Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಈಶ್ವರಪ್ಪ ಅವರು ಗುಂಡಿಟ್ಟು ಕೊಲ್ಲಲು ಬಂದರೆ ಎದೆಕೊಟ್ಟು ನಿಲ್ಲುತ್ತೇನೆ : ಡಿಕೆ ಸುರೇಶ್

---Advertisement---

 

ಬೆಂಗಳೂರು: ಸಂಸದ ಡಿಕೆ ಸುರೇಶ್, ಮಾಜಿ ಸಚಿವ ಈಶ್ವರಪ್ಪ ಅವರಿಗೆ ತಿರುಗೇಟು ನೀಡಿದ್ದಾರೆ. ಈಶ್ವರಪ್ಪ ಅವರನ್ನು ಆದಷ್ಟು ಬೇಗನೆ ಭೇಟಿಯಾಗುತ್ತೇನೆ. ಹೆದರಿ ಓಡುವ ಹೇಡಿ ನಾನಲ್ಲ. ಅವರು ಗುಂಡಿಕ್ಕಿ ಕೊಲ್ಲಲು ಬಂದರೆ, ನಾನು ಎದೆಕೊಟ್ಟು ನಿಲ್ಲುತ್ತೇನೆ. ನಾನೊಬ್ಬ ಸಂಸದ ಸದಸ್ಯ ಎನ್ನುವುದಕ್ಕಿಂತ ಕನ್ನಡಿಗ ಎಂಬ ಕಾರಣಕ್ಕೆ ಧ್ವನಿ ಎತ್ತಿದ್ದೇನೆ ಎಂದು ತಿರುಗೇಟು ನೀಡಿದ್ದಾರೆ.

ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿಕೊಳ್ಳಲು ಹೇಡಿ ನಾನಲ್ಲ. ನಾನು ಓಡಿ ಹೋಗುವುದಿಲ್ಲ. ಈಶ್ಚರಪ್ಪನವರು ಕೊಲ್ಲಲು ಬಂದರೆ ಆ ಗುಂಡಿಗೆ ಎದೆ ಕೊಡುವವನು ನಾನು. ಅವರ ಮತ್ತು ನಮ್ಮ ನಡುವೆ ಯಾವುದೇ ರೀತಿಯ ಹಳೆಯ ದ್ವೇಷ ಇಲ್ಲ. ಈಶ್ವರಪ್ಪನವರು ಕೂಡ ಈ ರಾಜ್ಯಕ್ಕೆ ಅನೇಕ ಕೊಡುಗೆಯನ್ನು ನಾನಾ ಹಂತಗಳಲ್ಲಿ ನೀಡಿದ್ದಾರೆ. ಫುಲ್ ಸೆಟಲ್ಮೆಂಟ್, ಹಾಫ್ ಸೆಟಲ್ಮೆಂಟ್ ಅಂದ್ರೆ ಏನು ಅಂತಾ ಈಶ್ವರಪ್ಪ ಅವರ ಬಳಿಯೇ ಕೇಳಬೇಕು. ಅವರೇ ಬಹಳ ಚೆನ್ನಾಗಿ ವ್ಯಾಖ್ಯಾನ ಮಾಡುತ್ತಾರೆ. ಆಗಾಗ ಅವರ ಬಾಯಲ್ಲಿ ನುಡಿಮುತ್ತುಗಳು ಬೀಳುತ್ತಾ ಇರುತ್ತೆ ಎಂದಿದ್ದಾರೆ.

ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಅವರು ಡಿಕೆ ಬ್ರದರ್ಸ್ ಬಗ್ಗೆ ಇತ್ತಿಚೆಗೆ ಮಾತನಾಡಿದ್ದರು. ಡಿಕೆ ಸುರೇಶ್ ಅಂಥವರನ್ನು ಗುಂಡಿಕ್ಕಿ ಕೊಲ್ಲಬೇಕು ಎಂಬ ಮಾತನ್ನು ಹೇಳಿದ್ದರು. ಈ ವಿಚಾರವಾಗಿ ಡಿಕೆ ಶಿವಕುಮಾರ್ ಅವರು ಕೂಡ ತಿರುಗೇಟು ನೀಡಿದ್ದರು. ಇದೀಗ ಡಿಕೆ ಸುರೇಶ್ ಅವರು ಕೂಡ ಪ್ರತಿಕ್ರಿಯೆ ನೀಡಿದ್ದಾರೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment