Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ರಾಜ್ಯಸಭೆಯಲ್ಲಿ ಕಾಂಗ್ರೆಸ್ ಗೆ ಭರ್ಜರಿ ಗೆಲುವು : ಮೈತ್ರಿಗೆ ಸೋಲು..!

---Advertisement---

 

ಬೆಂಗಳೂರು: ಇಂದು ರಾಜ್ಯಸಭಾ ಚುನಾವಣೆ ನಡೆದಿದ್ರಿ, ಫಲಿತಾಂಶವೂ ಹೊರ ಬಿದ್ದಿದೆ. ಇಂದಿನ ಚುನಾವಣೆ ಕುತೂಹಲದತ್ತ ಸಾಗಿತ್ತು. ಜೆಡಿಎಸ್ ನಿಂದ ಐದನೇ ಅಭ್ಯರ್ಥಿ ಸ್ಪರ್ಧಿಸಿದ್ದ ಕಾರಣ ಒಂದಿಷ್ಟು ಆತಂಕವೂ ಕಾಂಗ್ರೆಸ್ ಗೆ ಶುರುವಾಗಿತ್ತು. ಆದರೆ ಈ ಎಲ್ಲದರ ನಡುವೆ ಆಡತಾರೂಢ ಕಾಂಗ್ರೆಸ್ ಪಕ್ಷ ಭರ್ಜರಿಯಾಗಿ ಗೆಲುವು ಸಾಧಿಸಿದೆ. ಕಾಂಗ್ರೆಸ್ ನಿಂದ ಸ್ಪರ್ಧೆ ಮಾಡಿದ ಮೂವರು ಅಭ್ಯರ್ಥಿಗಳು ಗೆಲುವು ಕಂಡಿದ್ದಾರೆ.

 

ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಿದ್ದಂತ ಅಜಯ್ ಮಾಕನ್ -48, ನಾಸೀರ್ ಹುಸೇನ್ – 46, ಜಿ ಸಿ ಚಂದ್ರಶೇಖರ್ – 46 ಮತಗಳನ್ನು ಪಡೆಯುವ ಮೂಲಕ ಗೆಲುವು ಸಾಧಿಸಿದ್ದಾರೆ. ಇನ್ನು ಮೈತ್ರಿ ಪಕ್ಷದ ಅಭ್ಯರ್ಥಿಗಳು ಸೋಲು ಕಂಡಿದ್ದಾರೆ. ಬಿಜೆಪಿಯಿಂದ ಸ್ಪರ್ಧೆ ಮಾಡಿದ್ದ ನಾರಾಯಣ ಸಾ ಬಾಂಢಾಗೆ 47 ಮತ, ಕುಪೇಂದ್ರ ರೆಡ್ಡಿಗೆ 36 ಮತಗಳು ಸಿಕ್ಕಿವೆ. 47 ಮತ ಪಡೆದ ನಾರಾಯಣ ಬಾಂಢಾ ರಾಜ್ಯಸಭೆಗೆ ಮೊದಲ ಸದಸ್ಯರಾಗಿ ಆಯ್ಕೆಯಾಗಿದ್ದಾರೆ.

ಇಂದು ಬಿಜೆಪಿ ಶಾಸಕ ಎಸ್ ಟಿ ಸೋಮಶೇಖರ್ ಅಡ್ಡ ಮತದಾನ ಮಾಡಿದರೆ, ಶಿವರಾಮ್ ಹೆಬ್ಬಾರ್ ಮತದಾನಕ್ಕೆ ಗೈರಾಗಿದ್ದಾರೆ. ಈ ಗೆಲುವನ್ನು ಕಾಂಗ್ರೆಸ್ ಸಂಭ್ರಮಿಸಿದೆ. ಸಿಹಿ ತಿನ್ನಿಸಿ, ಗೆದ್ದವರಿಗೆ ಹಾರ ಹಾಕಿ ಸಂಭ್ರಮಾಚರಣೆ ಮಾಡಿದ್ದಾರೆ. ಗೆದ್ದವರ ಪರ ಘೋಷಣೆಗಳು ಕೇಳಿ ಬಂದಿವೆ. ಈ ಬಾರಿ ಕಾಂಗ್ರೆಸ್ ವಿರುದ್ಧ ಗೆಲ್ಲಲರೆಬೇಕೆಂದು ಸ್ಟಾಟರ್ಜಿ ರೂಪಿಸಿದ್ದ ಜೆಡಿಎಸ್ ಲೆಕ್ಕಚಾರ ಉಲ್ಟಾ ಆಗಿದೆ. ಕಾಂಗ್ರೆಸ್ ಪಕ್ಷಕ್ಕೆ ಗೆಲುವು ಸಿಕ್ಕಿದೆ. ವಿಧಾನಸಭಾ ಹಾಗೂ ರಾಜ್ಯಸಭೆಯಲ್ಲಿ ಗೆಲುವು ಪಡೆದು ಸಂತಸದಲ್ಲಿರುವ ಕಾಂಗ್ರೆಸ್ ಈಗ ಲೋಕಸಭೆಗೆ ತಯಾರಿ ನಡೆಸಬೇಕಿದೆ. ಅಲ್ಲಿಯೂ ಗೆಲ್ಲುವ ತಂತ್ರಗಾರಿಕೆ ಬಳಕೆ ಮಾಡುತ್ತಾ ನೋಡಬೇಕಿದೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment