Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಯಾವುದೇ ಕಾರಣಕ್ಕೂ ಮಂಡ್ಯ ಬಿಡಲ್ಲ ಎಂದ ಸುಮಲತಾ ಮಾತಿಗೆ ಹೆಚ್ಡಿಕೆ ಹೇಳಿದ್ದೇನು..?

---Advertisement---

 

ಮಂಡ್ಯ ಸಂಸದೆ ಸುಮಲತಾ ಕಳೆದ ಲೋಕಸಭಾ ಚುನಾವಣೆಯಲ್ಲಿ ನಿಖಿಲ್ ಕುಮಾರಸ್ವಾಮಿ ವಿರುದ್ಧ ಗೆಲುವು ಸಾಧಿಸಿದ್ದರು. ಸ್ವತಂತ್ರ ಅವಬ್ಯರ್ಥಿಯಾಗಿ. ಈಗ ಬಿಜೆಪಿಗೆ ಸೇರಿದ್ದಾರೆ. ಜೆಡಿಎಸ್ ಬಿಜೆಪಿ ಜೊತೆಗೆ ಮೈತ್ರಿಯಾಗಿದೆ. ಹೀಗಾಗಿ ಟಿಕೆಟ್ ಸಿಗುವ ಎಲ್ಲಾ ಸಾಧ್ಯತೆಗಳು ಕಡಿಮೆ ಇದೆ. ಕ್ಷೇತ್ರ ಬದಲಾಯಿಸುತ್ತಾರಾ ಎಂದು ಕಾತುರದಿಂದ ನೋಡುತ್ತಿದ್ದವರಿಗೆ, ನೋ ವೇ ಚಾನ್ಸೆ ಇಲ್ಲ ಎಂಬಂತ ಉತ್ತರ ನೀಡಿದ್ದಾರೆ.

 

ದರ್ಶನ್ ಸಿನಿಮಾ ರಂಗಕ್ಕೆ ಬಂದು 25 ವರ್ಷಗಳು ಕಳೆದಿವೆ. ಈ ಸುಸಂದರ್ಭವನ್ನು ಶ್ರೀರಂಗಪಟ್ಟಣದಲ್ಲಿ ಬೃಹತ್ ಕಾರ್ಯಕ್ರಮ ಮಾಡುವ ಮೂಲಕ ಆಚರಣೆ‌ ಮಾಡಲಾಗಿತ್ತು. ಈ ವೇಳೆ ಸಂಸದೆ ಸುಮಲತಾ ಎದುರಾಳುಗಳಿಗೆ ಉತ್ತರ ನೀಡಿದ್ದಾರೆ. ದರ್ಶನ್ ಹಾಗೂ ಯಶ್ ಅಂದು ಚುನಾವಣೆಯ ಸಂದರ್ಭದಲ್ಲಿ ಜೊತೆಗೆ ನಿಂತ ಕ್ಷಣವನ್ನು ನೆನೆದಿದ್ದಾರೆ. ಮುಂದೆಯೂ ನನ್ನ ಜೊತೆಗೆ ಇರುತ್ತಾರೆ ಎಂಬ ಆತ್ಮ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಈ ಮೂಲಕ ಮತ್ತೆ ಮಂಡ್ಯದಿಂದಾನೇ ನಿಲ್ಲುವ ಅಭಿಲಾಷೆ ವ್ಯಕ್ತಪಡಿಸಿದ್ದಾರೆ.

ಬಿಜೆಪಿ ಜೊತೆಗೆ ಮೈತ್ರಿ ಮಾಡಿಕೊಂಡಿರುವ ಜೆಡಿಎಸ್, ಯಾವುದೇ ಕಾರಣಕ್ಕೂ ಮಂಡ್ಯವನ್ನು ಬಿಟ್ಟುಕೊಡುವುದಕ್ಕೆ ಸಾಧ್ಯವಿಲ್ಲ. ನಾಲ್ಕೇ ಕ್ಷೇತ್ರದಲ್ಲಿ ಸ್ಪರ್ಧೆ ಮಾಡಿದರೂ, ಗೆಲ್ಲುವ ಕ್ಷೇತ್ರವನ್ನು ಆಯ್ಕೆ ಮಾಡಿಕೊಳ್ಳಲಿದೆ. ಹೀಗಾಗಿ ಮಂಡ್ಯ ಬಿಡಲು ಸಾಧ್ಯವೇ ಇಲ್ಲ. ಸೋತ ಕಡೆಯೇ ಗೆಲ್ಲಬೇಕು ಎಂಬ ಹಂಬಲವಿದೆ. ಈಗ ಸುಮಲತಾ ಮಂಡ್ಯದಲ್ಲಿ ನಿಲ್ಲುತ್ತೇನೆ ಎಂಬುದನ್ನು ಒತ್ತಿ ಒತ್ತು ಹೇಳಿದ್ದಾರೆ. ಈ ಬಗ್ಗೆ ಮಾಜಿ ಸಿಎಂ ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದು, ಸಂತೋಷ ಸಂತೋಷ ಎಂದಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...