Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಶಿವಮೊಗ್ಗದಲ್ಲಿ ರೈತ ಗೋಗರೆದರು ಬಿಡದೆ ಅಡಿಕೆ ತೋಟ ಕಡಿದ ಅಧಿಕಾರಿಗಳು..!

---Advertisement---

ಕೃಷಿ ಮಾಡುವುದು ಎಂದರೆ ಸುಲಭದ ಕೆಲಸವಲ್ಲ. ಅದರಲ್ಲೂ ಅಡಿಕೆ – ತೆಂಗು ಬೆಳೆಯುವುದಕ್ಕೆ ಐದು ವರ್ಷಗಳ ಕಾಲ ಮಕ್ಕಳನ್ನು ಸಾಕಿದಂತೆ ಸಾಕುತ್ತಾರೆ. ಅಷ್ಟು ಕಷ್ಟ ಪಟ್ಟು, ನಿಷ್ಠೆಯಿಂದ ಸಾಕಿ ಬೆಳೆಸಿದ ಗಿಡಗಳನ್ನು ನೆಲಸಮ ಮಾಡಿದರೆ ರೈತನ ಮನಸ್ಥಿತಿ ಏನಾಗಬಹುದು. ಅಂಥದ್ದೆ ಒಂದು ಘಟನೆ ಶಿವಮೊಗ್ಗದಲ್ಲಿ ನಡೆದಿದೆ.

ಭದ್ರಾವತಿ-ತರಿಕೆರೆ ಗಡಿ ಪ್ರದೇಶದಲ್ಲಿರುವ ಲಕ್ಕವಳ್ಳಿಯ ಗೋಪಾಲ ಗ್ರಾಮದಲ್ಲಿ ಇರುವ ರೈತ ಸುರೇಶ್ ಸುಮಾರು ಒಂದು ಎಕರೆಯಲ್ಲಿ ಅಡಿಕೆ ತೋಟ ಮಾಡಿದ್ದಾರೆ. ಸುಮಾರು 450-500 ಅಡಿಕೆ ಗಿಡಗಳನ್ನು ಬೆಳೆದಿದ್ದರು. ಆದರೆ ಇಷ್ಟು ಗಿಡಗಳನ್ನು ಅಧಿಕಾರಿಗಳು ನಾಶ ಮಾಡಿದ್ದಾರೆ. ಆರ್ ಐ, ವಿಲೇಜ್ ಅಕೌಂಟೆಂಟ್, ಗ್ರಾಮ ಪಂಚಾಯತ್ ಸದಸ್ಯರು ಸೇರಿ ನಾಶ ಮಾಡಿದ್ದಾರೆ. ರೈತ ಸುರೇಶ್ ಗೋಗರೆದರು ಬಿಟ್ಟಿಲ್ಲ. ಸರ್ಕಾರಿ ಜಾಗವೆಂದು ಇದ್ದಬದ್ದ ಗಿಡಗಳನ್ನೆಲ್ಲ ಕತ್ತರಿಸಿ ಹಾಕಿದ್ದಾರೆ.

40 ವರ್ಷದಿಂದ ಉಳುಮೆ ಮಾಡಿಕೊಂಡು ಬಂದಿದ್ದರು. ಸಕ್ರಮಕ್ಕಾಗಿ ನ್ಯಾಯಾಲಯಕ್ಕೆ ಫಾರಂ ನಂ. 53 ರಲ್ಲಿ ಅರ್ಜಿ ಸಲ್ಲಿಸಿದ್ದರು. ಮುಗಿಲೇಶ್ವರಿ ಎಂಬುವವರ ಹೆಸರಿನಲ್ಲಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಆದರೆ ಪ್ರಕರಣ ನ್ಯಾಯಾಲಯದಲ್ಲಿದ್ದರು ಏಕಾಏಕಿ ಬಂದು ಅಡಿಕೆ ತೋಟ ನಾಶಪಡಿಸಿದ್ದಾರೆ. ಗ್ರಾ.ಪಂ. ಅಧಿಕಾರಿಗಳು ಊರಿನ ಸ್ಮಶಾನಕ್ಕೆ ಜಾಗ ಬೇಕೆಂದು ತೋಟ ನಾಶ ಮಾಡಿದ್ದಾರೆ. ತೋಟ ಕಟ್ಟಿದ ಕಾರಣ, ಬದಲಿ ಭೂಮಿ ನೀಡುತ್ತೇವೆಂದು ಹೇಳಿದ್ರೂ ಅಧಿಕಾರಿಗಳು ಒಪ್ಪದೆ ಅಡಿಕೆ ಮರಗಳನ್ನು ಕತ್ತರಿಸಿದ್ದಾರೆ. ಖಾಲಿ ಜಾಗ ನೀಡುತ್ತೇವೆಂದು ತಹಶೀಲ್ದಾರ್ ಗೆ ಹೇಳಿದ್ದರೂ ಕೂಡ ಮಾತು ಕೇಳದ ಪಂಚಾಯಿತಿ ಸದಸ್ಯರು ಮರ ಕಡಿದಿದ್ದಾರೆ ಎಂದು ರೈತ ಸುರೇಶ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...