Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಮಹತ್ವದ ಸಭೆ ಕರೆದ ಸುಮಲತಾ : ದರ್ಶನ್ ಮಾತಿಗೆ ಬರ್ತಾರಾ ಸಚ್ಚಿದಾನಂದ..?

---Advertisement---

ಕಳೆದ ಬಾರಿಯೂ ಮಂಡ್ಯ ಲೋಕಸಭಾ ಚುನಾವಣೆ ಸಿಕ್ಕಾಪಟ್ಟೆ ಹೈಪ್ ಕ್ರಿಯೇಟ್ ಮಾಡಿತ್ತು. ಈ ಬಾರಿಯೂ ಮಂಡ್ಯ ಕ್ಷೇತ್ರ ಬಿಸಿಬಿಸಿ ಕಣವಾಗುವ ಎಲ್ಲಾ ಸಾಧ್ಯತೆಗಳು ಕಾಣಿಸುತ್ತಿವೆ. ಅದರಲ್ಲೂ ಈ ಬಾರಿ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ಮಾಡಿಕೊಂಡಿದ್ದು, ದಳಪತಿಗಳು ಭದ್ರ ಕೋಟೆಯನ್ನು ಬಿಟ್ಟುಕೊಡುವುದಕ್ಕೆ ಸಾಧ್ಯವೇ ಇಲ್ಲ. ಹೀಗಾಗಿ ಮಂಡ್ಯದಿಂದ ಜೆಡಿಎಸ್ ಅಭ್ಯರ್ಥಿಯೇ ಸ್ಪರ್ಧೆ ನಡೆಸುವುದು ಪಕ್ಕಾ ಆಗಿದೆ.

ಆದರೆ ಸಂಸದೆ ಸುಮಲತಾ ಅವರು ಕೂಡ ಮಂಡ್ಯ ಬಿಟ್ಟುಕೊಡುವ ಮಾತೇ ಇಲ್ಲ ಎನ್ನುತ್ತಿದ್ದಾರೆ. ಮಂಡ್ಯದಿಂದಾನೇ ಸ್ಪರ್ಧೆ ಎನ್ನುತ್ತಿದ್ದಾರೆ. ಬಿಜೆಪಿಯಿಂದಾನೇ ಟಿಕೆಟ್ ಸಿಗುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಅದಕ್ಕಾಗಿಯೇ ಈಗಾಗಲೇ ಎಲ್ಲಾ ತಯಾರಿಯೂ ನಡೆಸಿದ್ದಾರೆ. ದೆಹಲಿಗೆ ಹೋಗಿ ಹೈಕಮಾಂಡ್ ನಾಯಕರನ್ನು ಭೇಟಿಯಾಗಿ ಬಂದಿದ್ದಾರೆ. ಇಂದು ಬೆಂಗಳೂರಿನಲ್ಲಿ ಚುನಾವಣೆ ಸಂಬಂಧ ಮಹತ್ವದ ಸಭೆ ನಡೆಸಲಿದ್ದಾರೆ. ಸಂಜೆ ವೇಳೆಗೆ ಈ ಸಭೆ ನಿಗದಿಯಾಗಿದೆ.

ಒಂದು ವೇಳೆ ಬಿಜೆಪಿಯಿಂದ ಟಿಕೆಟ್ ಸಿಗದೆ ಹೋದಲ್ಲಿ ಮತ್ತೆ ಪಕ್ಷೇತರ ಅಭ್ಯರ್ಥಿಯಾಗಿಯೂ ಸ್ಪರ್ಧೆ ಮಾಡಬಹುದು. ಕಳೆದ ಬಾರಿ ಇಂಡವಾಳು ಸಚ್ಚಿದಾನಂದ ಸೇರಿದಂತೆ ಹಲವರು ಸುಮಲತಾ ಬೆಂಬಲಕ್ಕೆ ನಿಂತಿದ್ದರು. ಆದರೆ ಕಳೆದ ಕೆಲ ದಿನಗಳಿಂದ ಸುಮಲತಾ ಆಪ್ತರೆನಿಸಿಕೊಂಡಿದ್ದ ಸಚ್ಚಿದಾನಂದ, ಅಂತರ ಕಾಯ್ದುಕೊಂಡಿದ್ದಾರೆ. ಮತ್ತೆ ಆಪ್ತರಿಗೆ ಗಾಳ ಹಾಕಿರುವ ಸುಮಲತಾ, ಸಚ್ಚಿದಾನಂದರ ಮನವೊಲಿಸಲು ದರ್ಶನ್ ಅವರ ಸಹಾಯ ಕೇಳಿದ್ದಾರೆ ಎನ್ನಲಾಗಿದೆ. ಕಳೆದ ಲೋಕಸಭಾ ಚುನಾವಣೆಯಲ್ಲಿ ದರ್ಶನ್ ಹಾಗೂ ಯಶ್ ಜೋಡೆತ್ತುಗಳಂತೆ ನಿಂತು ಸುಮಲತಾ ಗೆಲುವಿಗೆ ಕಾರಣವಾಗಿದ್ದರು. ಇದೀಗ ಈ ಬಾರಿಯೂ ಸುಮಲತಾ ಗೆಲುವಿಗೆ ಜೋಡೆತ್ತು ಒಂದಾಗುತ್ತಾರ ನೋಡಬೇಕಿದೆ. ಇಂದು ಸಂಜೆ ಸುಮಲತಾ ಅವರ ಬೆಂಗಳೂರು ನಿವಾಸದಲ್ಲಿ 100-150 ಬೆಂಬಲಿಗರ ಸಭೆ ನಡೆಸಲಿದ್ದಾರೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment