Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಯುಗಾದಿ ನಂತರ ಒಳ್ಳೆ ಬೆಳೆ-ಮಳೆಯಾಗಲಿದೆ : ಕೋಡಿಶ್ರೀ

Facebook
Twitter
Telegram
WhatsApp

ಕೋಲಾರ: ಕೋಡಿಮಠದ ಡಾ.ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಅವರು ರಾಜ್ಯದ ಬಗ್ಗೆ ಭವಿಷ್ಯ ನುಡಿದಿದ್ದಾರೆ. ಕಳೆದ ವರ್ಷ ಮಳೆ ಗಗನ ಕಚ್ಚಿದ್ದು, ಬೆಳೆ ಇಲ್ಲದೆ ರೈತರು ಕಂಗಲಾಗಿದ್ದಾರೆ. ರಾಜ್ಯದೆಲ್ಲೆಡೆ ಬರದ ಪರಿಸ್ಥಿತಿ ತಾಂಡವವಾಡುತ್ತಿದೆ. ಇದೀಗ ರೈತರಿಗೆ ಖುಷಿ ಕೊಡುವಂತ, ಸಂತಸ ಪಡುವಂತ ಭವಿಷ್ಯವನ್ನು ಕೋಡಿಶ್ರೀ ಮಠದ ಶ್ರೀಗಳು ನುಡಿದಿದ್ದಾರೆ.

ಕೋಲಾರ ಜಿಲ್ಲೆ ಮಾಲೂರು ಪಟ್ಟಣದ ಕಾರ್ಯಕ್ರಮವೊಂದರಲ್ಲಿ ಮಾತನಾಡಿರುವ ಕೋಡಿ ಮಠದ ಡಾ.ಶಿವಾನಂದ ಶಿವಯೋಗಿ ಸ್ವಾಮೀಜಿ, ಯುಗಾದಿ ಕಳೆದ ನಂತರ ರಾಜ್ಯದಲ್ಲಿ ಒಳ್ಳೆಯ ಮಳೆ-ಬೆಳೆ ಆಗಲಿದೆ ಎಂಬ ಸಿಹಿ ಸುದ್ದಿ ನೀಡಿದ್ದಾರೆ. ಅವರ ಈ ಭವಿಷ್ಯವಾಣಿಯಿಂದ ರೈತರು ಸಮಾಧಾನಗೊಂಡಿದ್ದಾರೆ. ಬರದಿಂದ ತತ್ತರಿಸಿದ್ದ ರೈತರಿಗೆ ಕೋಡಿಶ್ರೀಗಳ ನುಡಿ ಸಮಾಧಾನ ತಂದಿದೆ.

ಇನ್ನು ಇದೇ ವೇಳೆ ರಾಜಕೀಯದ ಬಗ್ಗೆಯೂ ಮಾತನಾಡಿ, ಗ್ಯಾರಂಟಿಗಳಿಂದ ಸರ್ಕಾರ ನಡೆಯುತ್ತಿದೆಯಾ ಎಂಬ ಪ್ರಶ್ನೆಗೂ ಉತ್ತರಿಸಿ, ನನಗಿಂತ ನಿಮಗೆ ಚೆನ್ನಾಗಿ ಗೊತ್ತಿದೆ. ರಾಷ್ಟ್ರ ರಾಜಕಾರಣ ಕೂಡ ಯುಗಾದಿ ನಂತರವೇ ಗೊತ್ತಾಗಲಿದೆ‌ ಯುಗಾ್ಇ ನಂತರ ಭವಿಷ್ಯ ಬರಲಿದೆ. ಒಂದು ತಿಂಗಳು ಕಳೆದ ಮೇಲೆ ಮಳೆ ಬೆಳೆಯಾಗಲಿದೆ. ಜಾಗತಿಕ ಮಟ್ಟದಲ್ಲಿ ತೊಂದರೆ ಇದೆ. ಬೆಂಕಿ ಹಾವಳಿ, ನೀರಿನ ಹಾವಳಿ, ಯುದ್ಧ ಆಗುತ್ತದೆ. ಅನೇಕ ಸಾವು-ನೋವುಗಳು ಆಗುತ್ತವೆ. ಮತಾಂಧತೆ ಹೆಚ್ಚುತ್ತದೆ. ಬಾಂಬ್ ಸ್ಪೋಟವಾಗುತ್ತದೆ‌ ಭೂಕಂಪ ಆಗುತ್ತದೆ. ಧಾರ್ಮಿಕ ಮುಖಂಡನ ಸಾವು ಸಂಭವಿಸಲಿದೆ ಎಂಬುದಾಗಿ ಭವಿಷ್ಯ ನುಡಿದಿದ್ದಾರೆ. 2024ರ ಹೊಸ ವರ್ಷವೂ ಈ ಬಗ್ಗೆ ಭವಿಷ್ಯ ನುಡಿದಿದ್ದರು. ಅಕಾಲಿಕ ಮಳೆಯಾಗಲಿದೆ, ಜಗತ್ತಿಗೆ ಒಳ್ಳೆಯ ದಿನಗಳಿಲ್ಲ, ಬಾಂಬ್ ಸಿಡಿಯುವ ಸಂಭವವಿದೆ ಎಂದೆಲ್ಲಾ ತಿಳಿಸಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ನಾಳೆಯಿಂದ ಮೇ.17ರವರೆಗೂ ಎಲ್ಲಾ ಜಿಲ್ಲೆಗಳಲ್ಲೂ ಮಳೆಯ ಅಬ್ಬರ..!

ಕಳೆದ ಮೂರ್ನಾಲ್ಕು ದಿನದಿಂದ ವರುಣರಾಯನ ದರ್ಶನವಾಗುತ್ತಿದೆ. ಆದರೂ ಕೆಲವೊಂದು ಕಡೆ ಬಿಸಿ ಗಾಳಿಯ ಅನುಭವ ಮಾತ್ರ ಕಡಿಮೆಯಾಗಿಲ್ಲ. ಇಂದು ಸಂಜೆ ವೇಳೆಗೆ ಬೆಂಗಳೂರು ಸೇರಿದಂತೆ ಹಲವೆಡೆ ಜೋರು ಮಳೆಯಾಗಿದೆ. ಇದರಿಂದ ವಾಹನ ಸವಾರರು, ಕೆಲಸಕ್ಕೆ

ಚಿತ್ರದುರ್ಗ | ಮೊರಾರ್ಜಿ ದೇಸಾಯಿ ವಸತಿ ಶಾಲೆಗಳ ಎಸ್‌ಎಸ್‌ಎಲ್‌ಸಿ ಫಲಿತಾಂಶ : 100 ಕ್ಕೆ 100 ಫಲಿತಾಂಶ ಪಡೆದ 13 ಶಾಲೆಗಳು

ಸುದ್ದಿಒನ್, ಚಿತ್ರದುರ್ಗ, ಮೇ. 09 :   ಜಿಲ್ಲೆಯಲ್ಲಿ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ 35 ಮೊರಾರ್ಜಿ ದೇಸಾಯಿ/ಕಿತ್ತೂರು ರಾಣಿ ಚೆನ್ನಮ್ಮ/ಏಕಲವ್ಯ ಮಾದರಿ ವಸತಿ ಶಾಲೆಗಳ 2023-24ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ

ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ : 620 ಅಂಕಗಳೊಂದಿಗೆ ನಾಲ್ವರು ವಿದ್ಯಾರ್ಥಿಗಳು ಪ್ರಥಮ : ಜಿಲ್ಲೆಯ ಸಂಪೂರ್ಣ ಮಾಹಿತಿ ಇಲ್ಲಿದೆ….!

ಚಿತ್ರದುರ್ಗ. ಮೇ.09:  2023-24ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಚಿತ್ರದುರ್ಗ ಜಿಲ್ಲೆಗೆ ಶೇ.72.85 ಫಲಿತಾಂಶ ಲಭಿಸಿದೆ. ಜಿಲ್ಲೆಯ 14 ವಿದ್ಯಾರ್ಥಿಗಳು ಟಾಪರ್‌ಗಳಾಗಿ ಹೊರಹೊಮ್ಮಿದ್ದಾರೆ. ಚಿತ್ರದುರ್ಗ ನಗರದ ವಿದ್ಯಾವಿಕಾಸ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ಅಭಯ್.ಸಿ.ಐ, ಹಿರಿಯೂರಿನ

error: Content is protected !!