Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ವರ್ತೂರು ಸಂತೋಷ್ ವಿರುದ್ಧ ಕಾನೂನು ಸಮರಕ್ಕೆ ಸಿದ್ಧ : ಅಂತದ್ದೇನಾಯ್ತು ಗೊತ್ತಾ..?

---Advertisement---

ಮಂಡ್ಯ: ವರ್ತೂರು ಸಂತೋಷ್ ಹೆಚ್ಚು ಖ್ಯಾತಿ ಪಡೆದಿದ್ದೆ ಹಳ್ಳಿಕಾರ್ ತಳಿಗಳ ನಿರ್ವಹಣೆ ಮಾಡುತ್ತಿದ್ದೀನಿ ಅಂತ. ಹಳ್ಳಿಕಾರ್ ಒಡೆಯ ಎಂಬ ನೇಮ್ ಪ್ಲೇಟ್ ಕೂಡ ಹಾಕಿಕೊಂಡಿದ್ದಾರೆ. ಇದರಿಂದಾನೇ ಬಿಗ್ ಬಾಸ್ ಮನೆಗೂ ಹೋಗಿ ಬಂದಿದ್ದಾರೆ. ಆದರೆ ಬಿಗ್ ಬಾಸ್ ಮನೆಯಿಂದ ಬಂದ ಮೇಲೂ ಕ್ರೇಜ್ ಮಾತ್ರ ಕಡಿಮೆಯಾಗುತ್ತಿಲ್ಲ. ಇದೀಗ ಹಳ್ಳಿಕಾರ್ ಒಡೆಯ ಎನಿಸಿಕೊಳ್ಳುತ್ತಿರುವ ವರ್ತೂರು ಸಂತೋಷ್ ವಿರುದ್ಧ ಹಳ್ಳಿಕಾರ್ ಸಂರಕ್ಷಕರು ಕೋಪಗೊಂಡಿದ್ದಾರೆ. ವರ್ತೂರು ಸಂತೋಷ್ ವಿರುದ್ಧ ಕಾನೂನು ಸಮರಕ್ಕೆ ಮುಂದಾಗಿದ್ದಾರೆ.

 

ಕಾನೂನು ಸಮರಕ್ಕೆ ನಿಂತಿರುವ ಹಳ್ಳಿಕಾರ್ ಸಂರಕ್ಷಕರು ಇವರಿಂದ ಹಳ್ಳಿಕಾರ್ ಜಾನಾಂಗಕ್ಕೆ ಅಪಮಾನವಾಗಿದೆ ಎಂದಿದ್ದಾರೆ. ಹಳ್ಳಿಕಾರ್ ಒಡೆಯ ಅಂತ ಕರೆಸಿಕೊಳ್ಳುತ್ತಿರುವುದು ಸರಿಯಲ್ಲ. ಆ ರೀತಿ ಬಿಂಬಿಸಿಕೊಳ್ಳುತ್ತಿರುವುದು ಸರಿಯಲ್ಲ. ತಲಾತಲಾಂತರದಿಂದ ಹಳ್ಳಿಕಾರ್ ಸಂರಕ್ಷಣೆ ಮಾಡುತ್ತಿರುವ ರೈತರ ಭಾವನೆಗಳಿಗೆ ಇದು ಧಕ್ಕೆ ಉಂಟು ಮಾಡುತ್ತದೆ. ಇದರಿಂದ ಅವಮಾನವಾಗಿದೆ. ಅಷ್ಟೇ ಅಲ್ಲ ಇದರಿಂದ ಮುಂದಿನ ಪೀಳಿಗೆಗೆ ತಪ್ಪು ಸಂದೇಶ ರವಾನೆಯಾಗಲಿದೆ‌. ಗೂಗಲ್ ನಲ್ಲಿ ಕೂಡ ಛೇರ್ ಮೆನ್ ಆಫ್ ಆಲ್ ಇಂಡಿಯಾ ಹಳ್ಳಿಕಾರ್ ಕನ್ಸರ್ವೇಶನ್ ಎಂಬ ತಪ್ಪು ಮಾಹಿತಿ ರವಾನೆಯಾಗುತ್ತಿದೆ. ಎಲ್ಲಾ ದಾಖಲಾತಿಗಳನ್ನು ಸಂಗ್ರಹ ಮಾಡುತ್ತಿದ್ದೇವೆ. ನಂತರ ಕಾನೂನು ಹೋರಾಟ‌ ಮಾಡುತ್ತೇವೆ ಎಂದು ಹಳ್ಳಿಕಾರ್ ಸಂರಕ್ಷಕ ರವಿ ಪಟೇಲ್ ಎಚ್ಚರಿಸಿದ್ದಾರೆ.

ಈ ಹಿಂದೆಯೇ ಹಳ್ಳಿಕಾರ್ ಸಂರಕ್ಷಕರು ವರ್ತೂರು ಸಂತೋಷ್ ಅವರ ಬೆಂಬಲಿಗರಿಗೆ ತಿಳುವಳಿಕೆ ಹೇಳಲು ಪ್ರಯತ್ನ ನಡೆಸಿದ್ದರು. ಸುದ್ದಿಗೋಷ್ಟಿ ನಡೆಸಿ ವಿಷಯ ಮುಟ್ಟಿಸಿದ್ದರು. ಆದರೆ ಆ ಸಮಯದಲ್ಲಿ ಇಬ್ಬರ ನಡುವೆ ಜಟಾಪಟಿ ನಡೆದಿತ್ತು. ಆದರೆ ಬಿಗ್ ಬಾಸ್ ಮನೆಯಿಂದ ಹೊರ ಬಂದ ಮೇಲೆ ಏಕವಚನದಲ್ಲಿಯೇ ಹಿರಿಯ ಹಳ್ಳಿಕಾರ್ ಸಂರಕ್ಷಕರ ವಿರುದ್ಧ ಹರಿಹಾಯ್ದಿದ್ದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment