Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಯಾರು ಅಡ್ಡಗಾಲು ಹಾಕುತ್ತಿದ್ದಾರೆಂದು ಕಾಲವೇ ಉತ್ತರ ಕೊಡಲಿದೆ : ಶಾಸಕ ಶಿವರಾಂ ಹೆಬ್ಬಾರ್

Facebook
Twitter
Telegram
WhatsApp

 

ಶಿರಸಿ: ನಿನ್ನೆಯಷ್ಟೇ ರಾಜ್ಯಸಭಾ ಚುನಾವಣೆ ನಡೆದು, ಫಲಿತಾಂಶ ಕೂಡ ಹೊರ ಬಂದಿದೆ. ಕಾಂಗ್ರೆಸ್ ಪಕ್ಷದ ಮೂವರು ಅಭ್ಯರ್ಥಿಗಳು ಸಹ ರಾಜ್ಯಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿ, ರಾಜ್ಯಸಭೆಗೆ ಎಂಟ್ರಿಯಾಗಿದ್ದಾರೆ. ಮೈತ್ರಿ ಮಾಡಿಕೊಂಡಿರುವ ಬಿಜೆಪಿ ಹಾಗೂ ಜೆಡಿಎಸ್ ಪಕ್ಷಕ್ಕೆ ಹೀನಾಯವಾಗಿ ಸೋಲಾಗಿದೆ. ಇದರ ನಡುವೆ ನಿನ್ನೆ ಮತದಾನ ಮಾಡುವುದಕ್ಕೆ ಶಾಸಕ ಶಿವರಾಂ ಹೆಬ್ಬಾರ್ ಗೈರಾಗಿದ್ದರು. ಆ ಸಂಬಂಧ ಊಹಾಪೋಹಗಳು ಹರಿದಾಡಿವೆ.

ರಾಜ್ಯಸಭಾ ಚುನಾವಣೆಯಲ್ಲಿ ಎಸ್ ಟಿ ಸೋಮಶೇಖರ್ ಅಡ್ಡ ಮತದಾನ ಮಾಡಿದ್ದಾರೆ. ಬಿಜೆಪಿ ಮೇಲಿನ ಮುನಿಸನ್ನು ಹೊರ ಹಾಕಿದ್ದಾರೆ. ಆದರೆ ಶಾಸಕ ಶಿವರಾಮ್ ಹೆಬ್ಬಾರ್ ಅವರು ಮತ ಹಾಕುವುದಕ್ಕೂ ಬಾರದೆ, ಗೈರಾಗಿದ್ದಕ್ಕೆ ಬಿಜೆಪಿ ಮೇಲೆ ಮುನಿಸಿಕೊಂಡಿದ್ದಾರೆ ಎನ್ನಲಾಗಿತ್ತು. ಅದಕ್ಕೆ ಸ್ವತಃ ಶಿವರಾಮ್ ಹೆಬ್ಬಾರ್ ಅವರೇ ಸ್ಪಷ್ಟನೆ ನೀಡಿದ್ದಾರೆ.

ಯಲ್ಲಾಪುರದಲ್ಲಿ ಮಾತನಾಡಿದ ಶಿವರಾಂ ಹೆಬ್ಬಾರ್, ನನಗೆ ಆರೋಗ್ಯ ಸರಿಯಿರಲಿಲ್ಲ. ಅನಾರೋಗ್ಯದ ಕಾರಣಕ್ಕೆ ರಾಜ್ಯಸಭಾ ಚುನಾವಣೆಯಲ್ಲಿ ಮತದಾನ ಮಾಡಲು ಆಗಲಿಲ್ಲ. ವೈದ್ಯರ ಸಲಹೆಯಂತೆ 6 ಗಂಟೆಗೆ ಬರಬೇಕಾಗಿ ಬಂತು. ಅಸಮಾಧಾನವಿದ್ದರೆ ಅಡ್ಡ ಮತದಾನ ಮಾಡುವ ಅವಕಾಶವಿತ್ತು. ನಾನು ನಾಲ್ಕು ದಶಕಗಳಿಂದ ರಾಜಕಾರಣದಲ್ಲಿ ಇದ್ದೀನಿ. ನಾನು ಯಾರಿಗೋ ಹೆದರಿ ಮತದಾನಕ್ಕೆ ಹೋಗಿಲ್ಲ ಅನ್ನೋದು ಸುಳ್ಳು. ಮತದಾನಕ್ಕೆ ಹೋಗಿ ಅಡ್ಡಮತದಾನವಾದರೂ ಮಾಡಬಹುದಿತ್ತು, ಇಲ್ಲವೇ ಮತವನ್ನೇ ಹಾಕದೆಯೂ ಇರಬಹುದಿತ್ತು. ನನ್ನಗೆ ನನ್ನದೆ ಆದ ಅಸಮಾಧಾನವಿರುವುದು ನಿಜ. ಅದು ಜಿಲ್ಲಾಮಟ್ಟದಲ್ಲಿ ಅಸಮಾಧಾನವಿದೆ. ಕೇಂದ್ರ ಮತ್ತು ರಾಜ್ಯ ಮುಖಂಡರ ಮೇಲೆ ಅಸಮಾಧಾನವಿಲ್ಲ. ಸಮಸ್ಯೆ ಇರುವುದು ಜಿಲ್ಲಾ ಮಟ್ಟದ ನಾಯಕರಿಂದ ಮಾತ್ರ. ಯಾರು ಅಡ್ಡಗಾಲು ಹಾಕುತ್ತಿದ್ದಾರೆ ಎಂಬುದಕ್ಕೆ ಕಾಲವೇ ಉತ್ತರ ಕೊಡಲಿದೆ. ನಾನು ಯಾರಿಗೂ ವಾರ್ನಿಂಗ್ ಕೊಡಲು ಹೋಗಿಲ್ಲ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಮಲಗುವ ಮುನ್ನ ಬಾಳೆಹಣ್ಣು ತಿಂದರೆ ಏನಾಗುತ್ತೆ ಗೊತ್ತಾ..?

  ಸುದ್ದಿಒನ್ : ಬಾಳೆಹಣ್ಣಿನಲ್ಲಿ ಅನೇಕ ಪೋಷಕಾಂಶಗಳು ಅಡಗಿವೆ. ಇವು ದೇಹಕ್ಕೆ ತುಂಬಾ ಒಳ್ಳೆಯದು. ಅದಕ್ಕಾಗಿಯೇ ಸದಾ ಲಭ್ಯವಿರುವ ಬಾಳೆಹಣ್ಣನ್ನು ತಿನ್ನಲು ತಜ್ಞರು ಸಲಹೆ ನೀಡುತ್ತಾರೆ. ಬಾಳೆ ಹಣ್ಣಿನಲ್ಲಿ ಪೊಟ್ಯಾಸಿಯಮ್, ವಿಟಮಿನ್ ಸಿ, ವಿಟಮಿನ್

ಈ ರಾಶಿಯವರು ಏಕಾಂಗಿ ಬದುಕಲು ಇಷ್ಟಪಡುವರು!

ಈ ರಾಶಿಯವರು ಏಕಾಂಗಿ ಬದುಕಲು ಇಷ್ಟಪಡುವರು! ಈ ರಾಶಿಯವರು ದೊಡ್ಡ ಮಹಾತ್ಮಾಕಾಂಕ್ಷೆ ಹೊಂದಿರುವರು, ಸೋಮವಾರ- ರಾಶಿ ಭವಿಷ್ಯ ಮೇ-20,2024 ಸೂರ್ಯೋದಯ: 05:46, ಸೂರ್ಯಾಸಸ್ತ : 06:38 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ

ಶಿಕ್ಷಕರ ಹಿತರಕ್ಷಣೆಗೆ ಕೈ ಸರ್ಕಾರ ಬದ್ಧ | ಕೊಟ್ಟ ಮಾತು ತಪ್ಪದ ಸಿಎಂ ಸಿದ್ದು :  ಮಾಜಿ ಶಾಸಕಿ ಕೆ.ಪೂರ್ಣಿಮಾ ಶ್ರೀನಿವಾಸ್

ಚಿತ್ರದುರ್ಗ, ಮೇ 19 :  ಶಿಕ್ಷಕರ ಹಿತ ಕಾಯುವಲ್ಲಿ ಕಾಂಗ್ರೆಸ್ ಸರ್ಕಾರದ ಬದ್ಧತೆ, ದೃಢ ನಿರ್ಧಾರ ಪ್ರಶ್ನಾತೀತ ಎಂದು ಮಾಜಿ ಶಾಸಕಿ ಕೆ.ಪೂರ್ಣಿಮಾ ಶ್ರೀನಿವಾಸ್ ಹೇಳಿದರು. ತಾಲೂಕಿನ ಸೀಬಾರದಲ್ಲಿ ಆಗ್ನೇಯ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್

error: Content is protected !!