Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಪಾಕಿಸ್ತಾನ ಪರ ಘೋಷಣೆ ವಿಚಾರ : ಕಲಾಪದಲ್ಲಿ ಬಿಜೆಪಿ ಮತ್ತು ಜೆಡಿಎಸ್ ನಾಯಕರು ಆಕ್ರೋಶ

Facebook
Twitter
Telegram
WhatsApp

 

 

ಬೆಂಗಳೂರು: ನಿನ್ನೆ ರಾಜ್ಯಸಭಾ ಚುನಾವಣೆಯ ಫಲಿತಾಂಶ ಬಂದಾಗಿದೆ. ಕಾಂಗ್ರೆಸ್ ನಾಯಕರು ಸಂಭ್ರಮಾಚರಣೆ ವೇಳೆ ಪಾಕಿಸ್ತಾನದ ಪರ ಘೋಷಣೆ ಕೂಗಿದ್ದಾರೆಂದು ಬಿಜೆಪಿ ನಾಯಕರು ಕೆಂಡಾಮಂಡಲರಾಗಿದ್ದಾರೆ. ಇಂದು ವಿಧಾನಸಭಾ ಕಲಾಪ ಆರಂಭವಾಗುತ್ತಿದ್ದಂತೆ ಪಾಕಿಸ್ತಾನದ ಪರ ಘೋಷಣೆಯ ವಿಚಾರವೇ ಪ್ರತಿಧ್ವನಿಸಿದೆ.

ಕಲಾಪದಲ್ಲಿಯೇ ಈ ಸಂಬಂಧ ಬಿಜೆಪಿ ಹಾಗೂ ಜೆಡಿಎಸ್ ನಾಯಕರು ಆಕ್ರೋಶ ಹೊರ ಹಾಕಿ, ತೀವ್ರ ಗದ್ದಲ ಶುರು ಮಾಡಿದ್ದಾರೆ. ವಿಪಕ್ಷ ನಾಯಕ ಆರ್ ಅಶೋಕ್ ವಾಗ್ದಾಳಿ‌ ನಡೆಸಿ, ಪಾರ್ಲಿಮೆಂಟಿನಲ್ಲಿ ಯಾರೂ ಕೂಡ ಪಾಕಿಸ್ತಾನದ ಪರ ಘೋಷಣೆ ಕೂಗಿಲ್ಲ. ಇದು ಕರ್ನಾಟಕದ ಏಳು ಕೋಟಿ ಜನರ ಆತ್ಮ ಇರುವ ಜಾಗ. ಪಾಕಿಸ್ತಾನದ ಪರ ಘೋಷಣೆ ಕೂಗಿದ್ದು ರಾಜ್ಯದಲ್ಲಿ ಭಯದ ವಾತಾವರಣ ನಿರ್ಮಾಣ ಮಾಡಿದೆ‌. ಯಾರೂ ರಕ್ಷಣೆ ಕೊಡಬೇಕಾಗುತ್ತೋ, ಅವರೇ ರೆಡ್ ಕಾರ್ಪೆಟ್ ಹಾಕಿದ್ದಾರೆ. ಪಾಕಿಸ್ತಾನದ ಪರ ಘೋಷಣೆ ಕೂಗಿದವರು ಪಾಕಿಸ್ತಾನದವರೇ. ಇಲ್ಲಿ ಇನ್ನೆಷ್ಟು ಪಾಕಿಸ್ತಾನದವರು ಇದ್ದಾರೋ ಗೊತ್ತಿಲ್ಲ. ನಮಗೆ ಸಾಕಷ್ಟು ಭಯವಾಗುತ್ತಿದೆ. ಯೋಧರಿಗೆ ಹೇಗೆ ಉತ್ತರ ಕೊಡುವುದು ಎಂದು ಆರ್ ಅಶೋಕ್ ವಾಗ್ದಾಳು ನಡೆಸಿದ್ದಾರೆ.

ಇದೇ ವೇಳೆ ಮಧ್ಯಪ್ರವೇಶಿಸಿ ಮಾತನಾಡಿದ ಸಚಿವ ದಿನೇಶ್ ಗುಂಡೂರಾವ್, ನೀವೇ ಈ ರೀತಿಯಾದಂತಹ ಘಟನೆಗಳನ್ನು ಮಾಡಿಸಿರಬಹುದು ಎಂದರು. ಇದಕ್ಕೆ ಜಮೀರ್ ಕೂಡ ಉತ್ತರಿಸಿ, ಯಾರೇ ಘೋಷಣೆ ಕೂಗಿದರೂ ತಪ್ಪೆ. ದೇಶ ದ್ರೋಹಿಗಳೇ. ಈ ವಿಚಾರದಲ್ಲಿ ಎರಡು ಮಾತಿಲ್ಲ. ಬಿಜೆಪಿಯವರಿಗೆ ವಿಷಯಗಳೇ ಇಲ್ಲ. ಹಾಗಾಗಿ ಇದನ್ನು ಇಟ್ಟುಕೊಂಡು ಸಿಎಂ ರಾಜೀನಾಮೆ ವಿಚಾರವನ್ನು ಮಾತನಾಡುತ್ತಾರೆ‌. ನಿನ್ನೆ ವೇರೆ ಅವರಿಗೆ ಮುಖಭಂಗವಾಗಿದೆ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಎಸ್​ಎಸ್ಎಲ್​ಸಿ ಫಲಿತಾಂಶ : ವಿದ್ಯಾರ್ಥಿಗೆ ಕಾರ್ಯನಿರತ ಪತ್ರಕರ್ತರ ಸಂಘ, ವಿಶ್ವಕರ್ಮ ಸಮಾಜದಿಂದ ಅಭಿನಂದನೆ

ಸುದ್ದಿಒನ್, ಚಳ್ಳಕೆರೆ, ಮೇ. 10 :  ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಶೇ.85ರಷ್ಟು ಅಂಕ ಪಡೆದು ಉತ್ತೀರ್ಣರಾಗಿರುವ ಪತ್ರಕರ್ತ ಕೊರ್ಲಕುಂಟೆ ತಿಪ್ಪೇಸ್ವಾಮಿ ಅವರ ಪುತ್ರಿ ಕೆ.ಟಿ. ಅನುಪಮಾ ಅವರನ್ನು ಶುಕ್ರವಾರ ಚಳ್ಳಕೆರೆ ನಗರದ ತಮ್ಮ ನಿವಾಸದಲ್ಲಿ ತಾಲೂಕು

ಹಿರಿಯೂರು | ವಿಜೃಂಭಣೆಯಿಂದ ಜರುಗಿದ ಶ್ರೀ ಕಣಿವೆ ಮಾರಮ್ಮನ ರಥೋತ್ಸವ

ಸುದ್ದಿಒನ್, ಹಿರಿಯೂರು, ಮೇ. 10  : ತಾಲ್ಲೂಕಿನ ವಾಣಿವಿಲಾಸ ಜಲಾಶಯದ ಮುಂಭಾಗದಲ್ಲಿರುವ ಶ್ರೀ ಕಣಿವೆ ಮಾರಮ್ಮನ ಬ್ರಹ್ಮ ರಥೋತ್ಸವ ಶುಕ್ರವಾರ ಬಹಳ ವಿಜೃಂಭಣೆಯಿಂದ ಸಾವಿರಾರು ಭಕ್ತರ ಸಮ್ಮುಖದಲ್ಲಿ ನೆರವೇರಿತು. ಅಲಂಕರಿಸಿದ ರಥದಲ್ಲಿ ಉತ್ಸವಮೂರ್ತಿಯನ್ನು ಮೆರವಣಿಗೆಯೊಂದಿಗೆ

ಚಿತ್ರದುರ್ಗ | ಬಿದ್ದಿದ್ದ ಮರದ ಕೊಂಬೆ ತೆರವು : ಕಾರ್ಯಾಚರಣೆ ತಡವಾಗಿದ್ದು ಯಾಕೆ ?

ಸುದ್ದಿಒನ್, ಚಿತ್ರದುರ್ಗ, ಮೇ. 10 : ಜೆ.ಸಿ.ಆರ್. ಬಡಾವಣೆಯ ನಾಲ್ಕನೇ ಕ್ರಾಸ್‍ನಲ್ಲಿ ಬುಧವಾರ ಸಂಜೆ ಸುರಿದ ಮಳೆ ಮತ್ತು ಗಾಳಿಗೆ ದೊಡ್ಡ ಮರದ ಕೊಂಬೆಯೊಂದು ಮುರಿದು ಬಿದ್ದಿತ್ತು. ಅದೃಷ್ಟವಶಾತ್ ಯಾವುದೇ ಹಾನಿ ಸಂಭವಿಸಿರಲಿಲ್ಲ.  

error: Content is protected !!