Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಬಾಂಬೆ ಮಿಠಾಯಿಯಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ : ಎಲ್ಲೆಲ್ಲಾ ಬ್ಯಾನ್..!

Facebook
Twitter
Telegram
WhatsApp

 

ಬಾಂಬೆ ಮಿಠಾಯಿ, ಐಸ್ ಕ್ಯಾಂಡಿ ಅಂದ್ರೆ ಯಾರಿಗೆ ತಾನೇ ಇಷ್ಟ ಆಗಲ್ಲ ಹೇಳಿ. ಹಳ್ಳಿಗಳ ಕಡೆಗಳಲ್ಲಿ ಪುಯ್ ಪುಯ್ ಅಂತ ಸೌಂಡ್ ಮಾಡಿಕೊಂಡು ಬಾಂಬೆ ಮಿಠಾಯಿ ಮಾರಿಕೊಂಡು ಬಂದರೆ, ಮಕ್ಕಳು ಓಡೋಡಿ ಹೋಗುತ್ತಾರೆ. ಈ ನಡವಳಿಕೆ ಈಗಲೂ ಏನು ನಿಂತಿಲ್ಲ. ಆದರೆ ಈಗ ಶಾಕಿಂಗ್ ವಿಚಾರವೊಂದು ಹೊರ ಬಿದ್ದಿದೆ. ಬಾಂಬೆ ಮಿಠಾಯಿಯನ್ನು ನಾಲಿಗೆ ರುಚಿ ಎಂದುಕೊಂಡು ಸವಿದರೆ ಕ್ಯಾನ್ಸರ್ ರೋಗವನ್ನು ಸ್ವಾಗತಿಸಿದಂತೆಯೇ ಸರಿ ಎನ್ನುತ್ತಿವೆ ಸಂಶೋಧನೆಗಳು.

 

ಬಾಂಬೆ ಮಿಠಾಯಿಯ ಬಗ್ಗೆ ಗಿಂಡಿಯ ಸರ್ಕಾರಿ ಆಹಾರ ವಿಶ್ಲೇಷಣಾ ಪ್ರಯೋಗಾಲಯ ಈ ಬಗ್ಗೆ ಅಧ್ಯಯನ ನಡೆಸಿದೆ. ಕಾಟನ್ ಕ್ಯಾಂಡಿಯಲ್ಲಿ ಜವಳಿ ಬಣ್ಣ ಮತ್ತು ರಾಸಾಯನಿಕ ರೋಡೋಮಿನ್ ಬಿ ಪತ್ತೆಯಾಗಿದೆ. ಈ ಕೆಮಿಕಲ್ ಕ್ಯಾನ್ಸರ್ ರೋಗ ಬರುವುದಕ್ಕೆ ಸುಲಭವಾಗಿ ದಾರಿ ಮಾಡಿಕೊಡುತ್ತದೆ ಎನ್ನಲಾಗುತ್ತಿದೆ. ಹೀಗಾಗಿ ಈ ರೀತಿಯ ಕಲರ್ ಫುಲ್ ಕ್ಯಾಂಡಿ, ಮಿಠಾಯಿ ತಿನ್ನುವ ಮುನ್ನ ಎಚ್ಚರವಹಿಸುವುದು ಬಹಳ ಮುಖ್ಯವಾಗುತ್ತದೆ.

ಈಗಾಗಲೇ ಸಾಕಷ್ಟು ರೋಗ ಬರುವಂತ ಆಹಾರಗಳೇ ಜನರಿಗೆ ಸಿಗುತ್ತಿವೆ. ಪ್ಲಾಸ್ಟಿಕ್ ಬಳಕೆಯಿಂದ ಕ್ಯಾನ್ಸರ್ ಬರುವ ಸಾಧ್ಯತೆ ಹೆಚ್ಚು ಎಂದೇ ಹೇಳಲಾಗುತ್ತದೆ. ಆದರೆ ಅದೇ ಪ್ಲಾಸ್ಟಿಕ್ ಕವರ್ ನಲ್ಲಿ ಊಟವನ್ನು ಪಾರ್ಸಲ್ ತರಲಾಗುತ್ತದೆ. ಕೆಲವೊಂದು ಲೋಕಲ್ ಕಾಸ್ಮೆಟಿಕ್ ಗಳಿಂದಾನೂ ಕ್ಯಾನ್ಸರ್ ಬರುವ ಸಾಧ್ಯತೆ ಹೆಚ್ಚಾಗಿದೆ ಎಂದೇ ಹೇಳಲಾಗುತ್ತದೆ. ಇದೀಗ ಬಾಂಬೆ ಮಿಠಾಯಿಂದ ಕ್ಯಾನ್ಸರ್ ಬರಯವ ಸಾಧ್ಯತೆಗಳಿವೆ ಎಂದು ಗೊತ್ತಾದ ಮೇಲೆ ತಮಿಳುನಾಡು ಸರ್ಕಾರ ಮಿಠಾಯಿಯನ್ನು ಬ್ಯಾನ್ ಮಾಡಿದೆ. ಹಾಗೇ ಪುದುಚೇರಿಯೂ ಜನರ ಆರೋಗ್ಯ ದೃಷ್ಠಿಯಿಂದ ಮಿಠಾಯಿಯನ್ನು ಬ್ಯಾನ್ ಮಾಡಲಾಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಕೆ.ಎಸ್.ಹನುಮಕ್ಕ ನಿಧನ

ಸುದ್ದಿಒನ್, ಚಿತ್ರದುರ್ಗ, ಮೇ. 18 : ನಗರದ ಸರಸ್ವತಿಪುರಂ ನಿವಾಸಿ ಕೆ.ಎಸ್ ಹನುಮಕ್ಕ(88) ಶನಿವಾರ ಮುಂಜಾನೆ ಚಿತ್ರದುರ್ಗದ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಮೃತರು ನಿವೃತ್ತ ಪ್ರಾಚಾರ್ಯ ಡಾ.ಸಂಗೇನಹಳ್ಳಿ ಅಶೋಕ್ ಕುಮಾರ್ ಸೇರಿದಂತೆ ಇಬ್ಬರು

ಈ ಸಮಸ್ಯೆ ಇರುವವರು ಕಬ್ಬಿನ ರಸವನ್ನು ಕುಡಿಯಬೇಡಿ….!

ಸುದ್ದಿಒನ್ : ಬೇಸಿಗೆಯಲ್ಲಿ ಮಾರುಕಟ್ಟೆಯಲ್ಲಿ ವಿವಿಧ ರೀತಿಯ ಜ್ಯೂಸ್, ತಂಪು ಪಾನೀಯಗಳ ಮಾರಾಟ ಜೋರಾಗಿಯೇ ನಡೆಯುತ್ತಿದೆ. ನಿಂಬೆ ಹಣ್ಣಿನ ರಸ, ಮಜ್ಜಿಗೆ ಮತ್ತು ಕಬ್ಬಿನ ರಸವನ್ನು ವ್ಯಾಪಕವಾಗಿ ಮಾರಾಟ ಮಾಡಲಾಗುತ್ತದೆ. ಕಬ್ಬಿನ ರಸವನ್ನು ಕುಡಿಯಲು

ಇಂದು ನಿಮಗೆ ಭೂ ವ್ಯವಹಾರಗಳಲ್ಲಿ ಉತ್ತಮ ಆದಾಯ ಸಿಗಲಿದೆ

ಈ ರಾಶಿಗಳ ಸಂಸಾರದಲ್ಲಿ ಏನಾಯ್ತು? ಆಶ್ಚರ್ಯ! ಇಂದು ನಿಮಗೆ ಭೂ ವ್ಯವಹಾರಗಳಲ್ಲಿ ಉತ್ತಮ ಆದಾಯ ಸಿಗಲಿದೆ, ಶನಿವಾರ ರಾಶಿ ಭವಿಷ್ಯ -ಮೇ-18,2024 ಸೂರ್ಯೋದಯ: 05:47, ಸೂರ್ಯಾಸ್ತ : 06:38 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ

error: Content is protected !!