Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ವಿಪಕ್ಷ ನಾಯಕ ಆರ್ ಅಶೋಕ್ ವಿರುದ್ದ ಭಜರಂಗದಳ ಗರಂ : ಕಾರಣವೇನು ಗೊತ್ತಾ..?

---Advertisement---

 

 

ಬೆಂಗಳೂರು: ವಿಧಾನಮಂಡಲ ಅಧಿವೇಶನದಲ್ಲಿ ವಿಪಕ್ಷ ನಾಯಕ ಆರ್ ಅಶೋಕ್ ಮಂಗಳೂರಿನ ಘಟನೆಯೊಂದರ ಬಗ್ಗೆ ಮಾತನಾಡಿದ್ದರು. ನಾನು ಗೃಹ ಸಚಿವನಾಗಿದ್ದಾಗ ಮಂಗಳೂರಿನ ಘಟನೆಯ ಸಂಧರ್ಭದಲ್ಲಿ ಎಷ್ಟೇ ಒತ್ತಡವಿದ್ದರು, ಮುಲಾಜಿಲ್ಲದೆ ಒದ್ದು ಒಳಗೆ ಹಾಕಿದ್ದೆ ಎಂಬುದಾಗಿ ಹೇಳಿದ್ದರು. ಈ ವಿಚಾರವಾಗಿ ಭಜರಂಗದಳ ಆಕ್ರೋಶಗೊಂಡಿದೆ. ದಕ್ಷಿಣ ಕನ್ನಡ ಜಿಲ್ಲೆಯ ಭಜರಂಗದಳದ ಸಹ ಸಂಯೋಜಕ ಪುನೀತ್ ಅತ್ತಾವರ್ ಆಕ್ರೋಶ ಹೊರ ಹಾಕಿದ್ದಾರೆ.

 

ನೀವು ಆರ್ ಅಶೋಕ್ ಅಲ್ಲ..ನಿಮ್ಮ ಹೆಸರನ್ನು ಎ. ಅಶೋಕ್ ಅಂತ ಬದಲಾಯಿಸಿ ಬಿಡಿ ಅಡ್ಜೆಸ್ಟ್‌ಮೆಂಟ್ ಅಶೋಕ್ ಅವರೇ..! ನಿಮ್ಮ ನಾಲಗೆಯನ್ನು ನಾಲಗೆ ರೀತಿಯನ್ನು ಬಳಸಿ ಎಕ್ಕಡದ ರೀತಿ ಬಳಸಿಕೊಳ್ಳಬೇಡಿ. ಅಡ್ಜೆಸ್ಟ್‌ಮೆಂಟ್ ರಾಜಕಾರಣ ಎಂಬ ಗೊಚ್ಚೆಯಲ್ಲಿ ಹೊರಳಾಡುತ್ತಿರುವ ನಿಮಗೆ ಬಜರಂಗದಳದ ಕಾರ್ಯಕರ್ತರ ಹೆಸರು ಎತ್ತಲೂ ಯೋಗ್ಯತೆಯಿಲ್ಲ. ಸಿದ್ಧಾಂತಕ್ಕಾಗಿ ಹೋರಾಡುವ ಬಜರಂಗದಳ ಕಾರ್ಯಕರ್ತರ ಮೇಲೆ ಗೂಂಡಾ ಕಾಯ್ದೆ ಹಾಕಿ ಅವರನ್ನು ಸುಮ್ಮನಿರಿಸುವಷ್ಟು ದೊಡ್ಡವರು ನೀವಾಗಿಲ್ಲ.

 

ಬಜರಂಗದಳ ಕಾರ್ಯಕರ್ತರು ಹೋರಾಡುವುದು ನಿಮ್ಮ ಹಾಗೆ ವೈಯಕ್ತಿಕ ಲಾಭದ ಆಸೆಗಾಗಿ ಅಲ್ಲ. ನಿಮ್ಮ ರಾಜಕೀಯ ತೆವಲಿಗಾಗಿ ಬಜರಂಗದಳ ಕಾರ್ಯಕರ್ತರ ಬಗ್ಗೆ ಆಡಿದ ಮಾತನ್ನು ಹಿಂದೆಗೆದುಕೊಳ್ಳಿ. ಪ್ರತಿಪಕ್ಷ ನಾಯಕನಾಗಿರುವ ನೀವು ಒಂದಲ್ಲ ಒಂದು ದಿನ ಮಂಗಳೂರಿಗೆ ಬಂದೇ ಬರುತ್ತೀರಿ ಎಂಬ ಮಾತು ನೆನಪಿರಲಿ. ಹಿಂದೂ ವಿರೋಧಿ ಕೃತ್ಯಕ್ಕೆ ಪ್ರತಿರೋಧ ಒಡ್ಡಿ ಹೋರಾಡುವ ನಮಗೆ ನೀವೊಬ್ಬರು ಹೆಚ್ಚಾಗುವುದಿಲ್ಲ. ಒಂದಾ ಬಜರಂಗದಳದ ಕಾರ್ಯಕರ್ತರ ಬಗ್ಗೆ ಆಡಿದ ಮಾತುಗಳನ್ನು ಹಿಂದೆ ಪಡೆಯಿರಿ ಇಲ್ಲದಿದ್ದರೆ ಬಜರಂಗದಳದ ಕಾರ್ಯಕರ್ತರ ಪ್ರತಿರೋಧವನ್ನು ಎದುರಿಸಲು ಸಿದ್ಧರಾಗಿ ಎಂದು ಪುನೀತ್ ಅತ್ತಾವರ ಕಿಡಿಕಾರಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment