Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಮಕ್ಕಳು ಮೂಲವಿಜ್ಞಾನದ ಅಧ್ಯಯನದಲ್ಲಿ ತೊಡಗಬೇಕು : ಫಣಿಂಧರ್ ಕುಮಾರ್

Facebook
Twitter
Telegram
WhatsApp

ಸುದ್ದಿಒನ್, ನಾಯಕನಹಟ್ಟಿ : ಮಾ.01. ವಿಧ್ಯಾರ್ಥಿಗಳು ಪ್ರಾಥಮಿಕ ಶಿಕ್ಷಣದಿಂದ ಮೂಲ ವಿಜ್ಞಾನದ ಅಧ್ಯಯನದಲ್ಲಿ ತೊಡಗಬೇಕು ಎಂದು ಎಸ್.ಟಿ.ಎಸ್.ಆರ್ ವಿದ್ಯಾಸಂಸ್ಥೆಯ ಶಿಕ್ಷಕ ಎಂ.ಫಣೀಂಧರ್ ಕುಮಾರ್ ಹೇಳಿದರು.

ಪಟ್ಟಣದ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶುಕ್ರವಾರ ನಡೆದ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ನಿಮಿತ್ತ ವಿದ್ಯಾರ್ಥಿಗಳಿಂದ ರಚಿತವಾದ ವಿಜ್ಞಾನ ವಸ್ತು ಪ್ರದರ್ಶನ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಅವರು ಮಾತನಾಡಿದರು.

ಸಮಾಜದಲ್ಲಿರುವ ಮೌಢ್ಯ ಅಂಧಕಾರವನ್ನು ಅರ್ಥಮಾಡಿಕೊಳ್ಳಲು ಮತ್ತು ಅವುಗಳನ್ನು ವಿನಾಶಮಾಡಲು ವಿಜ್ಞಾನ ಅತ್ಯಂತ ಸಹಕಾರಿಯಾಗಲಿದೆ. ಅದರಲ್ಲೂ ಪ್ರಮುಖವಾಗಿ ಗ್ರಾಮೀಣ ಪ್ರದೇಶದಲ್ಲಿ ಮಾಟ ಮಂತ್ರ ತಂತ್ರ ಎಂಬ ಹಲವು ಮೌಢ್ಯಗಳನ್ನು ಕೆಲ ಪಟ್ಟಭದ್ರರು ಬಿತ್ತುತ್ತಿರುತ್ತಾರೆ. ಅವುಗಳನ್ನೇ ನಂಬಿ ಸಾರ್ವಜನಿಕರು ಮೋಸ ಹೋಗುತ್ತಾರೆ. ಈ ಎಲ್ಲ ಮಾಟಮಂತ್ರ ತಂತ್ರಗಳಲ್ಲಿ ಯಾವುದೇ ಅತಿಮಾನುಷ ಶಕ್ತಿ ಇರುವುದಿಲ್ಲ. ಬದಲಿಗೆ ಶುದ್ಧವಾದ ಮೂಲವಿಜ್ಞಾನದ ಅಂಶಗಳು ಅಡಗಿರುತ್ತವೆ. ಅವುಗಳನ್ನು ಅರ್ಥಮಾಡಿಕೊಳ್ಳಬೇಕಾದರೆ ಮಕ್ಕಳು ಪ್ರಾಥಮಿಕ ಶಿಕ್ಷಣದಿಂದ ಮೂಲ ವಿಜ್ಞಾನದ ಅಧ್ಯಯನದಲ್ಲಿ ತೊಡಗಬೇಕು ಎಂದರು.

ವಿದ್ಯಾರ್ಥಿಗಳು ಆರಂಭಿಕ ಹಂತದಲ್ಲಿ ಸಣ್ಣ ಸಣ್ಣ ಪ್ರಯೋಗಗಳು ಮತ್ತು ಮಾದರಿಗಳನ್ನು ರಚಿಸಲು ಮುಂದಾಗಬೇಕು. ಆಗ ವಿಜ್ಞಾನದ ಪರಿಚಯವಾಗಿ ವೈಜ್ಞಾನಿಕ ಮನೋಭಾವನೆಗಳನ್ನು ಬೆಳೆಸಿಕೊಳ್ಳಲು ಸಹಕಾರಿಯಾಗುತ್ತದೆ. ಇದರಿಂದ ವೈಜ್ಞಾನಿಕ ಚಿಂತನೆ ಮತ್ತು ವೈಚಾರಿಕ ಸಾಮಥ್ರ್ಯ ಲಭಿಸುತ್ತದೆ. ಆಗ ಮೌಢ್ಯತೆಗಳು, ಕಂದಾಚಾರಗಳು, ಮೂಢನಂಬಿಕೆಗಳ ಹಿಂದೆ ಇರುವ ತರ್ಕ ಅರ್ಥವಾಗಿ ಮೋಸ ಹೋಗುವುದು ತಪ್ಪುತ್ತದೆ. ಹಾಗಾಗಿ ಪ್ರತಿಯೊಬ್ಬ ವಿದ್ಯಾರ್ಥಿಯು ಗಮನವಿಟ್ಟು ವಿಜ್ಞಾನ ತರಗತಿಗಳನ್ನು ಕೇಳಬೇಕು. ಮತ್ತು ಆಸಕ್ತಿವಹಿಸಿ ವಿಜ್ಞಾನ ವಿಷಯವನ್ನು ಕಲಿಯಬೇಕು ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

ಪ.ಪಂ.ಸದಸ್ಯ ಸೈಯದ್‍ಅನ್ವರ್ ಮಾತನಾಡಿ, ಸರ್ಕಾರಿ ಶಾಲೆಯಲ್ಲಿ ಕಲಿಯುತ್ತಿರುವ ವಿದ್ಯಾರ್ಥಿಗಳು ಶಿಕ್ಷಕರ ಮಾರ್ಗದರ್ಶನದಲ್ಲಿ ಕಣ್ಮನ ಸೆಳೆಯುವ ವಿಜ್ಞಾನ ಮಾದರಿಗಳನ್ನು ತಯಾರಿಸಿ ಪ್ರದರ್ಶನ ನೀಡುತ್ತಿರುವುದು ತುಂಬಾ ಸಂತಸದ ಸಂಗತಿ. ಹಾಗೇ ಶಾಲಾ ಹಂತದಲ್ಲಿ ಪ್ರತಿ ಮಗುವೂ ಎಲ್ಲ ವಿಷಯಗಳಲ್ಲಿ ತೀವ್ರ ಕುತೂಹಲಿಗಳಾಗಿರಬೇಕು. ಕುತೂಹಲ ಕಲಿಕಾ ಸಾಮಥ್ರ್ಯವನ್ನು ಹೆಚ್ಚಿಸುತ್ತದೆ. ಅದರಲ್ಲೂ ವಿಜ್ಞಾನ ಅಧ್ಯಯನ ಕ್ರಮಬದ್ಧ ಮತ್ತು ಶಿಸ್ತು ಕಲಿಕೆಗೆ ಪೂರಕವಾಗಿರುತ್ತದೆ ಎಂದರು.

ಈ ಸಂದರ್ಭದಲ್ಲಿ ಶಾಲಾ ಹಿರಿಯ ಮುಖ್ಯಶಿಕ್ಷಕಿ ಎನ್.ಇಂದಿರಮ್ಮ, ಶಿಕ್ಷಕ ತೀರ್ಥಕುಮಾರ್, ಇಸಿಒ ಈರಸ್ವಾಮಿ, ಸಿಆರ್‍ಪಿ ಈಶ್ವರಪ್ಪ, ಡಾನ್‍ಬಾಸ್ಕೋ ಶಾಲೆ ಕಾರ್ಯದರ್ಶಿ ಎಸ್.ಟಿ.ಬೋರಸ್ವಾಮಿ ಮಾತನಾಡಿದರು.
ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷೆ ಸುಮಲತಾ, ಸದಸ್ಯರಾದ ರಾಜಣ್ಣ, ಸುಮಯ್ಯ, ಅನಿತಾ, ನಾಗರತ್ನಮ್ಮ ಶಿಕ್ಷಕರಾದ ಗಾಯಿತ್ರಮ್ಮ, ಮಂಜುಳಮ್ಮ, ಶಿಲ್ಪ, ಕೃಷ್ಣರೆಡ್ಡಿ, ಮಂಜುನಾಥ್, ಉಷಾ, ಸುಮಾ ಉಪಸ್ಥಿತರಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಮಳೆರಾಯನನ್ನೇ ಬೇಡಿದ ಅಭಿಮಾನಿಗಳು : RCB ಗೆಲುವಿಗಾಗಿ ವಿಶೇಷ ಪೂಜೆ

RCB ಅಭಿಮಾನಿಗಳು ಕಡೆಯ ತನಕ ತಮ್ಮ ಟೀಂ ಬಗ್ಗೆ ಹೋಪ್ ಕಳೆದುಕೊಳ್ಳುವುದೇ ಇಲ್ಲ. ಯಾಕಂದ್ರೆ ಆರ್ಸಿಬಿ ಆಟಗಾರರು ಸಹ ಅದೇ ಥರ ಕೊನೆಯಲ್ಲಿ ಚೋಕ್ ಕೊಡ್ತಾರೆ. ಈ ಬಾರಿಯ ಐಪಿಎಲ್ ನಲ್ಲಿ ಆರಂಭದ ಅಷ್ಟು

ಈ ರಾಶಿಯವರು ಕೆಲಸದಲ್ಲಿ ಎಷ್ಟೇ ಶ್ರದ್ಧೆಯಿಂದ ದುಡಿದರೂ ಅಪವಾದ, ನಿಂದನೆ, ಆರ್ಥಿಕ ನಷ್ಟ ತಪ್ಪಿದ್ದಲ್ಲ

ಈ ರಾಶಿಯವರು ಕೆಲಸದಲ್ಲಿ ಎಷ್ಟೇ ಶ್ರದ್ಧೆಯಿಂದ ದುಡಿದರೂ ಅಪವಾದ, ನಿಂದನೆ, ಆರ್ಥಿಕ ನಷ್ಟ ತಪ್ಪಿದ್ದಲ್ಲ. ಶುಕ್ರವಾರ- ರಾಶಿ ಭವಿಷ್ಯ ಮೇ-17,2024 ಸೂರ್ಯೋದಯ: 05:47, ಸೂರ್ಯಾಸ್ತ : 06:37 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ

ಚಿತ್ರದುರ್ಗದಲ್ಲಿ ಐವರ ಅಸ್ಥಿಪಂಜರ ಪ್ರಕರಣ | ಕೊನೆಗೂ ಸಿಕ್ತು ಸಾವಿನ ಸುಳಿವು: ಎಸ್.ಪಿ. ಮಾಹಿತಿ…!

ಸುದ್ದಿಒನ್, ಚಿತ್ರದುರ್ಗ, ಮೇ. 16 : 2023ರ ಡಿಸೆಂಬರ್ ನಲ್ಲಿ ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ಪ್ರಕರಣ ಅದು. ನಗರದ ಬೆಂಗಳೂರು ರಸ್ತೆಯಲ್ಲಿರುವ ಪಾಳು ಬಿದ್ದ ಮನೆಯಲ್ಲಿ ಐವರ ಮೃತದೇಹ ಪತ್ತೆಯಾಗಿತ್ತು. ಅದು ಅವರೆಲ್ಲಾ ಸಾವನ್ನಪ್ಪಿ

error: Content is protected !!