Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ಚಿತ್ರದುರ್ಗ ಲೋಕಸಭಾ ಚುನಾವಣೆ | ಈ ಬಾರಿ ಭೋವಿ ಸಮುದಾಯಕ್ಕೆ ಟಿಕೆಟ್ ನೀಡಿ : ತಿಪ್ಪೇಸ್ವಾಮಿ ಒತ್ತಾಯ

---Advertisement---

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817

ಸುದ್ದಿಒನ್, ಚಿತ್ರದುರ್ಗ ಫೆ. 17 :  ಚಿತ್ರದುರ್ಗ ಲೋಕಸಭಾ ಕ್ಷೇತ್ರದಲ್ಲಿ 2.5 ಲಕ್ಷ ಭೋವಿ ಸಮುದಾಯದ ಮತದಾರರಿದ್ದು, ಇಲ್ಲಿವರೆಗೂ ಕಾಂಗ್ರೆಸ್ ಪಕ್ಷ ನಮ್ಮನ್ನು ಗುರುತಿಸುವ ಪ್ರಯತ್ನ ಮಾಡಿಲ್ಲ. ಈ ಬಾರಿ ಚಿತ್ರದುರ್ಗ ಲೋಕಸಭಾ ಕ್ಷೇತ್ರಕ್ಕೆ ಕಾಂಗ್ರೆಸ್ ಪಕ್ಷದಿಂದ ಭೋವಿ ಸಮುದಾಯಕ್ಕೆ ಟಿಕೆಟ್ ನೀಡುವ ಮುಖಾಂತರ ಸಾಮಾಜಿಕ ನ್ಯಾಯವನ್ನು ಸಿದ್ದರಾಮಯ್ಯನವರು ಒದಗಿಸಬೇಕು ಎಂದು ಬೋವಿ ಸಂಘದ ಅಧ್ಯಕ್ಷರಾದ ತಿಪ್ಪೇಸ್ವಾಮಿ ಪಕ್ಷದ ಮುಖಂಡರನ್ನು ಒತ್ತಾಯಿಸಿದ್ದಾರೆ.

ಚಿತ್ರದುರ್ಗ ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಲೋಕಸಬಾ ಚುನಾವಣೆಯಲ್ಲಿ ಕಳೆದ 40 ವರ್ಷದ ಹಿಂದೆ ನಮ್ಮ ಸಮುದಾಯಕ್ಕೆ ಕಾಂಗ್ರೆಸ್ ಪಕ್ಷದವತಿಯಿಂದ ಟೀಕೇಟ್ ನಿಡಲಾಗಿತ್ತು ತದ ನಂತರ ಇಲ್ಲಿಯವರೆಗೂ ಕಾಂಗ್ರೆಸ್ ಪಕ್ಷ ಟೀಕೇಟ್ ನೀಡಿಲ್ಲ ಈಗಾಗಲೇ ಎಡಗೈ ಸಮುದಾಯದವರಿಗೆ ಟಿಕೆಟ್ ನೀಡಲಾಗಿದೆ ಉಳಿದಂತೆ ಲಂಬಾಣಿ ಹಾಗೂ ಭೋವಿ ಸಮುದಾಯಕ್ಕೆ ಟಿಕೆಟ್ ನೀಡಬೇಕು ನಮ್ಮ ಸಮುದಾಯ ಕಾಂಗ್ರೆಸ್ ಪಕ್ಷದ ಜೊತೆಯಲ್ಲಿದೆ.. ಮುಖ್ಯಮಂತ್ರಿ ಸಿದ್ದರಾಮಯ್ಯರವರು ಸಾಮಾಜಿಕ ನ್ಯಾಯ ಒದಗಿಸಬೇಕು ಎಂದು ಆಗ್ರಹಿಸಿದರು.

ಕಾಂಗ್ರೆಸ್ ಪಕ್ಷದಲ್ಲಿ ನಮಗೆ 40 ವರ್ಷದಿಂದ ಅನ್ಯಾಯವಾಗಿದೆ.. ನಮ್ಮ ಸಮುದಾಯಕ್ಕೆ ಟಿಕೆಟ್ ನೀಡಿದರೆ ಸಾಮಾಜಿಕ ನ್ಯಾಯ ನೀಡಿದಂತೆ ಆಗುತ್ತದೆ. 28 ಲೋಕಸಭಾ ಕ್ಷೇತ್ರಗಳ ಪೈಕಿ 5 ಪರಿಶಿಷ್ಟ ಜಾತಿ ಮೀಸಲು ಕ್ಷೇತ್ರಗಳಿವೆ ಅದರಲ್ಲಿ ಒಂದು ಕ್ಷೇತ್ರದಲ್ಲಾದರೂ ಭೋವಿ ಸಮುದಾಯಕ್ಕೆ ನೀಡಬೇಕು. ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಟಿಕೆಟ್ ಆಕಾಂಕ್ಷಿಗಳ ಪೈಕಿ 05 ಜನ ಭೋವಿ ಸಮುದಾಯದವರಿದ್ದಾರೆ. ಅದರಂತೆ ನೆರ್ಲಗುಂಟೆ ರಾಮಪ್ಪ ರವರು ಸ್ಥಳೀಯರಾಗಿದ್ದು ಅವರಿಗೆ ಟಿಕೆಟ್ ನೀಡಬೇಕೆಂದು ಪಕ್ಷದ ಮುಖಂಡರಲ್ಲಿ ಮನವಿ ಮಾಡಿದರು.

ಸಮುದಾಯದ ಮುಖಂಡರಾದ ಹೆಚ್.ಅಂಜನೇಯ ಮಾತನಾಡಿ, ಈ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಬೋವಿ ಸಮುದಾಯದವರಿಗೆ ಟೀಕೇಟ್ ನೀಡದಿದ್ದರೆ ಸಮುದಾಯದ ಮುಖಂಡರು ಹಾಗೂ ಸ್ವಾಮೀಜಿಗಳ ಸಮ್ಮುಖದಲ್ಲಿ ಸಭೆಯನ್ನು ನಡೆಸಿ ಮುಂದಿನ ಕ್ರಮ ಕೈಗೊಳಲಾಗುವುದು. ಈ ಬಾರಿಯ ಚುನಾವಣೆಯಲ್ಲಿ ಎರಡು ಪಕ್ಷದಿಂದ ಬೋವಿ ಸಮುದಾಯಕ್ಕೆ ಟೀಕೇಟ್ ನೀಡಿದರೆ ಇದರ ಬಗ್ಗೆ ನಿರ್ಣಯವನ್ನು ಸಮುದಾಯ, ಅಥವಾ ಗುರುಗಳು ಮಾಡದೇ ಮತದಾರರೇ ತೀರ್ಮಾನ ಮಾಡುತ್ತಾರೆ. ಇದರಲ್ಲಿ ನಾವು ಬಾಗಿಯಾಗುವುದಿಲ್ಲ ಎಂದರು.

ಗೋಷ್ಟಿಯಲ್ಲಿ  ಜಿ.ಪಂ. ಮಾಜಿ ಸದಸ್ಯರಾದ ಅನಿಲ್ ಕುಮಾರ್, ತಿಪ್ಪೇಸ್ವಾಮಿ, ಮುಖಂಡರಾದ ಪಿ.ದೇವರಾಜು, ಕನಕದಾಸ್ ಉಪಸ್ಥಿತರಿದ್ದರು.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment