Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಲಿಸುತ್ತಿದ್ದ ಲಾರಿಗೆ ಹಿಂಬದಿಯಿಂದ ಮತ್ತೊಂದು ಲಾರಿ ಡಿಕ್ಕಿ | ಚಾಲಕ ಸಾವು…!

---Advertisement---

 

ವರದಿ ಕೃಪೆ : ಸುರೇಶ್ ಬೆಳಗೆರೆ,
ಮೊ : 97398 75729

ಸುದ್ದಿಒನ್, ಚಳ್ಳಕೆರೆ, ಫೆಬ್ರವರಿ. 23 : ತಾಲೂಕಿನ ಸಾಣಿಕೆರೆ ಹಾಗೂ ಹೆಗ್ಗೆರೆ ಸಮೀಪದ ರಾಷ್ಟ್ರೀಯ ಹೆದ್ದಾರಿ 150 ಎ  ರಲ್ಲಿ ಗ್ರಾನೈಟ್ಸ್ ತುಂಬಿಕೊಂಡು ತೆರಳುತ್ತಿದ್ದ ಲಾರಿಗೆ ಹಿಂಬದಿಯಿಂದ ಈಚರ್ ಲಾರಿ ಡಿಕ್ಕಿ ಹೊಡೆದ ಪರಿಣಾಮ ಲಾರಿ ಚಾಲಕ ಅಶೋಕ್  ಸಾವನಪ್ಪಿದ್ದಾನೆ.

ಚಳ್ಳಕೆರೆ ನಗರದಿಂದ ಬೆಂಗಳೂರು ಕಡೆಗೆ ತೆರಳುತ್ತಿದ ಲಾರಿಗೆ ಹಿಂಬದಿಯಿಂದ ಬಂದ ಈಚರ್ ಲಾರಿ ಡಿಕ್ಕಿಯಾಗಿ ಅಪಘಾತ ಸಂಭವಿಸಿದ್ದು ಈ ಅಪಘಾತದಲ್ಲಿ ಈಚರ್ ಲಾರಿ ಚಾಲಕ  ಕಾಲು ಮುರಿದು ಗಂಭೀರ ಗಾಯಗೊಂಡಿರುತ್ತಾನೆ. ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಿದರೂ ಫಲಕರಿಯಾಗದೆ ಸಾವನಪ್ಪಿದ್ದಾನೆ.

ಈ ಘಟನೆಯಲ್ಲಿ ಈಚರ್ ಲಾರಿ ಮುಂಭಾಗ ಸಂಪೂರ್ಣ ನುಜ್ಜುಗುಜ್ಜಾಗಿದೆ. ಘಟನಾ ಸ್ಥಳಕ್ಕೆ ಚಳ್ಳಕೆರೆ  ಪೋಲೀಸ್ ಇನ್ಸ್ ಪೆಕ್ಟರ್ ಕೆ .ಕುಮಾರ್ ಹಾಗೂ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment