Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ಕೆ ಶಿವರಾಮ್ ಕಾಂಗ್ರೆಸ್ ಬಿಟ್ಟು ಬಿಜೆಪಿ ಸೇರಿದ್ದಕ್ಕೆ ಕಾರಣವೇನು ಗೊತ್ತಾ..?

---Advertisement---

ಮಾಜಿ ಐಎಎಸ್ ಆಧಿಕಾರಿ ಕೆ ಶಿವರಾಮ್, ನಟ ಮಾತ್ರ ಅಲ್ಲ ರಾಜಕಾರಣಿ ಕೂಡ. ಇವರು ಆರಂಭದಲ್ಲಿ ಕಾಂಗ್ರೆಸ್ ಪಕ್ಷದಲ್ಲಿ ಗುರುತಿಸಿಕೊಂಡಿದ್ದರು. ಬಳಿಕ ಜೆಡಿಎಸ್ ನಲ್ಲೂ ಸೇವೆ ಸಲ್ಲಿಸಿದ್ದಾರೆ. ಆದರೆ ಕೊನೆಗೆ ಬಿಜೆಪಿ ಪಕ್ಷವನ್ನು ಸೇರಿದ್ದರು. ಅಷ್ಟಕ್ಕೂ ಜನಸೇವೆ ಮಾಡಲು ರಾಜಕೀಯಕ್ಕೆ ಬಂದ ಕೆ ಶಿವರಾಮ್ ಅವರು, ಬಿಜೆಪಿ ಪಕ್ಷ ಸೇರಿದ್ದಕ್ಕೂ ಒಂದು ಕಾರಣವಿದೆ.

ಕೆ ಶಿವರಾಮ್ ಅವರು 2013ರಲ್ಲಿ ಬೆಂಗಳೂರು ಪ್ರಾದೇಶಿಕ ಆಯುಕ್ತರಾಗಿ ನಿವೃತ್ತಿ ಹೊಂದಿದ್ದರು. ಇದಾದ ಬಳಿಕ ರಾಜಕೀಯ ವೃತ್ತಿಯನ್ನು ಆರಂಭಿಸಿದರು. 2013ರಲ್ಲಿ ಕಾಂಗ್ರೆಸ್ ಸೇರಿದರು. 2014ಕ್ಕೆ ಜೆಡಿಎಸ್ ಪಕ್ಷ ಸೇರಿದರು. ಬಳಿಕ ಬಿಜಾಪುರ ಲೋಕಸಭಾ ಚುನಾವಣಾ ಕ್ಷೇತ್ರದಿಂದ ಸ್ಪರ್ಧಿಸಿದರು. ಆದರೆ ರಮೇಶ್ ಜಿಗಜಣಗಿ ವಿರುದ್ಧ ಸೋಲು ಕಂಡರು. ಅದಾದ ಬಳಿಕ ಅದೇ ವರ್ಷದಲ್ಲಿ ಕೆ ಶಿವರಾಮ್ ಅವರು ಮತ್ತೆ ಕಾಂಗ್ರೆಸ್ ಕಡೆಗೆ ಬಂದರು.

ದಲಿತ ನಾಯಕ ಉಪ ಮುಖ್ಯಮಂತ್ರಿಯಾಗಬೇಕೆಂಬ ಒತ್ತಾಯ ಕೇಳಿ ಬಂದಿತ್ತು. ಹೀಗಾಗಿ 2014ರಲ್ಲಿ ಜಿ ಪರಮೇಶ್ವರ್ ಅವರಿಗೆ ಬೆಂಬಲ ನೀಡುವ ಉದ್ದೇಶದಿಂದ ಕಾಂಗ್ರೆಸ್ ಗೆ ಸೇರ್ಪಡೆಯಾದರು. ಆದರೆ ಕಾಂಗ್ರೆಸ್ ದಲಿತ ಉಪ ಮುಖ್ಯಮಂತ್ರಿ ಮಾಡುವಲ್ಲಿ ವಿಫಲವಾದ ಕಾರಣ ಪಕ್ಷ ಬಿಟ್ಟರು ಎನ್ನಲಾಗಿದೆ. ಅನಾರೋಗ್ಯದ ಸಮಸ್ಯೆಯಿಂದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕೆ ಶಿವರಾಮ್ ಇಂದು ಎಲ್ಲರನ್ನು ಬಿಟ್ಟು ದೂರ ಹೋಗಿದ್ದಾರೆ. ಐಎಎಸ್ ಅಧಿಕಾರಿಯಾಗಿ ಹಲವು ಕ್ಷೇತ್ರದಲ್ಲಿ ತಮ್ಮ ಸೇವೆ ನೀಡಿದ್ದಾರೆ. ಚಲನಚಿತ್ರ ನಟರಾಗಿ ಹಲವು ಸಿನಿಮಾಗಳನ್ನು ನೀಡಿದ್ದಾರೆ. ಅದರಲ್ಲೂ ಮಧುಚಂದ್ರಕೆ ಸಿನಿಮಾ ಎವರ್ ಗ್ರೀನ್ ಸಿನಿಮಾವಾಗಿ ಉಳಿದಿದೆ. ರಾಜಕೀಯದಲ್ಲೂ ಹಲವು ಮೈಲಿಗಲ್ಲು ಸಾಧಿಸಿದ್ದಾರೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...