Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ರಾಜ್ಯಸಭೆಯಲ್ಲಿ ಕಾಂಗ್ರೆಸ್ ಗೆ ಭರ್ಜರಿ ಗೆಲುವು : ಮೈತ್ರಿಗೆ ಸೋಲು..!

---Advertisement---

 

ಬೆಂಗಳೂರು: ಇಂದು ರಾಜ್ಯಸಭಾ ಚುನಾವಣೆ ನಡೆದಿದ್ರಿ, ಫಲಿತಾಂಶವೂ ಹೊರ ಬಿದ್ದಿದೆ. ಇಂದಿನ ಚುನಾವಣೆ ಕುತೂಹಲದತ್ತ ಸಾಗಿತ್ತು. ಜೆಡಿಎಸ್ ನಿಂದ ಐದನೇ ಅಭ್ಯರ್ಥಿ ಸ್ಪರ್ಧಿಸಿದ್ದ ಕಾರಣ ಒಂದಿಷ್ಟು ಆತಂಕವೂ ಕಾಂಗ್ರೆಸ್ ಗೆ ಶುರುವಾಗಿತ್ತು. ಆದರೆ ಈ ಎಲ್ಲದರ ನಡುವೆ ಆಡತಾರೂಢ ಕಾಂಗ್ರೆಸ್ ಪಕ್ಷ ಭರ್ಜರಿಯಾಗಿ ಗೆಲುವು ಸಾಧಿಸಿದೆ. ಕಾಂಗ್ರೆಸ್ ನಿಂದ ಸ್ಪರ್ಧೆ ಮಾಡಿದ ಮೂವರು ಅಭ್ಯರ್ಥಿಗಳು ಗೆಲುವು ಕಂಡಿದ್ದಾರೆ.

 

ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಿದ್ದಂತ ಅಜಯ್ ಮಾಕನ್ -48, ನಾಸೀರ್ ಹುಸೇನ್ – 46, ಜಿ ಸಿ ಚಂದ್ರಶೇಖರ್ – 46 ಮತಗಳನ್ನು ಪಡೆಯುವ ಮೂಲಕ ಗೆಲುವು ಸಾಧಿಸಿದ್ದಾರೆ. ಇನ್ನು ಮೈತ್ರಿ ಪಕ್ಷದ ಅಭ್ಯರ್ಥಿಗಳು ಸೋಲು ಕಂಡಿದ್ದಾರೆ. ಬಿಜೆಪಿಯಿಂದ ಸ್ಪರ್ಧೆ ಮಾಡಿದ್ದ ನಾರಾಯಣ ಸಾ ಬಾಂಢಾಗೆ 47 ಮತ, ಕುಪೇಂದ್ರ ರೆಡ್ಡಿಗೆ 36 ಮತಗಳು ಸಿಕ್ಕಿವೆ. 47 ಮತ ಪಡೆದ ನಾರಾಯಣ ಬಾಂಢಾ ರಾಜ್ಯಸಭೆಗೆ ಮೊದಲ ಸದಸ್ಯರಾಗಿ ಆಯ್ಕೆಯಾಗಿದ್ದಾರೆ.

ಇಂದು ಬಿಜೆಪಿ ಶಾಸಕ ಎಸ್ ಟಿ ಸೋಮಶೇಖರ್ ಅಡ್ಡ ಮತದಾನ ಮಾಡಿದರೆ, ಶಿವರಾಮ್ ಹೆಬ್ಬಾರ್ ಮತದಾನಕ್ಕೆ ಗೈರಾಗಿದ್ದಾರೆ. ಈ ಗೆಲುವನ್ನು ಕಾಂಗ್ರೆಸ್ ಸಂಭ್ರಮಿಸಿದೆ. ಸಿಹಿ ತಿನ್ನಿಸಿ, ಗೆದ್ದವರಿಗೆ ಹಾರ ಹಾಕಿ ಸಂಭ್ರಮಾಚರಣೆ ಮಾಡಿದ್ದಾರೆ. ಗೆದ್ದವರ ಪರ ಘೋಷಣೆಗಳು ಕೇಳಿ ಬಂದಿವೆ. ಈ ಬಾರಿ ಕಾಂಗ್ರೆಸ್ ವಿರುದ್ಧ ಗೆಲ್ಲಲರೆಬೇಕೆಂದು ಸ್ಟಾಟರ್ಜಿ ರೂಪಿಸಿದ್ದ ಜೆಡಿಎಸ್ ಲೆಕ್ಕಚಾರ ಉಲ್ಟಾ ಆಗಿದೆ. ಕಾಂಗ್ರೆಸ್ ಪಕ್ಷಕ್ಕೆ ಗೆಲುವು ಸಿಕ್ಕಿದೆ. ವಿಧಾನಸಭಾ ಹಾಗೂ ರಾಜ್ಯಸಭೆಯಲ್ಲಿ ಗೆಲುವು ಪಡೆದು ಸಂತಸದಲ್ಲಿರುವ ಕಾಂಗ್ರೆಸ್ ಈಗ ಲೋಕಸಭೆಗೆ ತಯಾರಿ ನಡೆಸಬೇಕಿದೆ. ಅಲ್ಲಿಯೂ ಗೆಲ್ಲುವ ತಂತ್ರಗಾರಿಕೆ ಬಳಕೆ ಮಾಡುತ್ತಾ ನೋಡಬೇಕಿದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment