Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಶಭ್ಬಾಷ್ ಸಿನಿಮಾದ 2ನೇ ಹಂತದ ಚಿತ್ರೀಕರಣ ಮಗಿಸಿದ ಚಿತ್ರತಂಡ

Facebook
Twitter
Telegram
WhatsApp

ಸುದ್ದಿಒನ್, ಬೆಂಗಳೂರು, ಫೆಬ್ರವರಿ. 28 : ರುದ್ರಶಿವ ನಿರ್ದೇಶನದ `ಶಭ್ಬಾಷ್’ ಸಿನಿಮಾ ಇದೀಗ ಎರಡನೇ ಹಂತದ ಚಿತ್ರೀಕರಣವನ್ನು ಮುಗಿಸಿದೆ. ಸುಲಲಿತವಾಗಿ ಚಿತ್ರೀಕರಣ ಮುಗಿಸಿದ ಸಂತಸದ ವಿಚಾರವನ್ನು ಚಿತ್ರತಂಡ ಹಂಚಿಕೊಂಡಿದೆ.

ಚನ್ನಗಿರಿಯಲ್ಲಿ ಮೊದಲನೇ ಹಂತದ ಚಿತ್ರೀಕರಣ ಮುಗಿಸಿಕೊಂಡಿದ್ದ ಚಿತ್ರತಂಡ, ಎರಡನೇ ಹಂತಕ್ಕೆ ಬೇರೆ ಬೇರೆ ಸ್ಥಳಗಳಿಗೆ ಭೇಟಿ ನೀಡಿದೆ. ಮಡಿಕೇರಿ ಸುತ್ತಮುತ್ತಲ ಚೆಂದದ ಪರಿಸರದಲ್ಲಿ ಎರಡನೇ ಹಂತದ ಚಿತ್ರೀಕರಣವನ್ನು ಮುಗಿಸಿಕೊಂಡಿದೆ.

ಸಿನಿಮಾದ ಎರಡನೇ ಹಂತದ ಚಿತ್ರೀಕರಣ ಮುಗಿಸಿದ ಅನುಭವ ಬಿಚ್ಚಿಟ್ಟ ನಿರ್ದೇಶಕ ರುದ್ರಶಿವ, ಅತ್ಯಂತ ಅಚ್ಚುಕಟ್ಟಾಗಿ ಪ್ಲಾನು ಮಾಡಿಕೊಂಡು, ಅದಕ್ಕೆ ತಕ್ಕುದಾಗಿಯೇ ಮುಂದಡಿ ಇಡುತ್ತಿದ್ದಾರೆ. ಅದರ ಭಾಗವಾಗಿಯೇ ಮಡಿಕೇರಿಯ ಗೋಣಿಕೊಪ್ಪ, ಬಿರನಾಣಿ ಮುಂತಾದ ಪ್ರದೇಶಗಳಲ್ಲಿ ಚಿತ್ರೀಕರಣ ನಡೆಸಿದ್ದಾರೆ. ಈ ಭಾಗದ ಟಾಟ ಟೀ ಎಸ್ಟೇಟ್, ಬೆಟ್ಟಗುಡ್ಡ, ಜಲಪಾತ ಮುಂತಾದೆಡೆಗಳಲ್ಲಿ ಬಹುಮುಖ್ಯ ಭಾಗಗಳನ್ನು ಸೆರೆಹಿಡಿಯಲಾಗಿದೆ. ದುರ್ಗಮವಾದ ಪ್ರದೇಶಗಳಲ್ಲಿ ಒಂದಿಡೀ ಚಿತ್ರತಂಡ ಅತ್ಯಂತ ಉತ್ಸಾಹದಿಂದ ಈ ಚಿತ್ರೀಕರಣದಲ್ಲಿ ಭಾಗಿಯಾಗಿದೆ.

ವಿಶೇಷವಾಗಿ, ಎರಡು ಹಾಡುಗಳನ್ನು ಈ ಸಂದರ್ಭದಲ್ಲಿ . ಇಲ್ಲಿ ವಾಸವಾಗಿರುವ ಜೇನುಕುರುಬರ ಹಾಡಿಗಳಿಗೆ ಭೇಟಿ ನೀಡಿದ್ದ ಚಿತ್ರತಂಡ, ಆ ಬುಡಕಟ್ಟು ಜನಾಂಗದ ಹಾಡೊಂದನ್ನು ಚಿತ್ರೀಕರಿಸಿಕೊಂಡಿದೆ. ಅದಕ್ಕೆ ಸಾಹಿತ್ಯ, ಸಂಗೀತವೆಲ್ಲ ಆ ಬುಡಕಟ್ಟು ಜನರದ್ದೇ ಎಂಬುದು ಅಸಲೀ ವಿಶೇಷ. ಒಟ್ಟಾರೆ ಶಭ್ಬಾಷ್ ಚಿತ್ರದ ಪ್ರಧಾನ ಆಕರ್ಷಣೆಗಳಲ್ಲಿ ಜೇನುಕುರುಬರ ಆ ಹಾಡೂ ಕೂಡಾ ಪ್ರಧಾನವಾಗಿ ಸೇರಿಕೊಂಡಿದೆ.
ಅಂದಹಾಗೆ, ಆರು ದಿನಗಳ ಕಾಲ ಮಡಿಕೇರಿ ಭಾಗದಲ್ಲಿಯೇ ಚಿತ್ರತಂಡ ಬೀಡುಬಿಟ್ಟಿತ್ತು. ಡ್ಯಾನ್ಸರ್ ಗಳು ಸೇರಿದಂತೆ ಇಡೀ ಚಿತ್ರತಂಡವೇ ಎರಡನೇ ಹಂತರ ಚಿತ್ರೀಕರಣದಲ್ಲಿ ಭಾಗಿಯಾಗಿತ್ತು. ಅದರಲ್ಲಿಯೂ ಒಂದು ದಿನ ಸಂಜೆ ಆರು ಗಂಟೆಯಿಂದ ಮಾರನೇ ದಿನ ಮುಂಜಾನೆ ಆರು ಗಂಟೆಯವರೆಗೂ ಅವ್ಯಾಹತವಾಗಿ ಚಿತ್ರೀಕರಣ ನಡೆಸಲಾಗಿದೆ. ಮಡಿಕೇರಿ ಅಂದಮೇಲೆ ಅಲ್ಲಿನ ಮಂಜು, ಚಳಿಯ ತೀವ್ರತೆ ಎಂಥಾದ್ದೆಂಬುದು ಎಲ್ಲರಿಗೂ ತಿಳಿದಿರುತ್ತೆ. ಅದರ ನಡುವೆಯೂ ಅಹೋರಾತ್ರಿ ಚಿತ್ರೀಕರಣ ನಡೆಸಿದ ರೋಮಾಂಚಕ ಕ್ಷಣಗಳಿಗೆ ಚಿತ್ರತಂಡ ಸಾಕ್ಷಿಯಾಗಿದೆ.

ಓಂ ಸಾಯಿ ಪ್ರಕಾಶ್ ಸೇರಿದಂತೆ ಘಟಾನುಘಟಿ ನಿರ್ದೇಶಕರ ಗರಡಿಯಲ್ಲಿ ಪಳಗಿಕೊಂಡಿರುವ ರುದ್ರಶಿವ ನಿರ್ದೇಶನದ ಮೊದಲ ಚಿತ್ರವಿದು. ಪವೀಂದ್ರ ಮುತ್ತಪ್ಪ ಈ ಚಿತ್ರವನ್ನು ಏಸ್ 22 (ACE 22) ಬ್ಯಾನರಿನಡಿಯಲ್ಲಿ ನಿರ್ಮಾಣ ಮಾಡಿದ್ದಾರೆ. ಈಗಾಗಲೇ `ಕ’ ಮತ್ತು `ಮಳೆಬಿಲ್ಲು’ ಸಿನಿಮಾಗಳಲ್ಲಿ ನಟಿಸಿರುವ ಶರತ್ ನಾಯಕನಾಗಿ ನಟಿಸಿದ್ದರೆ, ನಿಸರ್ಗ ನಾಯಕಿಯಾಗಿ ಸಾಥ್ ಕೊಟ್ಟಿದ್ದಾರೆ. ಇದೀಗ ಎರಡನೇ ಹಂತದ ಚಿತ್ರೀಕರಣವನ್ನು ಯಶಸ್ವಿಯಾಗಿ ಮುಗಿಸಿಕೊಂಡಿರುವ ಚಿತ್ರತಂಡ, ಮೂರನೇ ಹಂತದ ಚಿತ್ರೀಕರಣದತ್ತ ಸಾಗುತ್ತಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಪ್ರಜ್ವಲ್ ವಿಡಿಯೋ ಕೇಸ್ : ದೇಹದ ಆರೋಗ್ಯ ಮಾತ್ರವಲ್ಲ ಸಮಾಜದ ಆರೋಗ್ಯವನ್ನು ಸುಧಾರಿಸಬೇಕು ಡಾ. ಮಂಜುನಾಥ್

ರಾಮನಗರ: ರಾಜ್ಯದಲ್ಲಷ್ಟೇ ಅಲ್ಲ ದೇಶದಲ್ಲೂ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋ ಪ್ರಕರಣ ಸದ್ದು ಮಾಡುತ್ತಿದೆ. ಎಸ್ಐಟಿ ಅಧಿಕಾರಿಗಳು ಪ್ರಜ್ವಲ್ ರೇವಣ್ಣ ತನಿಖೆಗೆ ಕಾಯುತ್ತಿದ್ದಾರೆ. ಆದರೆ ಪ್ರಜ್ವಲ್ ರೇವಣ್ಣ ರಾಜ್ಯಕ್ಕೆ ಬರುವ ಸಾಹಸ ಮಾಡುತ್ತಿಲ್ಲ.

ಸರ್ಕಾರಿ ಮತ್ತು ಖಾಸಗಿ ಶಾಲೆಗಳ ಗಂಭೀರ ಸಮಸ್ಯೆಗಳ ಪರಿಹಾರಕ್ಕೆ ಡಿ.ಟಿ. ಶ್ರೀನಿವಾಸ್ ಅವರನ್ನು ಬೆಂಬಲಿಸಿ : ಶಾಸಕ ಟಿ. ರಘುಮೂರ್ತಿ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳಗೆರೆ ಮೊ : 97398 75729 ಸುದ್ದಿಒನ್, ಚಳ್ಳಕೆರೆ, ಮೇ. 18 : ಜನಪರ ಆಡಳಿತ ಮಾಡುತ್ತಿರುವ ಕಾಂಗ್ರೆಸ್ ಸರ್ಕಾರ ಸರ್ವರಿಗೂ ಅನುಕೂಲವಾಗುವಂತೆ ರೂಪಿಸುವ ಯೋಜನೆಗಳು

ಬೆಂಗಳೂರು ಸೇರಿದಂತೆ ಹಲವೆಡೆ ಜೋರು ಮಳೆ : ಆರ್ಸಿಬಿ ಮ್ಯಾಚ್ ನೋಡುವ ಆಸೆ ಕಿತ್ತುಕೊಂಡನಾ ವರುಣರಾಯ..!

ಇಂದು ಬೆಳಗ್ಗೆಯಿಂದಾನೇ ಮೋಡಕವಿದ ವಾತಾವರಣ ಮನೆ ಮಾಡಿತ್ತು. ಮಧ್ಯಾಹ್ನದ ವೇಳೆಗೆ ಬೆಂಗಳೂರು ನಗರದಾದ್ಯಂತ ಜೋರು ಮಳೆಯಾಗಿದೆ. ವಿಜಯನಗರ, ರಾಜಾಜಿನಗರ, ಕಾರ್ಪೋರೇಷನ್ ಸೇರಿದಂತೆ ನಗರದ ಹಲವೆಡೆ ಮಳೆಯಾಗಿದೆ. ಆದರೆ ಈ ಮಳೆಯಿಂದ ಇಂದು ಆರ್ಸಿಬಿ ಮ್ಯಾಚ್

error: Content is protected !!