Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಶ್ರೀಶೈಲ ಭಕ್ತರಿಗೆ ಸೂಚನೆ ಮಾರ್ಚ್ 1 ರಿಂದ 11 ರವರೆಗೆ ಶ್ರೀಶೈಲ ಮಲ್ಲಿಕಾರ್ಜುನ ಸ್ವಾಮಿ ಬ್ರಹ್ಮೋತ್ಸವ

---Advertisement---

 

ಚಿತ್ರದುರ್ಗ. ಫೆ.26: ಆಂಧ್ರಪ್ರದೇಶದ ಶ್ರೀಶೈಲ ಮಲ್ಲಿಕಾರ್ಜುನ  ಮಹಾಕ್ಷೇತ್ರದಲ್ಲಿ ಮಾರ್ಚ್ 1 ರಿಂದ 11 ರವರೆಗೆ ಮಹಾಶಿವರಾತ್ರಿ ಬ್ರಹ್ಮರಥೋತ್ಸವ ಜರುಗಲಿದೆ.

ಈ ಉತ್ಸವ ನಿರ್ವಹಣೆಗಾಗಿ ವಿವಿಧ ವಿಸ್ತøತವಾದ ಏರ್ಪಾಟುಗಳನ್ನು ಮಾಡಲಾಗಿದ್ದು,  ಬ್ರಹ್ಮೋತ್ಸವದಲ್ಲಿ ಭಕ್ತರ ಜನದಟ್ಟಣೆಯ ನಿಯಂತ್ರಿಸುವ ಸದುದ್ದೇಶದಿಂದ ಭಕ್ತರಿಗೆ ಸ್ವಾಮಿಯ ಅಲಂಕಾರ ದರ್ಶನಕ್ಕೆ ಮಾತ್ರ ಅವಕಾಶ ನೀಡಿದೆ. ಭಕ್ತಾಧಿಗಳಿಗೆ ಉಚಿತ ದರ್ಶನವಲ್ಲದೇ, ಶೀಘ್ರ ದರ್ಶನಕ್ಕಾಗಿ ರೂ.200/, ಅತಿ ಶೀಘ್ರ ದರ್ಶನಕ್ಕಾಗಿ ರೂ.500/ ಪಾವತಿಸಬೇಕಾಗುತ್ತದೆ. ಈ ಟಿಕಟ್‍ಗಳನ್ನು  ದೇವಸ್ಥಾನದ ವೆಬ್‍ಸೈಟ್ www.srisailadevasthanam.org    ಮೂಲಕ ಆನ್‍ಲೈನ್ ಬುಕ್ಕಿಂಗ್ ಮಾಡಿಕೊಳ್ಳಬಹುದು. ಇಲ್ಲವೇ ದೇವಸ್ಥಾನದ ಕರೆಂಟ್ ಬುಕ್ಕಿಂಗ್ ಮೂಲಕ ತಕ್ಷಣವೇ ಪಡೆಯಲು ಅವಕಾಶ ಕಲ್ಪಿಸಲಾಗಿದೆ.

ಬ್ರಹ್ಮೋತ್ಸವದ ಪ್ರಾರಂಭದ ಐದು ದಿನಗಳು ಅಂದರೆ ಮಾರ್ಚ್ 1 ರಿಂದ 5 ರವರೆಗೆ ಜ್ಯೋತಿರ್ಮುಡಿ (ಇರುಮುಡಿ) ಇರುವ ಶಿವದೀಕ್ಷಾ ಭಕ್ತರಿಗೆ ಮಾತ್ರ ಹಂತ ಹಂತವಾಗಿ ನಿರ್ದಿಷ್ಟ ಸಮಯದಲ್ಲಿ ಸ್ವಾಮಿಯ ಉಚಿತ ಸ್ಪರ್ಶ್ ದರ್ಶನ ಕಲ್ಪಿಸಲಾಗುತ್ತದೆ. ಬ್ರಹ್ಮೋತ್ಸವ ಮುಗಿಯುವವರೆಗೂ ಎಲ್ಲಾ ಅರ್ಜಿತ (ಸಂಚಿತ) ಸೇವೆಗಳನ್ನು ಸಂಪೂರ್ಣವಾಗಿ ನಿಲ್ಲಿಸಲಾಗಿದೆ ಎಂದು ಶ್ರೀಶೈಲ ದೇವಸ್ಥಾನದ ಕಾರ್ಯನಿರ್ವಾಹಕ ಅಧಿಕಾರಿ ಡಿ. ಪೆದ್ದಿರಾಜು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...