Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಕನ್ನಡ್ ಅಲ್ಲ ಕನ್ನಡ: ಅಂದು ಸುದೀಪ್.. ಇಂದು ರಾಹುಲ್

Facebook
Twitter
Telegram
WhatsApp

 

ಇವತ್ತಿನ ಸೋಷಿಯಲ್ ಮೀಡಯಾದಲ್ಲೆಲ್ಲಾ ಕೆ ಎಲ್ ರಾಹುಲ್ ಅವರ ವಿಡಿಯೋ ವೈರಲ್ ಆಗುತ್ತಿದೆ. ಕನ್ನಡ ಪ್ರೇಮವನ್ನು ಮೆರೆದ ಕೆ ಎಲ್ ರಾಹುಲ್ ಗೆ ಬಹುಪರಾಕ್ ಹಾಕುತ್ತಿದ್ದಾರೆ. ಅವರಿಗಿರುವ ಕನ್ನಡ ಪ್ರೇಮದ ಬಗ್ಗೆ ಕನ್ನಡಿಗರು ಹೆಮ್ಮೆಯಿಂದ ಕೊಂಡಾಡುತ್ತಿದ್ದಾರೆ. ಕನ್ನಡ್ ಎಂದವನಿಗೆ ಕನ್ನಡ್ ಅಲ್ಲ ಕನ್ನಡ ಎಂದು ತಿದ್ದಿದ ವಿಡಿಯೋ ವೈರಲ್ ಆಗಿದ್ದು, ರಾಹುಲ್ ಮತ್ತೊಮ್ಮೆ ಕನ್ನಡಿಗರ ಮನಸ್ಸು ಗೆದ್ದಿದ್ದಾರೆ.

 

ವಿಡಿಯೋದಲ್ಲಿ ಇರುವ ಸತ್ಯವೇನು..? ಕೆ ಎಲ್ ರಾಹುಲ್ ಬಳಿ ನಿಂತ ಡೈರೆಕ್ಷನ್ ಡಿಪಾರ್ಟ್ಮೆಂಟ್ ಹುಡುಗ ಕನ್ನಡ್ ಎಂದಿದ್ದಾರೆ. ಆಗ ಕೆ ಎಲ್ ರಾಹುಲ್ ಆ ಹುಡುಗನ ಮುಖ ನೋಡಿ ಏನು ಹೇಳಿದೆ ಎಂದು ಪ್ರಶ್ನಿಸಿದ್ದಾರೆ. ಮತ್ತೆ ಅದನ್ನೆ ಉಚ್ಛರಿಸಿದ ಆ ಹುಡುಗ ಕನ್ನಡ್ ಎಂದಿದ್ದಾರೆ. ಆಗ ರಾಹುಲ್ ಆ ಪದವನ್ನು ತಿದ್ದಿದ್ದು, ಏ ಬಾಯ್ ಅದು ಕನ್ನಡ್ ಅಲ್ಲ ಕನ್ನಡ ಎಂದು ಹೇಳಿಕೊಟ್ಟು, ಮತ್ತೊಮ್ಮೆ ಉಚ್ಛರಿಸುವಂತೆ ಹೇಳಿದ್ದಾರೆ. ಸರಿಯಾಗಿ ಹೇಳುವಂತೆ ಹೇಳಿಕೊಟ್ಟಿದ್ದಾರೆ. ಈ ವಿಡಿಯೋ ಸದ್ಯಕ್ಕೆ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಕನ್ನಡ ಪ್ರೇಮಕ್ಕೆ ಬಹುಪರಾಕ್ ಹಾಕಿದ್ದಾರೆ.

ಇನ್ನು ಮಾರ್ಚ್ 22ರಿಂದ ಐಪಿಎಲ್ ಶುರುವಾಗುತ್ತಿದೆ. ಅದರ ಪ್ರಮೋಷನ್ ವಿಡಿಯೋ ಇದಾಗಿದೆ ಎನ್ನಲಾಗುತ್ತಿದೆ. ಏನೇ ಆಗಲಿ ಪ್ರಮೋಷನ್ ವಿಚಾರಕ್ಕೂ ನಮ್ಮ ಕನ್ನಡವನ್ನೇ ತೆಗೆದುಕೊಂಡಿರುವುದು ಹೆಮ್ಮೆಯ ವಿಚಾರ. ಈ ಹಿಂದೆ ವಿಕ್ರಾಂತ್ ರೋಣ ಸಿನಿಮಾದ ಪ್ರಮೋಷನ್ ಸಮಯದಲ್ಲಿ ಕಿಚ್ಚ ಸುದೀಪ್, ಆ್ಯಂಕರ್ ಕನ್ನಡ್ ಎಂದಾಗ ಆ ಪದವನ್ನು ತಿದ್ದಿ, ಕನ್ನಡ್ ಅಲ್ಲ ಕನ್ನಡ ಎಂದು ಹೇಳಿಕೊಟ್ಟಿದ್ದರು. ಇದೀಗ ರಾಹುಲ್ ಅವರು ಅದೇ ರೀತಿ ನಡೆದುಕೊಂಡಿದ್ದು, ಇಬ್ಬರ ಕನ್ನಡ ಪ್ರೇಮಕ್ಕೆ ಕನ್ನಡಿಗರು ಹಾರ್ಟ್ ನೀಡಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯವರು ಕೆಲಸದಲ್ಲಿ ಎಷ್ಟೇ ಶ್ರದ್ಧೆಯಿಂದ ದುಡಿದರೂ ಅಪವಾದ, ನಿಂದನೆ, ಆರ್ಥಿಕ ನಷ್ಟ ತಪ್ಪಿದ್ದಲ್ಲ

ಈ ರಾಶಿಯವರು ಕೆಲಸದಲ್ಲಿ ಎಷ್ಟೇ ಶ್ರದ್ಧೆಯಿಂದ ದುಡಿದರೂ ಅಪವಾದ, ನಿಂದನೆ, ಆರ್ಥಿಕ ನಷ್ಟ ತಪ್ಪಿದ್ದಲ್ಲ. ಶುಕ್ರವಾರ- ರಾಶಿ ಭವಿಷ್ಯ ಮೇ-17,2024 ಸೂರ್ಯೋದಯ: 05:47, ಸೂರ್ಯಾಸ್ತ : 06:37 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ

ಚಿತ್ರದುರ್ಗದಲ್ಲಿ ಐವರ ಅಸ್ಥಿಪಂಜರ ಪ್ರಕರಣ | ಕೊನೆಗೂ ಸಿಕ್ತು ಸಾವಿನ ಸುಳಿವು: ಎಸ್.ಪಿ. ಮಾಹಿತಿ…!

ಸುದ್ದಿಒನ್, ಚಿತ್ರದುರ್ಗ, ಮೇ. 16 : 2023ರ ಡಿಸೆಂಬರ್ ನಲ್ಲಿ ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ಪ್ರಕರಣ ಅದು. ನಗರದ ಬೆಂಗಳೂರು ರಸ್ತೆಯಲ್ಲಿರುವ ಪಾಳು ಬಿದ್ದ ಮನೆಯಲ್ಲಿ ಐವರ ಮೃತದೇಹ ಪತ್ತೆಯಾಗಿತ್ತು. ಅದು ಅವರೆಲ್ಲಾ ಸಾವನ್ನಪ್ಪಿ

ನೈರುತ್ಯ ಪದವೀಧರ ಚುನಾವಣೆ : ಬಿಜೆಪಿ ವಿರುದ್ಧ ರಘುಪತಿ ಭಟ್ ಬಂಡಾಯ, ಪಕ್ಷೇತರ ಸ್ಪರ್ಧೆ

ಮೈಸೂರು: ವಿಧಾನಸಭಾ ಚುನಾವಣೆ, ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಹಳಬರಿಗೆ, ಒಂದಷ್ಡು ವಿವಾದಗಳಿದ್ದವರಿಗೆ ಟಿಕೆಟ್ ನಿರಾಕರಣೆ ಮಾಡಿತ್ತು. ಹೊಸ ಮುಖಗಳಿಗೆ ಮಣೆ ಹಾಕಲು ಹೋಗಿ, ಹಿರಿಯ ತಲೆಗಳು ಬಂಡಾಯವೆದ್ದಿದ್ದರು. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಟಿಕೆಟ್

error: Content is protected !!