Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ದುಬಾರಿ ಜಕಾತಿ ವಸೂಲಿ ಸೇರಿದಂತೆ ರೈತರ ವಿವಿಧ ಬೇಡಿಕೆ ಈಡೇರಿಸಿ : ನಗರಸಭೆ ಎದುರು ರೈತರ ಪ್ರತಿಭಟನೆ

---Advertisement---

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552

 

ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ.22 : ತರಕಾರಿ ಮಾರುಕಟ್ಟೆಯಲ್ಲಿ ಜಕಾತಿ ಶುಲ್ಕ ಕಡಿಮೆ ಮಾಡುವಂತೆ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ ವತಿಯಿಂದ ನಗರಸಭೆ ಎದುರು ಗುರುವಾರ ಪ್ರತಿಭಟನೆ ನಡೆಸಿ ವ್ಯವಸ್ಥಾಪಕಿ ಮಂಜುಳರವರಿಗೆ ಮನವಿ ಸಲ್ಲಿಸಲಾಯಿತು.

ರೈತರು ಮಾರುಕಟ್ಟೆಗೆ ಹೂವು, ಹಣ್ಣು, ತರಕಾರಿ, ಸೊಪ್ಪುಗಳನ್ನು ದಿನನಿತ್ಯವು ತರುತ್ತಾರೆ. ನಗರಸಭೆಯವರು ದುಬಾರಿ ಜಕಾತಿ ವಸೂಲು ಮಾಡುತ್ತಿದ್ದು, ಮೊದಲೆ ಬರಗಾಲದಲ್ಲಿ ಸಂಕಷ್ಟ ಅನುಭವಿಸುತ್ತಿರುವ ರೈತರಿಗೆ ಗಾಯದ ಮೇಲೆ ಬರೆ ಎಳೆದಂತಾಗುತ್ತದೆ. ನಗರದ ಹೊರ ವಲಯ ಚಳ್ಳಕೆರೆ ಬೈಪಾಸ್ ಸಮೀಪ ಸಾರ್ವಜನಿಕ ಶೌಚಾಲಯ ನಿರ್ಮಿಸಬೇಕು.

ಚಳ್ಳಕೆರೆ, ಬೆಂಗಳೂರು, ಹಿರಿಯೂರು ಕಡೆ ಪ್ರಯಾಣಿಸುವವರು ಇಲ್ಲಿ ಶೌಚಾಲಯವಿಲ್ಲದ ಪರದಾಡುವಂತಾಗಿದೆ. ರೈತರು, ಕೂಲಿ ಕಾರ್ಮಿಕರು, ಬೀದಿ ಬದಿ ವ್ಯಾಪಾರಿಗಳಿಗೂ ತೊಂದರೆಯಾಗುತ್ತಿದೆ. ನಗರಸಭೆಯವರು ಇತ್ತ ಗಮನ ಹರಿಸಿ ನಮ್ಮ ಬೇಡಿಕೆಗಳನ್ನು ಈಡೇರಿಸಬೇಕೆಂದು ಪ್ರತಿಭಟನಾಕಾರರು ಪಟ್ಟು ಹಿಡಿದರು.

ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ ವಾಸುದೇವ ಮೇಟಿ ಬಣದ ಜಿಲ್ಲಾಧ್ಯಕ್ಷ ಲಕ್ಷ್ಮಿಕಾಂತ್, ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಲೋಲಾಕ್ಷಮ್ಮ, ತಾಲ್ಲೂಕು ಅಧ್ಯಕ್ಷೆ ಪವಿತ್ರ ಬಿ.ಕೆ. ನಗರ ಘಟಕದ ಅಧ್ಯಕ್ಷೆ ಮಂಜುಳ, ಜಯಲಕ್ಷ್ಮಿ ಎನ್. ವಿಜಯಮ್ಮ, ರುದ್ರಮ್ಮ, ಕಣಿವೆಮಾರಮ್ಮ ಸಂಘದ ಅಧ್ಯಕ್ಷ ತಿಪ್ಪೇಸ್ವಾಮಿ, ನಾಗರಾಜ, ಮಂಜುನಾಥ, ಇನ್ನು ಅನೇಕರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...