Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಬೇಸಿಗೆ ಬಂತು : ಕಲ್ಲಂಗಡಿ ತಿನ್ನುವುದರಿಂದ ಏನೆಲ್ಲಾ ಲಾಭಗಳಿವೆ ಗೊತ್ತಾ..?

Facebook
Twitter
Telegram
WhatsApp

ಈ ಬಾರಿಯಂತೂ ಬೇಸಿಗೆ ಅವಧಿಗೂ ಮುನ್ನವೇ ಶುರುವಾಗಿದೆ. ಮಳೆಯ ಅಭಾವದಿಂದ ಬೇಸಿಗೆ ಜೋರಾಗಿದೆ. ಎಲ್ಲೆಡೆ ಮಳೆಯಿಲ್ಲದೆ ನೆಲ ಬಿಸಿಯಾಗಿದೆ. ಕೆರೆ ಕಟ್ಟೆಗಳು ಒಣಗಿ ನಿಂತಿವೆ. ಭೂಮಿಯ ತಾಪ ಜಾಸ್ತಿಯಾಗಿ, ಅವಧಿಗೂ ಮುನ್ನವೆ ಹೆಚ್ಚಿನ ಶಾಕ ಜನರ ಮೈ ತಾಕುತ್ತಿದೆ. ಈ ಬೇಸಿಗೆಯಲ್ಲಿ ಆರೋಗ್ಯವನ್ನು ಚೆನ್ನಾಗಿ ಕಾಪಾಡಿಕೊಳ್ಳುವುದು ಬಹಳ ಮುಖ್ಯ. ಅದರಲ್ಲೂ ದೇಹಕ್ಕೆ ನೀರಿನ ಅಂಶ ಬಹಳಷ್ಟು ಬೇಕಾಗಿರುತ್ತದೆ. ಹೀಗಾಗಿ ಕಲ್ಲಂಗಡಿ ಹಣ್ಣನ್ನು ಹೆಚ್ಚಿನದಾಗಿ ಸೇವಿಸಿ.

ಕಲ್ಲಂಗಡಿ ಹಣ್ಣು ಕೇವಲ ಬೇಸಿಗೆಯ ತಂಪನ್ನು ಮಾತ್ರ ನಿವಾರಿಸುವುದಿಲ್ಲ. ಹಲವು ಆರೋಗ್ಯಕರ ಲಾಭಗಳನ್ನು ಪಡೆಯಬಹುದಾಗಿದೆ. ಕಲ್ಲಂಗಡಿ ಹಣ್ಣು ತಿನ್ನುವುದರಿಂದ ದೇಹಕ್ಕೂ ತಂಪು, ಆಯಾಸವೂ ಕಡಿಮೆ, ಉಷ್ಣತೆಯ‌ ನಿಯಂತ್ರಣವೂ ಕಡಿಮೆಯಾಗುತ್ತೆ, ಚರ್ಮದ ಕಾಂತಿಯೂ ಹೆಚ್ಚುತ್ತದೆ.

 

* ಕಲ್ಲಂಗಡಿ ಹಣ್ಣು ಸೇವನೆಯಿಂದ ಹೃದಯದ ಆರೋಗ್ಯಕ್ಕೂ ಒಳ್ಳೆಯದು. ಇದರಲ್ಲಿ ಸಿಟ್ರುಲಿನ್ ಎಂಬ ಅಮೈನೋ ಆಮ್ಲದಿಂದಾಗಿ ದೇಹದಲ್ಲಿ ಉತ್ತಮ ರಕ್ತ ಸಂಚಾರವಾಗುತ್ತದೆ. ಇದರಿಂದ ಹೃದಯ ಉತ್ತಮವಾಗಿರುತ್ತದೆ.

* ಕಲ್ಲಂಗಡಿ ಹಣ್ಣಿನಿಂದ ಕೀಲುಗಳ ರಕ್ಷಣೆಯನ್ನು ಮಾಡಿಕೊಳ್ಳಬಹುದು. ಬೀಟಾ-ಕ್ರಿಪ್ಟೋಕ್ಸಾಂಥಿಯಾ ಎಂಬ ದ್ರವ್ಯ ಇರುತ್ತೆ. ಆ ದ್ರವ್ಯದಲ್ಲಿ ಕೀಲು ರಕ್ಷಣೆಯಾಗಲಿದೆ. ಕೀಲುಗಳಲ್ಲಿ ಉರಿಯೂರವಿದ್ದರೆ, ಸಂಧಿವಾತವಿದ್ದರೆ ಕಲ್ಲಂಗಡಿ ಹಣ್ಣಿನ ಸೇವನೆಯಿಂದ ಶಮನವಾಗಲಿದೆ.

* ಮುಖ್ಯವಾಗಿ ಕಣ್ಣುಗಳ ರಕ್ಷಣೆಯಾಗಬೇಕೆಂದರು ಕಲ್ಲಂಗಡಿ ಹಣ್ಣು ತಿನ್ನಬಹುದು. ವಿಟಮಿನ್ ಎ ಅಧಿಕಾವಾಗಿರುವ ಕಾರಣ, ಒಂದು ಪೀಸ್ ಕಲ್ಲಂಗಡಿ ಹಣ್ಣು ತಿಂದರು ಸಹ ಶೇಕಡಾ 9-10 ರಷ್ಟು ವಿಟಮಿನ್ ಎ ಸಿಗಲಿದೆ.

* ರಕ್ತದಲ್ಲಿನ ಸಕ್ಕರೆ ಪ್ರಮಾಣವನ್ನು ಕಡಿಮೆ ಮಾಡುತ್ತದೆ. ಕಲ್ಲಂಗಡಿಯಲ್ಲಿ ಗ್ಲೈಸೆಮೆಕ್ಸ್ ಇಂಡೆಕ್ಸ್ ಮೌಲ್ಯವನ್ನು ಹೊಂದಿದೆ. ಇದು ರಕ್ತದಲ್ಲಿನ ಸಕ್ಕರೆ‌ಮಟ್ಟವನ್ನು ನಿಯಂತ್ರಣದಲ್ಲಿಡಲು ಅನುಕೂಲವಾಗಿದೆ. ಹೀಗಾಗಿ ಬೇಸಿಗೆಯಲ್ಲಿ ತಂಪಾಗಿರುವುದಕ್ಕಷ್ಟೇ ಅಲ್ಲ, ಆರೋಗ್ಯ ಕಾಪಾಡಿಕೊಳ್ಳುವುದಕ್ಕೂ ಕಲ್ಲಂಗಡಿ ಸೇವಿಸಿ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಕೊತ್ತಂಬರಿ ಸೊಪ್ಪಿನ ಟೀ ಕೇಳಿದ್ದೀರಾ..? ಒಮ್ಮೆ ಮಾಡಿಕೊಂಡು ಕುಡಿಯಿರಿ : ಎಷ್ಟೆಲ್ಲಾ ಅನುಕೂಲ ಗೊತ್ತಾ ?

ಸುದ್ದಿಒನ್ : ಹಲವರಿಗೆ ಬೆಳಗ್ಗೆ ಚಹಾ ಕುಡಿಯುವ ಅಭ್ಯಾಸವಿರುತ್ತದೆ. ಅನೇಕ ಜನರು ಬೆಳಿಗ್ಗೆ ಹಾಲಿನಿಂದ ತಯಾರಿಸಿದ ಚಹಾ ಮತ್ತು ಕಾಫಿ ಕುಡಿಯುತ್ತಾರೆ. ಆದರೆ, ಕೆಲವರು ಗ್ರೀನ್ ಟೀ ಕುಡಿಯುತ್ತಾರೆ, ಇನ್ನು ಕೆಲವರು ಲೆಮನ್ ಟೀ

ಈ ರಾಶಿಯ ತಂದೆ ತಾಯಿಗೆ ಮಕ್ಕಳ ಸಂಸಾರದ ಚಿಂತೆ ಕಾಡಲಿದೆ.

ಈ ರಾಶಿಯ ತಂದೆ ತಾಯಿಗೆ ಮಕ್ಕಳ ಸಂಸಾರದ ಚಿಂತೆ ಕಾಡಲಿದೆ. ಗುರುವಾರ- ರಾಶಿ ಭವಿಷ್ಯ ಮೇ-9,2024 ಸೂರ್ಯೋದಯ: 05:50, ಸೂರ್ಯಾಸ್ತ : 06:35 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ , ಸಂವತ್2079,

ಅವಕಾಶ ಸಿಗದೆ ಅಲ್ಲು ಅರ್ಜುನ್ ಕೂಡ ನೊಂದಿದ್ದರು.. ಇಂದು ಪ್ಯಾನ್ ಇಂಡಿಯಾ ನಟ..!

ಇಂದು ಸ್ಟಾರ್ ನಟರಾಗಿರುವ, ಪ್ಯಾನ್ ಇಂಡಿಯಾ ಮಟ್ಟದಲ್ಲಿ ಗುರುತಿಸಿಕೊಳ್ಳುವ ನಟ-ನಟಿಯರ ಹಿಂದೆಯೂ ಸಾಕಷ್ಟು ಪರಿಶ್ರಮ ಅಡಗಿದೆ. ಆರಂಭದಲ್ಲಿ ಅವಕಾಶಕ್ಕಾಗಿ ಪರಿತಪಿಸಿದ್ದಾರೆ. ಅವಕಾಶ ಸಿಗದೆ ಅವಮಾನ ಎದುರಿಸಿದ್ದಾರೆ. ಅದರಲ್ಲಿ ಇಂದು ತೆಲುಗು ಇಂಡಸ್ಟ್ರಿಯ ಟಾಪ್ ಒನ್

error: Content is protected !!