ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ.17 : ಕನ್ನಡ ಸಾಹಿತ್ಯ ಪರಿಷತ್ತಿನ ವಾರ್ಷಿಕ ಸಾಮಾನ್ಯ ಸಭೆಯನ್ನು ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ತಾಲ್ಲೂಕು ಮಲ್ಲಾಡಿಹಳ್ಳಿಯಲ್ಲಿ ಮಾ.10 ರಂದು ಭಾನುವಾರ ಏರ್ಪಡಿಸಲಾಗಿದೆ ಎಂದು ಚಿತ್ರದುರ್ಗ ಜಿಲ್ಲಾ ಕಸಾಪ ಅಧ್ಯಕ್ಷ ಕೆ.ಎಂ.ಶಿವಸ್ವಾಮಿ ತಿಳಿಸಿದ್ದಾರೆ.
ಚಿತ್ರದುರ್ಗ ಜಿಲ್ಲೆಯಲ್ಲಿ ಮೊದಲ ಬಾರಿಗೆ ರಾಜ್ಯ ಕಸಾಪ ವಾರ್ಷಿಕ ಸಾಮಾನ್ಯ ಸಭೆ ಏರ್ಪಡಿಸಲಾಗಿದೆ. ರಾಜ್ಯ ಮತ್ತು ನೆರೆ ರಾಜ್ಯದ ಎಲ್ಲ ಆಜೀವ ಸದಸ್ಯರು ಇದರಲ್ಲಿ ಭಾಗವಹಿಸಲು ಅವಕಾಶವಿದೆ. ಸಾಮಾನ್ಯ ಸಭೆಯ ತಿಳುವಳಿಕೆ ಪ್ರಕಟಣೆಯನ್ನು ಕಸಾಪ ತನ್ನ ವೆಬ್ಸೈಟ್ ನಲ್ಲಿ ಈಗಾಗಲೇ ಪ್ರಕಟಿಸಿದೆ.
ಆಯಾ ಜಿಲ್ಲೆ, ತಾಲ್ಲೂಕು ಮತ್ತು ಹೋಬಳಿ ಅಧ್ಯಕ್ಷರು ತಮ್ಮ ವ್ಯಾಪ್ತಿಯಲ್ಲಿನ ಕಚೇರಿ ಸೂಚನಾ ಫಲಕಗಳಲ್ಲಿ ಸಭಾ ಸೂಚನಾ ತಿಳುವಳಿಕೆಯ ಪತ್ರವನ್ನು ಪ್ರಕಟಿಸಲು ಸೂಚಿಸಲಾಗಿದೆ. ವಾರ್ಷಿಕ ಸಭೆಯಲ್ಲಿ ಹಿಂದಿನ ವರ್ಷದ ವಾರ್ಷಿಕ ಸಭೆಯ ದೃಢೀಕರಣ ಹಾಗೂ ಲೆಕ್ಕ ಪತ್ರಗಳ ಮಂಡನೆ ಸೇರಿದಂತೆ ಒಂಬತ್ತು ಅಂಶಗಳು ಕಾರ್ಯಸೂಚಿಯಲ್ಲಿವೆ.
ವಾರ್ಷಿಕ ಸಭೆಗೆ ಹಾಜರಾಗುವ ಸದಸ್ಯರು ಕಡ್ಡಾಯವಾಗಿ ಗುರುತಿನ ಪತ್ರ ತರಬೇಕು. ಪ್ರಶ್ನೆಗಳನ್ನು ಕೇಳಬಯಸುವ ಸದಸ್ಯರು ತಮ್ಮ ಪ್ರಶ್ನೆಯನ್ನು ಕನಿಷ್ಟ ಎರಡು ವಾರಗಳ ಮುಂಚೆ ಅಧ್ಯಕ್ಷರು, ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ತು, ಬೆಂಗಳೂರು, ಇವರಿಗೆ ಕಳುಹಿಸತಕ್ಕದ್ದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ 9449510078, 9980383294, 9538418943, 9880031083


ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್ಡೇಟ್. ನೀವು ಯಾವಾಗಲೂ ಅಪ್ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್