆ.

ಬೆಂಗಳೂರು ಗ್ರಾಮಾಂತರದಿಂದ ಜೆಡಿಎಸ್ ನಾಯಕ ಹೆಚ್ ಡಿ ಕುಮಾರಸ್ವಾಮಿ ಸ್ಪರ್ಧೆ ಮಾಡಿದರೂ ಚಿಂತೆಯಿಲ್ಲ. ಮಾಜಿ ಪ್ರಧಾನಿ ದೇವೇಗೌಡ ಹಾಗೂ ಕುಮಾರಸ್ವಾಮಿ ವಿರುದ್ಧವೇ ಸ್ಪರ್ಧೆ ಮಾಡಿದವನು ನಾನು. ನನ್ನ ಸಹೋದರ ಸುರೇಶ್ ವಿರುದ್ಧ ಅನಿತಾ ಕುಮಾರಸ್ವಾಮಿ ಸ್ಪರ್ಧೆ ಮಾಡಿದಾಗಲೂ ಗೆದ್ದಿದ್ದು ಅವನೇ. ಬಿಜೆಪಿ ಹಾಗೂ ಜೆಡಿಎಸ್ ನಾಯಕರು ಅವನ ವಿರುದ್ಧ ಸ್ಪರ್ಧೆ ಮಾಡಿದಾಗಲೂ ಗೆದ್ದಿದ್ದಾನೆ. ಸುರೇಶ್ ದೆಹಲಿಯಲ್ಲಿ ಕೂರುವ ಸಂಸದನಲ್ಲ, ಹಳ್ಳಿಯ ಸಂಸದ ಆತ. ಹೀಗಾಗಿ ಜನರಿಗೆ ವ್ಯತ್ಯಾಸಗಳು ಗೊತ್ತಾಗುತ್ತವೆ. ದೇವೇಗೌಡ, ಕುಮಾರಸ್ವಾಮಿ ಅವರು ನಮ್ಮಲ್ಲಿ ಎಂಪಿ ಆಗಿದ್ದವರೆ. ಆದರೆ ಹಳೇ ಎಂಪಿಗಳಿಗೂ ಈ ಎಂಪಿಗೂ ವ್ಯತ್ಯಾಸವನ್ನು ಜನ ಕಂಡುಕೊಂಡಿದ್ದಾರೆ. ಯಾರೇ ಸ್ಪರ್ಧೆ ಮಾಡಿದರು ಸ್ವಾಗತ ಮಾಡುತ್ತೇವೆ ಎಂದಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment