Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚುನಾವಣೆ ಹೊತ್ತಲ್ಲೇ ಆಸ್ತಿ ಹೆಚ್ಚಿಸಿಕೊಂಡ ಸಂಸದರ ಪಟ್ಟಿ ಬಹಿರಂಗ..!

---Advertisement---

ಚುನಾವಣೆಗಳಲ್ಲಿ ಆಸ್ತಿ ವಿವರಣೆಯನ್ನು ಅಭ್ಯರ್ಥಿಗಳು ನೀಡಲೇಬೇಕು. ಹೀಗಾಗಿ ಎಲೆಕ್ಷನ್ ಸಮಯದಲ್ಲಿ ಯಾರ್ಯಾರ ಆಸ್ತಿ ಎಷ್ಟಿದೆ‌ ಎಂಬುದು ತಿಳಿಯುತ್ತದೆ. ರಾಜಕಾರಣಿಗಳ ಆಸ್ತಿ ಕಡಿಮೆಯಾಗಿದ್ದೆ ಇಲ್ಲ. ಇದೀಗ ಲೋಕಸಭಾ ಚುನಾವಣೆಯ ಹೊತ್ತಲ್ಲಿ ಕಳೆದ ಇಪ್ಪತ್ತು ವರ್ಷಗಳಲ್ಲಿ ಆಸ್ತಿಯನ್ನು ಹೆಚ್ಚಿಸಿಕೊಂಡ ಸಂಸದರ ಪಟ್ಟಿ ಬಹಿರಂಗವಾಗಿದೆ.

ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಸಂಸ್ಥೆಯೂ ವರದಿ ಬಿಡುಗಡೆ ಮಾಡಿದ್ದಾರೆ. ಈ ವರದಿಯಲ್ಲಿ 23 ಸಂಸದರ ಪಟ್ಟಿ ಬಿಡುಗಡೆ ಮಾಡಲಾಗಿದೆ. ಅದರಲ್ಲಿ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಮನೇಕಾ ಗಾಂಧಿ ಸೇರಿದಂತೆ 23 ಸಂಸದರ ಪಟ್ಟಿ ಇದ್ದು, ಕರ್ನಾಟಕ ಸಂಸದರ ಹೆಸರು ಕೂಡ ಇದೆ. ಕರ್ನಾಟಕದ ವಿಜಯಪುರ ಕ್ಷೇತ್ರದ ಬಿಜೆಪಿ ಸಂಸದ ರಮೇಶ್ ಜಿಗಜಿಣಗಿ ಯವರ ಆಸ್ತಿ ಮೌಲ್ಯ ಗರಿಷ್ಠ ಪ್ರಮಾಣದಲ್ಲಿ ಏರಿಕೆ ಕಂಡಿದ್ದು, ಶೇ. 9,098ರಷ್ಟು ಏರಿಕೆಯಾಗಿದೆ. 2004ರಲ್ಲಿ ರೂ. 54.8 ಲಕ್ಷದಷ್ಟಿದ್ದ ಇವರ ಆಸ್ತಿ ಮೌಲ್ಯವು 2019ರ ವೇಳೆಗೆ ರೂ. 50.41 ಕೋಟಿಯಾಗಿದೆ.

ರಮೇಶ್ ಜಿಗಜಿಣಗಿ(ವಿಜಯಪುರ)- 54.8 ಲಕ್ಷದಷ್ಟಿದ್ದ ಆಸ್ತಿ ಮೌಲ್ಯ 50.41 ಕೋಟಿಗೆ ಏರಿಕೆಯಾಗಿದೆ. ಡಿ.ವಿ.ಸದಾನಂದ ಗೌಡ (ಬೆಂಗಳೂರು ಉತ್ತರ) ಆಸ್ತಿ ಮೌಲ್ಯವು ರೂ. 46.39 ಲಕ್ಷದಿಂದ ರೂ. 20.93 ಕೋಟಿಗೆ ಏರಿಕೆಯಾಗಿದೆ. ಸಂಸದ ಜಿ.ಎಂ.ಸಿದ್ದೇಶ್ವರ್ (ದಾವಣಗೆರೆ) ಆಸ್ತಿ ಮೌಲ್ಯವು ರೂ. 5.02 ಕೋಟಿಯಿಂದ ರೂ. 38.01 ಕೋಟಿಗೆ ಏರಿಕೆಯಾಗಿದೆ. ಪಿ.ಸಿ.ಗದ್ದಿಗೌಡರ್ (ಬಾಗಲಕೋಟೆ) ಆಸ್ತಿ ಮೌಲ್ಯವು ರೂ. 53.75 ಲಕ್ಷದಿಂದ ರೂ. 4.39 ಕೋಟಿಗೆ ಏರಿಕೆಯಾಗಿದೆ. ಇದು ಕಳೆದ ಇಪ್ಪತ್ತು ವರ್ಷದಲ್ಲಿ ಏರಿಕೆಯಾದ ಆಸ್ತಿಯಾಗಿದೆ. 2004ರಿಂದ ಪುನರಾಯ್ಕೆಗೊಳ್ಳುತ್ತಿರುವ 23 ಸಂಸದರ ಒಟ್ಟಾರೆ ಆಸ್ತಿ ಮೌಲ್ಯವು ರೂ. 35.18 ಕೋಟಿಯಿಂದ ರೂ. 402.79 ಕೋಟಿಗೆ ಏರಿಕೆಯಾಗಿದೆ ಎಂದು ತಿಳಿದು ಬಂದಿದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment