Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ರಾಜ್ಯದ ರಕ್ಷಣೆಗಾಗಿ ಕಾಂಗ್ರೆಸ್ಸಿಗರೇ ವಿಧಾನ ಸೌಧ ಬಿಟ್ಟು ತೊಲಗಿ’ : ರಾಜ್ಯಸಭೆ ಫಲಿತಾಂಶದ ಬೆನ್ನಲ್ಲೇ ವಿಜಯೇಂದ್ರ ಅವರು ಹೀಗಂದಿದ್ಯಾಕೆ..?

---Advertisement---

ಬೆಂಗಳೂರು: ಇಂದು ರಾಜ್ಯಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಮೂವರು ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ. ಭರ್ಜರಿ ಗೆಲುವಿನ ಬಳಿಕ ಹರತಷೋದ್ಘಾರ ವ್ಯಕ್ತಪಡಿಸಿದ್ದಾರೆ. ಗೆಲುವು ಸಾಧಿಅಇದ ಅಭ್ಯರ್ಥಿಗಳ ಪರ ಆಯಾ ಬೆಂಬಲಿಗರು ಸೆಲೆಬ್ರೇಷನ್ ಮಾಡಿದ್ದಾರೆ. ಈ ವೇಳೆ ನಾಸೀರ್ ಹುಸೇನ್ ಬೆಂಬಲಿಗರು ಸಂಭ್ರಮಾಚರಣೆ ಮಾಡುವಾಗ ಪಾಕಿಸ್ತಾನದ ಪರ ಘೋಷಣೆ ಕೂಗಿದ್ದಾರೆ. ಈ ಘೋಷವಾಕ್ಯದ ವಿರುದ್ಧ ಇದೀಗ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಅವರು ಸಿಡಿದೆದ್ದಿದ್ದಾರೆ. ಟ್ವಿಟ್ಟರ್ ಆಕ್ರೋಶ ಹೊರ ಹಾಕಿದ್ದಾರೆ.

 

‘ಪಾಕಿಸ್ತಾನ್ ಜಿಂದಾಬಾದ್ ಎಂಬ ರಾಷ್ಟ್ರ ವಿದ್ರೋಹದ ಉಗ್ರ ಘೋಷಣೆ ಭಾರತದ ಪ್ರಜಾಪ್ರಭುತ್ವದ ದೇಗುಲ ವಿಧಾನ ಸೌಧದಲ್ಲೇ ಮೊಳಗಿದೆ ಎಂದರೆ ಕಾಂಗ್ರೆಸ್ ಇನ್ನೆಷ್ಟು ದೇಶ ಸುಡುವ ವಿಷಜಂತುಗಳನ್ನು ತನ್ನ ಮಡಿಲಲ್ಲಿ ಕಟ್ಟಿ ಕೊಂಡಿರಬಹುದು ಎಂದು ಅಂದಾಜಿಸಲು ಇಂದಿನ ಘಟನೆ ಸಾಕ್ಷಿ ಒದಗಿಸಿದೆ.

 

ರಾಜ್ಯ ಸಭೆಗೆ ಆಯ್ಕೆಮಾಡಿ ಕಳುಹಿಸಿರುವ ಸೈಯದ್ ನಾಸೀರ್ ಹುಸೇನ್ ಹಿಂದೆ ಇರುವ ಬೆಂಬಲಿಗರು ಪಾಕಿಸ್ತಾನಿ ಬೆಂಬಲಿತ ಉಗ್ರರೇ ಇರಬೇಕು, ‘ತನ್ನನು ರಕ್ಷಿಸಲು ತಮ್ಮ ಮನಃಸ್ಥಿತಿಯ ಕಾಂಗ್ರೆಸ್ ಸರ್ಕಾರ ಇರುವಾಗ ನಾವ್ಯಾರಿಗೆ ಹೆದರಬೇಕು’ ಎಂಬ ದುಷ್ಟ ಮನಸ್ಸಿನಿಂದ ಘೋಷಣೆ ಕೂಗಿರುವ ದೇಶ ವಿರೋಧಿ ನೀಚರನ್ನು ಈ ಕೂಡಲೇ ಬಂಧಿಸಿ ಕಠಿಣ ಶಿಕ್ಷೆಗೆ ಗುರಿ ಪಡಿಸಬೇಕು.
ಸಾಕ್ಷಿಗಳೆಲ್ಲವೂ ಕಣ್ಣೆದುರಿಗೇ ಇರುವಾಗ ದೇಶ ವಿರೋಧಿಗಳನ್ನು ರಕ್ಷಿಸಲು ಯತ್ನಿಸುವ ಪ್ರಯತ್ನ ನಡೆದರೆ ಮುಂದಾಗುವ ಪರಿಣಾಮಕ್ಕೆ ಕಾಂಗ್ರೆಸ್ ಸರ್ಕಾರವೇ ಹೊಣೆಯಾಗಲಿದೆ. ನಮ್ಮ ಮುಂದಿನ ಹೋರಾಟ “ರಾಜ್ಯದ ರಕ್ಷಣೆಗಾಗಿ ಕಾಂಗ್ರೆಸ್ಸಿಗರೇ ವಿಧಾನ ಸೌಧ ಬಿಟ್ಟು ತೊಲಗಿ” ಎಂದು ಟ್ವೀಟ್ ಮಾಡಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...