ಮಂಡ್ಯ: ಕಳೆದ ಬಾರಿಯ ಲೋಕಸಭಾ ಚುನಾವಣೆಯಲ್ಲೂ ಮಂಡ್ಯ ಕಣ ಸಿಕ್ಕಾಪಟ್ಟೆ ಸದ್ದು ಮಾಡಿತ್ತು. ಇದೀಗ ಈ ಬಾರಿಯ ಲೋಕಸಭೆಯಲ್ಲೂ ಹೆಚ್ಚಿನ ಗಮನ ಸೆಳೆಯುತ್ತಿದೆ. ಸುಮಲತಾ ಬಿಜೆಪಿಗೆ ಸೇರಿ ಆಗಿದೆ. ಆದರೆ ಮೈತ್ರಿ ಮಾಡಿಕೊಂಡಿರುವ ಕಾರಣ ಜೆಡಿಎಸ್, ಮಂಡ್ಯ ಕ್ಷೇತ್ರವನ್ನು ಬಿಟ್ಟುಕೊಡುವುದಕ್ಕೆ ಸುತಾರಾಮ್ ಒಪ್ಪುವುದಿಲ್ಲ. ದೊಡ್ಡಗೌಡರ ಅಳಿಯ ಡಾ. ಮಂಜುನಾಥ್ ನಿವೃತ್ತಿ ಕೂಡ ಪಡೆದಿದ್ದು, ರಾಜಕೀಯಕ್ಕೆ ಧುಮ್ಮುಕ್ಕುತ್ತಿದ್ದಾರೆ ಎನ್ನಲಾಗಿದೆ.
ಡಾ. ಮಂಜುನಾಥ್ ಅವರನ್ನು ಮಂಡ್ಯದಿಂದಾನೇ ಕಣಕ್ಕೆ ಇಳಿಸುವ ವಿಚಾರದ ಬಗ್ಗೆ ಡಾ. ಮಂಜುನಾಥ್ ಮಾತನಾಡಿದ್ದು, ಇದರ ಬಗ್ಗೆ ನಾನು ಇನ್ನೂ ಯಾವುದೇ ತೀರ್ಮಾನ ಮಾಡಿಲ್ಲ. ರಾಜಕೀಯಕ್ಕೆ ಬರಬೇಕಾ? ಲೋಕಸಭಾ ಚುನಾವಣೆಗೆ ನಿಲ್ಲಬೇಕಾ? ಎಂಬ ಬಗ್ಗೆ ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ. ಆರೋಗ್ಯ ಕ್ಷೇತ್ರದಲ್ಲಿ ಸಾಕಷ್ಟು ಸಾಧನೆ ಮಾಡಿದ ನಾನು ರಾಷ್ಟ್ರಕ್ಕೂ ಸೇವೆ ಮಾಡಲಿ ಅನ್ನೋದು ಜನರ ಬಯಕೆ ಎಂದರು.
ಬಾಲಗಂಗಾಧರನಾಥ ಸ್ವಾಮೀಜಿ ಜಯಂತ್ಸೋತ್ಸವ ಕಾರ್ಯಕ್ರಮದಲ್ಲಿ ಭಾಗಿಯಾದ ಡಾ.ಸಿ.ಎನ್ ಮಂಜುನಾಥ್ ಹಾಗೂ ಅವರ ಪತ್ನಿ ಹೆಚ್.ಡಿ ಅನುಸೂಯಾ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು. ಮಂಡ್ಯದಿಂದಲೇ ಡಾ.ಸಿ.ಎನ್ ಮಂಜುನಾಥ್ ಅವರು ಸ್ಪರ್ಧಿಸುತ್ತಾರಾ ಅನ್ನೋ ಪ್ರಶ್ನೆಗೆ ದೇವೇಗೌಡರ ಮಗಳು ಪ್ರತಿಕ್ರಿಯೆ ನೀಡಿದರು. ನೋಡಿ ಹುಟ್ಟಿದಾಗಲೇ ರಾಜಕೀಯದ ಮನೆಯಲ್ಲಿ ಹುಟ್ಟಿದವಳು ನಾನು. ನಾನು ಹುಟ್ಟಿದ ಮರು ದಿನವೇ ನಮ್ಮ ತಂದೆ ಎಂಎಲ್ಎ ಆದರು. ರಾಜಕೀಯದ ಏಳು-ಬೀಳುಗಳನ್ನ ನಾನು ನೋಡಿದ್ದೀನಿ. ಸದ್ಯದ ಪರಿಸ್ಥಿತಿಯಲ್ಲಿ ಡಾಕ್ಟರ್ ಸಿ.ಎನ್ ಮಂಜುನಾಥ್ ಅವರು ಜನ ಸೇವೆ ಮಾಡಿದ್ದಾರೆ ಎಂದಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.


















