Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ಪಾಕ್ ಗೆ ಶಾಕ್ | ರಾವಿ ನದಿ ನೀರನ್ನು ನಿಲ್ಲಿಸಿದ ಭಾರತ

---Advertisement---

ಸುದ್ದಿಒನ್ : ಭಾರತ ಮತ್ತು ಪಾಕಿಸ್ತಾನದ ನಡುವಿನ ಸಿಂಧೂ ನದಿ ಮತ್ತು ಅದರ ಉಪನದಿಗಳ ನೀರನ್ನು ಪರಿಣಾಮಕಾರಿಯಾಗಿ ಬಳಸಲು ಭಾರತ ಸಿದ್ಧವಾಗಿದೆ.

 

ಪಂಜಾಬ್ ಮತ್ತು ಜಮ್ಮು-ಕಾಶ್ಮೀರದ ಗಡಿಯಲ್ಲಿ ನಿರ್ಮಾಣವಾಗುತ್ತಿರುವ ಶಹಪುರ್ ಕಂಡಿ ಬ್ಯಾರೇಜ್ ನಿರ್ಮಾಣ ಕಾಮಗಾರಿ ಅಂತಿಮ ಹಂತಕ್ಕೆ ತಲುಪಿದ್ದು, ಭಾರತದಿಂದ ಪಾಕಿಸ್ತಾನಕ್ಕೆ ಹೋಗುತ್ತಿದ್ದ ರಾವಿ ನದಿ ನೀರನ್ನು ಕೇಂದ್ರ ಸರ್ಕಾರ ತಡೆದಿದೆ. ಭಾರತದಿಂದ ಪಾಕಿಸ್ತಾನಕ್ಕೆ ಹರಿಯುವ ರಾವಿ ನದಿಯ 1150 ಕ್ಯೂಸೆಕ್ ನೀರನ್ನು ಈಗ ಜಮ್ಮು ಮತ್ತು ಕಾಶ್ಮೀರಕ್ಕೆ ತಿರುಗಿಸಲಾಗುತ್ತಿದೆ ಎಂದು ವರದಿಯಾಗಿದೆ. ಪಾಕಿಸ್ತಾನಕ್ಕೆ ಹೋಗುವ ರಾವಿ ನದಿ ನೀರನ್ನು ತಿರುಗಿಸಿ ಕಥುವಾ ಮತ್ತು ಸಾಂಬಾ ಜಿಲ್ಲೆಗಳ 32 ಸಾವಿರ ಹೆಕ್ಟೇರ್ ಭೂಮಿಗೆ ನೀರಾವರಿ ನೀರು ಒದಗಿಸಲಾಗುವುದು.

ಸರಕಾರಿ ಮೂಲಗಳ ಪ್ರಕಾರ ಶಹಾಪುರ ಕಂಡಿ ಬ್ಯಾರೇಜ್‌ ಕಾಮಗಾರಿ ಪೂರ್ಣಗೊಳ್ಳುವ ಮೂಲಕ ಶಹಾಪುರದಲ್ಲಿ ನೀರು ಸಂಗ್ರಹಿಸುವ ಪ್ರಕ್ರಿಯೆ ಆರಂಭವಾಗಿದೆ. ಭಾರತ ಮತ್ತು ಪಾಕಿಸ್ತಾನ ನಡುವಿನ ಸಿಂಧೂ ಜಲ ಒಪ್ಪಂದದ ಪ್ರಕಾರ, ಭಾರತವು ಈಗ ರಾವಿ ನದಿ ನೀರನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳುತ್ತದೆ. ಹಳೆ ಲಖನ್‌ಪುರ ಅಣೆಕಟ್ಟಿನಿಂದ ಪಾಕಿಸ್ತಾನದ ಕಡೆಗೆ ಹರಿಯುತ್ತಿದ್ದ ನೀರನ್ನು ಈಗ ಅಲ್ಲಿನ ಜನರ ಅನುಕೂಲಕ್ಕಾಗಿ ಜಮ್ಮು ಮತ್ತು ಕಾಶ್ಮೀರ ಮತ್ತು ಪಂಜಾಬ್‌ಗೆ ತಿರುಗಿಸಲಾಗುತ್ತದೆ.

1995ರಲ್ಲಿ ಅಂದಿನ ಪ್ರಧಾನಿ ಪಿ.ವಿ.ನರಸಿಂಹರಾವ್ ಶಹಪುರ ಕಂಡಿ ಬ್ಯಾರೇಜ್ ಯೋಜನೆಗೆ ಶಂಕುಸ್ಥಾಪನೆ ನೆರವೇರಿಸಿದ್ದರು. ಜಮ್ಮು ಮತ್ತು ಕಾಶ್ಮೀರ ಮತ್ತು ಪಂಜಾಬ್ ಸರ್ಕಾರಗಳ ನಡುವಿನ ಭಿನ್ನಾಭಿಪ್ರಾಯದಿಂದಾಗಿ, ಯೋಜನೆಯು ದಶಕಗಳಿಂದ ಪ್ರಾರಂಭವಾಗದೆ ನಿಂತಿತ್ತು. ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಸಚಿವ ನರೇಂದ್ರ ಸಿಂಗ್ ತೋಮರ್ ಮಧ್ಯಸ್ಥಿಕೆ ವಹಿಸುವವರೆಗೂ ಈ ಯೋಜನೆಯ ಕಾಮಗಾರಿ ನಡೆಯಲಿಲ್ಲ.

2018ರ ನಂತರ ಶಹಾಪುರ ಕಂಡಿ ಬ್ಯಾರೇಜ್ ಕಾಮಗಾರಿ ಪುನರಾರಂಭವಾಯಿತು. ರೂ. 3300 ಕೋಟಿ ವೆಚ್ಚದ ಈ ಶಹಪುರ ಕಂಡಿ ಯೋಜನೆ ಮೂಲಕ ಸಾಗುವಳಿ ನೀರಿನ ಜತೆಗೆ 206 ಮೆಗಾವ್ಯಾಟ್ ವಿದ್ಯುತ್ ಉತ್ಪಾದಿಸುವ ಪ್ರಯತ್ನ ಮಾಡಲಾಗುತ್ತಿದೆ. ಅದರ ಹೊರತಾಗಿ ಈ ಪ್ರದೇಶವನ್ನು ಪ್ರವಾಸೋದ್ಯಮವಾಗಿ ಅಭಿವೃದ್ಧಿಪಡಿಸಬಹುದು ಎಂಬ ಭರವಸೆ ಸ್ಥಳೀಯ ಸಮುದಾಯದಲ್ಲಿದೆ.

ಇತ್ತೀಚೆಗೆ, ಭಾರತವು ಸಿಂಧೂ ನದಿಯ ಮತ್ತೊಂದು ಉಪನದಿಯಾದ ಚೆನಾಬ್ ನದಿಯ ನೀರನ್ನು ಸಮರ್ಥವಾಗಿ ಬಳಸಿಕೊಳ್ಳಲು ನಿರ್ಧರಿಸಿದೆ. ಜಮ್ಮು ಮತ್ತು ಕಾಶ್ಮೀರದ ರಾಟಲ್ ಹೈಡ್ರೋ ಎಲೆಕ್ಟ್ರಿಕ್ ಯೋಜನೆಯ ನಿರ್ಮಾಣವನ್ನು ವೇಗಗೊಳಿಸಲು ಚೆನಾಬ್ ನದಿಯ ನೀರನ್ನು ಕೂಡ ತಿರುಗಿಸಲಾಗಿದೆ. 1960 ರಲ್ಲಿ, ಅಂದಿನ ಭಾರತದ ಪ್ರಧಾನಿ ಜವಾಹರ್ ಲಾಲ್ ನೆಹರು ಮತ್ತು ಪಾಕಿಸ್ತಾನದ ಅಧ್ಯಕ್ಷ ಅಯೂಬ್ ಖಾನ್ ಅವರು ವಿಶ್ವ ಬ್ಯಾಂಕ್ ಮಧ್ಯಸ್ಥಿಕೆಯಲ್ಲಿ ಸಿಂಧೂ ನದಿ ನೀರಿನ ಒಪ್ಪಂದಕ್ಕೆ ಸಹಿ ಹಾಕಿದರು. ಈ ಒಪ್ಪಂದದ ಪ್ರಕಾರ.. ಭಾರತದ ಪೂರ್ವಕ್ಕಿರುವ ನದಿಗಳಾದ ಬಿಯಾಸ್, ರವಿ ಮತ್ತು ಸಟ್ಲೆಜ್.. ಸಿಂಧೂ, ಚೆನಾಬ್ ಮತ್ತು ಝೀಲಂ ನದಿಗಳ ಮೇಲೆ ಪಾಕಿಸ್ತಾನದ ಹಿಡಿತವಿದೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...