Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ರಂಭಾಪುರಿ ಕಾರಿಗೆ ಚಪ್ಪಲಿ ಎಸೆದ ಕೇಸ್ : 59 ಜನರ ಮೇಲೆ ಕೇಸು ದಾಖಲು..!

Facebook
Twitter
Telegram
WhatsApp

 

ಬಾಗಲಕೋಟೆ: ಜಿಲ್ಲೆಯ ಕಲಾದಗಿ ಗ್ರಾಮದಿಂದ ತೆರಳುತ್ತಿದ್ದ ರಂಭಾಪುರಿ ಶ್ರೀಗಳ ಮೇಲೆ ಚಪ್ಪಲಿಯನ್ನು ಎಸೆದ ಘಟನೆ ನಡೆದಿತ್ತು. ಈ ಸಂಬಂಧ ಇದೀಗ 59 ಜನರ ಮೇಲೆ‌ ಕೇಸು ದಾಖಲಾಗಿದೆ. ಕಲಾದಗಿ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಾಗಿದೆ.

ಕಲಂ 143, 147, 341, 355, 511, 149 ನಡಿ 59 ಜನರ ಮೇಲೆ‌ ಕೇಸು ದಾಖಲಾಗಿದೆ. ನಿನ್ನೆ ರಂಭಾಪುರಿ ಶ್ರೀಗಳು ಕಲಾದಗಿ ಗ್ರಾಮದ ಮಾರ್ಗವಾಗಿ ಉದಗಟ್ಟಿಗೆ ತೆರಳುತ್ತಿದ್ದರು. ಈ ವೇಳೆ ಕಾರಿಗೆ ಮುತ್ತಿಗೆ ಹಾಕಿದ್ದರು. ನಡುವೆಯೇ ಅವರ ಕಾರಿನ ಮೇಲೆ ಚಪ್ಪಲಿ ಎಸೆದ ಘಟನೆಯೂ ನಡೆದಿತ್ತು. ಈ ಸಂಬಂಧ ನಿನ್ನೆಯೇ ಮಾತನಾಡಿದ್ದ ರಂಭಾಪುರಿ ಶ್ರೀಗಳು ನ್ಯಾಯಾಲಯದಿಂದ ಬರುವ ತೀರ್ಪಿಗೆ ಬದ್ಧನಾಗಿರುತ್ತೇನೆ ಎಂದಿದ್ದರು.

2015ರಲ್ಲಿಕಲಾದಗಿಯ ಶ್ರೀ ಗುರುಲಿಂಗೇಶ್ವರ ಮಠದ ಅಂದಿನ ಪೀಠಾಧಿಪತಿ, ಶ್ರೀ ಚಂದ್ರಶೇಖರ ಸ್ವಾಮೀಜಿಯವರು ಲಿಂಗೈಕ್ಯರಾದ ಬಳಿಕ, ನೂತನ ಪೀಠಾಧಿಪತಿ ನೇಮಕ ವಿವಾದ ಭುಗಿಲೇಳುತ್ತದೆ. ಗ್ರಾಮಸ್ಥರು ವಿದ್ವತ್ ಇರುವಂತಹ ಸ್ವಾಮೀಜಿಯನ್ನು ಪೀಠಾಧಿಪತಿ ಮಾಡಲು ಪಟ್ಟು ಹಿಡಿಯುತ್ತಾರೆ. ಆದರೆ ರಂಭಾಪುರಿ ಶ್ರೀಗಳು, ಲಿಂಗೈಕ್ಯರಾಗಿದ್ದ ಶ್ರೀ ಚಂದ್ರಶೇಖರ ಸ್ವಾಮೀಜಿಯ ತಂಗಿಯ ಮಗ ಕೆ ಎಂ ಗಂಗಾಧರ ಅವರನ್ನು ಪೀಠಾಧಿಪತಿಯನ್ನಾಗಿ ನೇಮಿಸುತ್ತಾರೆ. ಹೀಗಾಗಿ ವಿವಾದ ದೊಡ್ಡಮಟ್ಟಕ್ಕೆ ತಿರುಗಿ ಗಲಾಟೆಯೇ ನಡೆದಿದೆ. ಇದಾದ ಬಳಿಕ ಮಠದ ಪೀಠಾಧಿಪತಿ ವಿವಾದ ನ್ಯಾಯಾಲಯದ ಮೆಟ್ಟಿಲೇರುತ್ತದೆ. ಇನ್ನೂ ಕೂಡ ವಿವಾದ ಜಿಲ್ಲಾ ನ್ಯಾಯಾಲಯದಲ್ಲಿದೆ. ಹೀಗಿರುವಾಗ ಸದ್ಯದ ಪೀಠಾಧಿಪತಿ ಕೆ ಎಂ ಗಂಗಾ್ದರ ಅವರು ಮಠವನ್ನು ದುರಸ್ತಿ ಮಾಡಿಸುವುದಕ್ಕೆ, ಮಠಕ್ಕೆ ಸಂಬಂಧಿಸಿದ ಹೊಲದಲ್ಲಿ ಉಳುಮೆ ಮಾಡಿಸುವುದು ಹಾಗೂ ಇತರೆ ಚಟುವಟಿಕೆಗಳನ್ನು ನಡೆಸಿದ್ದನ್ನು ವಿರೋಧಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಕೆ.ಎಸ್.ಹನುಮಕ್ಕ ನಿಧನ

ಸುದ್ದಿಒನ್, ಚಿತ್ರದುರ್ಗ, ಮೇ. 18 : ನಗರದ ಸರಸ್ವತಿಪುರಂ ನಿವಾಸಿ ಕೆ.ಎಸ್ ಹನುಮಕ್ಕ(88) ಶನಿವಾರ ಮುಂಜಾನೆ ಚಿತ್ರದುರ್ಗದ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಮೃತರು ನಿವೃತ್ತ ಪ್ರಾಚಾರ್ಯ ಡಾ.ಸಂಗೇನಹಳ್ಳಿ ಅಶೋಕ್ ಕುಮಾರ್ ಸೇರಿದಂತೆ ಇಬ್ಬರು

ಈ ಸಮಸ್ಯೆ ಇರುವವರು ಕಬ್ಬಿನ ರಸವನ್ನು ಕುಡಿಯಬೇಡಿ….!

ಸುದ್ದಿಒನ್ : ಬೇಸಿಗೆಯಲ್ಲಿ ಮಾರುಕಟ್ಟೆಯಲ್ಲಿ ವಿವಿಧ ರೀತಿಯ ಜ್ಯೂಸ್, ತಂಪು ಪಾನೀಯಗಳ ಮಾರಾಟ ಜೋರಾಗಿಯೇ ನಡೆಯುತ್ತಿದೆ. ನಿಂಬೆ ಹಣ್ಣಿನ ರಸ, ಮಜ್ಜಿಗೆ ಮತ್ತು ಕಬ್ಬಿನ ರಸವನ್ನು ವ್ಯಾಪಕವಾಗಿ ಮಾರಾಟ ಮಾಡಲಾಗುತ್ತದೆ. ಕಬ್ಬಿನ ರಸವನ್ನು ಕುಡಿಯಲು

ಇಂದು ನಿಮಗೆ ಭೂ ವ್ಯವಹಾರಗಳಲ್ಲಿ ಉತ್ತಮ ಆದಾಯ ಸಿಗಲಿದೆ

ಈ ರಾಶಿಗಳ ಸಂಸಾರದಲ್ಲಿ ಏನಾಯ್ತು? ಆಶ್ಚರ್ಯ! ಇಂದು ನಿಮಗೆ ಭೂ ವ್ಯವಹಾರಗಳಲ್ಲಿ ಉತ್ತಮ ಆದಾಯ ಸಿಗಲಿದೆ, ಶನಿವಾರ ರಾಶಿ ಭವಿಷ್ಯ -ಮೇ-18,2024 ಸೂರ್ಯೋದಯ: 05:47, ಸೂರ್ಯಾಸ್ತ : 06:38 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ

error: Content is protected !!