Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಶ್ರೀಶೈಲ ಭಕ್ತರಿಗೆ ಸೂಚನೆ ಮಾರ್ಚ್ 1 ರಿಂದ 11 ರವರೆಗೆ ಶ್ರೀಶೈಲ ಮಲ್ಲಿಕಾರ್ಜುನ ಸ್ವಾಮಿ ಬ್ರಹ್ಮೋತ್ಸವ

Facebook
Twitter
Telegram
WhatsApp

 

ಚಿತ್ರದುರ್ಗ. ಫೆ.26: ಆಂಧ್ರಪ್ರದೇಶದ ಶ್ರೀಶೈಲ ಮಲ್ಲಿಕಾರ್ಜುನ  ಮಹಾಕ್ಷೇತ್ರದಲ್ಲಿ ಮಾರ್ಚ್ 1 ರಿಂದ 11 ರವರೆಗೆ ಮಹಾಶಿವರಾತ್ರಿ ಬ್ರಹ್ಮರಥೋತ್ಸವ ಜರುಗಲಿದೆ.

ಈ ಉತ್ಸವ ನಿರ್ವಹಣೆಗಾಗಿ ವಿವಿಧ ವಿಸ್ತøತವಾದ ಏರ್ಪಾಟುಗಳನ್ನು ಮಾಡಲಾಗಿದ್ದು,  ಬ್ರಹ್ಮೋತ್ಸವದಲ್ಲಿ ಭಕ್ತರ ಜನದಟ್ಟಣೆಯ ನಿಯಂತ್ರಿಸುವ ಸದುದ್ದೇಶದಿಂದ ಭಕ್ತರಿಗೆ ಸ್ವಾಮಿಯ ಅಲಂಕಾರ ದರ್ಶನಕ್ಕೆ ಮಾತ್ರ ಅವಕಾಶ ನೀಡಿದೆ. ಭಕ್ತಾಧಿಗಳಿಗೆ ಉಚಿತ ದರ್ಶನವಲ್ಲದೇ, ಶೀಘ್ರ ದರ್ಶನಕ್ಕಾಗಿ ರೂ.200/, ಅತಿ ಶೀಘ್ರ ದರ್ಶನಕ್ಕಾಗಿ ರೂ.500/ ಪಾವತಿಸಬೇಕಾಗುತ್ತದೆ. ಈ ಟಿಕಟ್‍ಗಳನ್ನು  ದೇವಸ್ಥಾನದ ವೆಬ್‍ಸೈಟ್ www.srisailadevasthanam.org    ಮೂಲಕ ಆನ್‍ಲೈನ್ ಬುಕ್ಕಿಂಗ್ ಮಾಡಿಕೊಳ್ಳಬಹುದು. ಇಲ್ಲವೇ ದೇವಸ್ಥಾನದ ಕರೆಂಟ್ ಬುಕ್ಕಿಂಗ್ ಮೂಲಕ ತಕ್ಷಣವೇ ಪಡೆಯಲು ಅವಕಾಶ ಕಲ್ಪಿಸಲಾಗಿದೆ.

ಬ್ರಹ್ಮೋತ್ಸವದ ಪ್ರಾರಂಭದ ಐದು ದಿನಗಳು ಅಂದರೆ ಮಾರ್ಚ್ 1 ರಿಂದ 5 ರವರೆಗೆ ಜ್ಯೋತಿರ್ಮುಡಿ (ಇರುಮುಡಿ) ಇರುವ ಶಿವದೀಕ್ಷಾ ಭಕ್ತರಿಗೆ ಮಾತ್ರ ಹಂತ ಹಂತವಾಗಿ ನಿರ್ದಿಷ್ಟ ಸಮಯದಲ್ಲಿ ಸ್ವಾಮಿಯ ಉಚಿತ ಸ್ಪರ್ಶ್ ದರ್ಶನ ಕಲ್ಪಿಸಲಾಗುತ್ತದೆ. ಬ್ರಹ್ಮೋತ್ಸವ ಮುಗಿಯುವವರೆಗೂ ಎಲ್ಲಾ ಅರ್ಜಿತ (ಸಂಚಿತ) ಸೇವೆಗಳನ್ನು ಸಂಪೂರ್ಣವಾಗಿ ನಿಲ್ಲಿಸಲಾಗಿದೆ ಎಂದು ಶ್ರೀಶೈಲ ದೇವಸ್ಥಾನದ ಕಾರ್ಯನಿರ್ವಾಹಕ ಅಧಿಕಾರಿ ಡಿ. ಪೆದ್ದಿರಾಜು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯವರು ಕೆಲಸದಲ್ಲಿ ಎಷ್ಟೇ ಶ್ರದ್ಧೆಯಿಂದ ದುಡಿದರೂ ಅಪವಾದ, ನಿಂದನೆ, ಆರ್ಥಿಕ ನಷ್ಟ ತಪ್ಪಿದ್ದಲ್ಲ

ಈ ರಾಶಿಯವರು ಕೆಲಸದಲ್ಲಿ ಎಷ್ಟೇ ಶ್ರದ್ಧೆಯಿಂದ ದುಡಿದರೂ ಅಪವಾದ, ನಿಂದನೆ, ಆರ್ಥಿಕ ನಷ್ಟ ತಪ್ಪಿದ್ದಲ್ಲ. ಶುಕ್ರವಾರ- ರಾಶಿ ಭವಿಷ್ಯ ಮೇ-17,2024 ಸೂರ್ಯೋದಯ: 05:47, ಸೂರ್ಯಾಸ್ತ : 06:37 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ

ಚಿತ್ರದುರ್ಗದಲ್ಲಿ ಐವರ ಅಸ್ಥಿಪಂಜರ ಪ್ರಕರಣ | ಕೊನೆಗೂ ಸಿಕ್ತು ಸಾವಿನ ಸುಳಿವು: ಎಸ್.ಪಿ. ಮಾಹಿತಿ…!

ಸುದ್ದಿಒನ್, ಚಿತ್ರದುರ್ಗ, ಮೇ. 16 : 2023ರ ಡಿಸೆಂಬರ್ ನಲ್ಲಿ ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ಪ್ರಕರಣ ಅದು. ನಗರದ ಬೆಂಗಳೂರು ರಸ್ತೆಯಲ್ಲಿರುವ ಪಾಳು ಬಿದ್ದ ಮನೆಯಲ್ಲಿ ಐವರ ಮೃತದೇಹ ಪತ್ತೆಯಾಗಿತ್ತು. ಅದು ಅವರೆಲ್ಲಾ ಸಾವನ್ನಪ್ಪಿ

ನೈರುತ್ಯ ಪದವೀಧರ ಚುನಾವಣೆ : ಬಿಜೆಪಿ ವಿರುದ್ಧ ರಘುಪತಿ ಭಟ್ ಬಂಡಾಯ, ಪಕ್ಷೇತರ ಸ್ಪರ್ಧೆ

ಮೈಸೂರು: ವಿಧಾನಸಭಾ ಚುನಾವಣೆ, ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಹಳಬರಿಗೆ, ಒಂದಷ್ಡು ವಿವಾದಗಳಿದ್ದವರಿಗೆ ಟಿಕೆಟ್ ನಿರಾಕರಣೆ ಮಾಡಿತ್ತು. ಹೊಸ ಮುಖಗಳಿಗೆ ಮಣೆ ಹಾಕಲು ಹೋಗಿ, ಹಿರಿಯ ತಲೆಗಳು ಬಂಡಾಯವೆದ್ದಿದ್ದರು. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಟಿಕೆಟ್

error: Content is protected !!