Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಬಜೆಟ್ ಕೇಳದೆ, ನೋಡದೆ ಬಿಜೆಪಿ ಪ್ರತಿಭಟನೆ ನಡೆಸಿದೆ : ಎಂಎಲ್ಸಿ ಸಲೀಂ ಅಹ್ಮದ್

Facebook
Twitter
Telegram
WhatsApp

 

ಸುದ್ದಿಒನ್, ಹಿರಿಯೂರು, ಫೆಬ್ರವರಿ. 18 :  ಸಿಎಂ ಸಿದ್ದರಾಮಯ್ಯ ಅವರು ಇತ್ತಿಚೆಗಷ್ಟೇ ಬಜೆಟ್ ಮಂಡನೆ ಮಾಡಿದ್ದಾರೆ. ಗ್ಯಾರಂಟಿಗಳ ನಡುವೆಯೂ ಬಜೆಟ್ ಮಂಡನೆ ಮಾಡಲಾಗಿದೆ. ಈ ಸಂಬಂಧ ಬಿಜೆಪಿ ನಾಯಕರು ಬಜೆಟ್ ವಿರೋಧಿಸಿದ್ದಾರೆ. ಬಿಜೆಪಿಯವರ ನಡವಳಿಕೆಗೆ ಕಾಂಗ್ರೆಸ್ ಎಂಎಲ್ಸಿ ಸಲೀಂ ಅಹ್ಮದ್ ಕಿಡಿಕಾರಿದ್ದಾರೆ.

ತಾಲೂಕಿನ ಗುಯಿಲಾಳ್ ಟೋಲ್ ಬಳಿ ಸುದ್ದಿಗಾರರಿಗೆ ಮಾತನಾಡಿದ ಅವರು ಇತ್ತೀಚೆಗಷ್ಟೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉತ್ತಮ ಬಜೆಟ್ ಮಂಡನೆ ಮಾಡಿದ್ದಾರೆ. ಆದರೆ ಬಜೆಟ್ ಮಂಡನೆಗೂ ಮೊದಲೇ ಬಿಜೆಪಿ ಬಜೆಟ್ ಕೇಳಿಲ್ಲ, ನೋಡಿಲ್ಲದೆ ಭಿತ್ತಿ ಪತ್ರ ಹಿಡಿದು ಪ್ರತಿಭಟನೆ ನಡೆಸಿದೆ. ಲೋಕಸಭಾ ಚುನಾವಣೆಯ ಸೋಲಿನ ಭಯದಿಂದ ಕಾಂಗ್ರೆಸ್ ಪಕ್ಷದ ಖಾತೆಗಳನ್ನು ಸೀಜ್ ಮಾಡುವ ಮೂಲಕ ಬಿಜೆಪಿ ದ್ವೇಷದ ರಾಜಕಾರಣ ಮಾಡುತ್ತಿದೆ, ಇದನ್ನು ದೇಶದ ಜನತೆ ಗಮನಿಸುತ್ತಿದ್ದಾರೆ ಎಂದು ವಿಧಾನ ಪರಿಷತ್ ಮುಖ್ಯ ಸಚೇತಕ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ಹೇಳಿದರು.

 

ಈ ಹಿಂದೆ ವಿಧಾನಸಭಾ ಚುನಾವಣೆಯ ಪೂರ್ವದಲ್ಲಿ ಐದು ಗ್ಯಾರಂಟಿ ಯೋಜನೆಗಳನ್ನು ಘೋಷಿಸಿತ್ತು. ಸರ್ಕಾರ ಜಾರಿಗೆ ಬಂದ ಕೂಡಲೇ ಎಂಟು ತಿಂಗಳಲ್ಲಿ ನುಡಿದಂತೆ ನಡೆಯುವ ಮೂಲಕ ಐದು ಐತಿಹಾಸಿಕ ಗ್ಯಾರಂಟಿ ಯೋಜನೆಗಳನ್ನು ರಾಜ್ಯದ ಜನತೆಗೆ ತಲುಪಿಸುವಲ್ಲಿ ನಮ್ಮ ಸರ್ಕಾರ ಐತಿಹಾಸಿಕ ಸಾಧನೆ ಮಾಡಲಾಗಿದೆ. ಸುಮಾರು 150ಕೋಟಿ ಮಹಿಳೆಯರು ಬಸ್ ನಲ್ಲಿ ಉಚಿತವಾಗಿ ಪ್ರಯಾಣಿಸಿದ್ದಾರೆ. ಇಂತಹ ಕ್ರಾಂತಿಕಾರಿ ಯೋಜನೆಗಳಿಂದ ಜನತೆ ಸಂತೋಷವಾಗಿದ್ದಾರೆ. ಇದರಿಂದ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಕನಿಷ್ಠ 20 ಸ್ಥಾನಗಳಲ್ಲಿ ಗೆಲುವು ಸಾಧಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

20% ಗ್ರೇಸ್ ಮಾರ್ಕ್ಸ್ ಕೊಟ್ಟರು ಈ ಬಾರಿ ಎಸ್ಎಸ್ಎಲ್ಸಿ ಫಲಿತಾಂಶ ಕಡಿಮೆ ಯಾಕೆ..?

ಇಂದು ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟವಾಗಿದ್ದು, ಮಾಮೂಲಿಯಂತೆ ಹುಡುಗಿಯರೇ ಮೇಲುಗೈ ಸಾಧಿಸಿದ್ದಾರೆ. ಆದರೆ ಕಳೆದ ಬಾರಿಗೆ ಹೋಲಿಕೆ ಮಾಡಿಕೊಂಡರೆ ಈ ಬಾರಿ ಫಲಿತಾಂಶ ತೀರಾ ಕಡಿಮೆ ಬಂದಿದೆ. ಈ ಬಾರಿ 8,59,967 ವಿದ್ಯಾರ್ಥಿಗಳು ಪರೀಕ್ಷೆ ಬರೆದರೆ

ನಿವೇದಿತಾ ಜೈನ್ ಸಾವಿನ ಬಗ್ಗೆ ಮೊದಲೇ ಎಚ್ಚರಿಸಿದ್ದರು ಆ ಮನುಷ್ಯ.. ಮನೆಯು ಸಿಗಲಿಲ್ಲ.. ನಟಿಯೂ ಉಳಿಯಲಿಲ್ಲ..!

ನಿವೇದಿತಾ ಜೈನ್ ಬದುಕಿದ್ದು ಕೇವಲ 19 ವರ್ಷ. ಆದರೆ ಹಲವು ಸಿನಿಮಾಗಳಲ್ಲಿ ನಟಿಸಿ, ಎಲ್ಲರನ್ನು ಬಿಟ್ಟು ಹೊರಟೆ ಹೋದರು. ಇಂದಿಗೂ ಅವೆ ಸಾವು ಆತ್ಮಹತ್ಯೆಯೋ, ಸಹಜ ಸಾವೋ ಎಂಬ ಪ್ರಶ್ನೆ ಕಾಡುತ್ತದೆ. ನಿವೇದಿತಾ ಜೈನ್

ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟ : 21ನೇ ಸ್ಥಾನದಲ್ಲಿ ಚಿತ್ರದುರ್ಗ ಜಿಲ್ಲೆ

ಬೆಂಗಳೂರು: ಇಂದು 2023-24ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷಾ ಫಲಿತಾಂಶ ಪ್ರಕಟವಾಗಿದೆ. 76.91ರಷ್ಟು ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. 8.59,967 ಲಕ್ಷ ವಿಧ್ಯಾರ್ಥಿಗಳು ಪರೀಕ್ಚೆ ಬರೆದಿದ್ದಾರೆ. 6,31,204 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. ಲಿಂಗವಾರು ಒಟ್ಟಾರೆ ಫಲಿತಾಂಶ: ಬಾಲಕರು:2,87,416(65.90%) ಬಾಲಕಿಯರು’-3,43,788(81.11%) ರಾಜ್ಯದಲ್ಲಿ

error: Content is protected !!