ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 21 : ಎಸ್.ಜೆ.ಎಂ ಕಲಾ ವಾಣಿಜ್ಯ ಕಾಲೇಜಿನ ನಿವೃತ್ತ ಪ್ರಾಂಶುಪಾಲರಾದ ಪ್ರೊ. ಪಿ. ಶಿವಲಿಂಗಪ್ಪನವರು (63) ಅನಾರೋಗ್ಯದಿಂದ ಬೆಂಗಳೂರಿನ ಯಶವಂತಪುರದ ಮಣಿಪಾಲ್ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ.
ಮೃತರಿಗೆ ಪತ್ನಿ ಹಾಗೂ ಇಬ್ಬರು ಪುತ್ರರು ಹಾಗೂ ಅಪಾರ ಬಂಧು ಬಳಗವನ್ನು ಬಿಟ್ಟು ಅಗಲಿದ್ದಾರೆ.
ಇವರ ಅಂತ್ಯಕ್ರಿಯೆ ಕೋಟೆ ಮುಂಭಾಗದ ಬಳಿ ಇರುವ ಕೆಂಚಪ್ಪನ ಬಾವಿಯ ಹತ್ತಿರ ಮುಕ್ತಿಧಾಮದಲ್ಲಿ 22 ರಂದು ಗುರುವಾರ 4 ಗಂಟೆಗೆ ನಡೆಯಲಿದೆ ಎಂದು ಮೃತರ ಪುತ್ರ ಡಾ. ರಾಜೇಂದ್ರ ಪ್ರಸಾದ್ ತಿಳಿಸಿದ್ದಾರೆ.

ಮೃತರು ಈ ಹಿಂದೆ ಚಂದ್ರವಳ್ಳಿಯ ಎಸ್.ಜೆ.ಎಂ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಾಂಶುಪಾಲರಾಗಿ ಹಾಗೂ ಪದವಿ ಕಾಲೇಜಿನಲ್ಲಿ ಸಮಾಜ ಶಾಸ್ತ್ರ ವಿಭಾದ ಮುಖ್ಯಸ್ಥರಾಗಿ ಮತ್ತು ಮುರುಘಾಮಠದಲ್ಲಿ ಹಲವಾರು ವರ್ಷಗಳಿಂದ ಸೇವೆ ಸಲ್ಲಿಸಿದ್ದರು. ಪಿ.ಶಿವಲಿಂಗಪ್ಪ ನಿಧನಕ್ಕೆ ಎಸ್.ಜೆ.ಎಂ. ಕಾಲೇಜಿನ ಸಿಬ್ಬಂದಿ ವರ್ಗದವರು ಸಂತಾಪ ಸೂಚಿಸಿದ್ದಾರೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.









