ಚಿಕ್ಕಮಗಳೂರು: ಲೋಕಸಭಾ ಚುನಾವಣೆಗೆ ಬರದ ಸಿದ್ಧತೆ ನಡೆಯುತ್ತಿದೆ. ಈಗಾಗಲೇ ಕ್ಷೇತ್ರಗಳಲ್ಲಿ ರಾಜಕೀಯ ಪಕ್ಷಗಳು ಸಂಚಾರ ನಡೆಸುತ್ತಿವೆ. ಟಿಕೆಟ್ ಆಕಾಂಕ್ಷಿಗಳು ಕೂಡ ಜಾಸ್ತಿಯಾಗಿದ್ದಾರೆ. ಈ ಬೆನ್ನಲ್ಲೇ ಚಿಕ್ಕಮಗಳೂರು ಜನತೆ ಈ ಬಾರಿ ಶೋಭಾ ಕರಂದ್ಲಾಜೆಯವರ ಸ್ಪರ್ಧೆಯನ್ನು ನಿರಾಕರಣೆ ಮಾಡಿದ್ದಾರೆ. ಈ ಸಂಬಂಧ ಪತ್ರ ಚಳುವಳಿ ಶುರು ಮಾಡಿದ್ದಾರೆ.
‘ಮಾನ್ಯ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರೇ ನಾವೂ ಉಡುಪಿ, ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಮತದಾರರು. ಈ ಕ್ಷೇತ್ರದಲ್ಲಿ ಕುಮಾರಿ ಶೋಭಾ ಕರಂದ್ಲಾಜೆ ಅವರು ಲೋಕಸಭಾ ಸದಸ್ಯರಾಗಿರುತ್ತಾರೆ. ಇಲ್ಲಿಯವರೆಗೂ ಎರಡು ಬಾರಿ ಗೆಲ್ಲಿಸಿದ್ದೇವೆ. ಎರಡು ಬಾರಿ ಸದಸ್ಯರಾಗಿದ್ದಾರೆ. ಈ ಬಾರಿ ನಮ್ಮ ಕ್ಷೇತ್ರದಿಂದ ಅವರಿಗೆ ಟಿಕೆಟ್ ಕೊಡಬಾರದೆಂದು ಮನವಿ ಮಾಡುತ್ತಿದ್ದೇವೆ. ನೊಂದ ಕಾರ್ಯಕರ್ತ ಎಂದು ಪತ್ರದಲ್ಲಿ ಬರೆದಿದ್ದಾರೆ. ಈ ಪತ್ರಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿವೆ.

ಇನ್ನು ಪತ್ರಗಳನ್ನು ಹಂಚುತ್ತಿರುವ ಕಾರ್ಯಕರ್ತರು, ಪ್ರಧಾನಿ ಮೋದಿ ಹಾಗೂ ಜೆಪಿ ನಡ್ಡಾ ಹಾಗೂ ಅಮಿತ್ ಶಾ ಅವರಿಗೆ ಈ ಪತ್ರಗಳನ್ನು ತಲುಪಿಸಿದ್ದಾರೆ. ಹೊಸ ಮುಖಕ್ಕೆ ಟಿಕೆಟ್ ನೀಡಿ ಎಂದು ಮನವಿ ಮಾಡಿದ್ದಾರೆ. ಸದ್ಯ ಶೋಭಾ ಕರಂದ್ಲಾಜೆ ಅವರು ಕೇಂದ್ರ ಸಚಿವೆಯಾಗಿದ್ದಾರೆ. ಕ್ಷೇತ್ರದಲ್ಲಿ ಕಾಣಿಸಿಕೊಳ್ಳುವುದು ಕಡಿಮೆ ಎನ್ನಲಾಗುತ್ತಿದೆ. ಹೀಗಾಗಿ ಈ ಬಾರಿ ಬೇರೆ ಯಾರಿಗಾದರೂ ಟಿಕೆಟ್ ನೀಡಿ ಎಂದು ಜನರೇ ಮನವಿ ಮಾಡುತ್ತಿದ್ದಾರೆ. ಚುನಾವಣೆ ಎಂದರೆ ಮತದಾರರೇ ಅಂತಿಮವಾಗುತ್ತಾರೆ. ಹೀಗಾಗಿ ಅವರ ಅಭಿಪ್ರಾಯಗಳು ಬಹಳ ಮುಖ್ಯವಾಗುತ್ತವೆ. ಈಗ ಜನರೇ ಶೋಭಾ ಕರಂದ್ಲಾಜೆ ಅವರ ಸ್ಪರ್ಧೆ ಬೇಡ ಎನ್ನುತ್ತಿದ್ದಾರೆ. ಇದರ ಕಡೆಗೆ ಹೈಕಮಾಂಡ್ ಗಮನ ಕೊಡುತ್ತದಾ ಎಂಬುದನ್ನು ನೋಡಬೇಕಿದೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.



















