Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಮಕ್ಕಳು ಮೂಲವಿಜ್ಞಾನದ ಅಧ್ಯಯನದಲ್ಲಿ ತೊಡಗಬೇಕು : ಫಣಿಂಧರ್ ಕುಮಾರ್

---Advertisement---

ಸುದ್ದಿಒನ್, ನಾಯಕನಹಟ್ಟಿ : ಮಾ.01. ವಿಧ್ಯಾರ್ಥಿಗಳು ಪ್ರಾಥಮಿಕ ಶಿಕ್ಷಣದಿಂದ ಮೂಲ ವಿಜ್ಞಾನದ ಅಧ್ಯಯನದಲ್ಲಿ ತೊಡಗಬೇಕು ಎಂದು ಎಸ್.ಟಿ.ಎಸ್.ಆರ್ ವಿದ್ಯಾಸಂಸ್ಥೆಯ ಶಿಕ್ಷಕ ಎಂ.ಫಣೀಂಧರ್ ಕುಮಾರ್ ಹೇಳಿದರು.

ಪಟ್ಟಣದ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶುಕ್ರವಾರ ನಡೆದ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ನಿಮಿತ್ತ ವಿದ್ಯಾರ್ಥಿಗಳಿಂದ ರಚಿತವಾದ ವಿಜ್ಞಾನ ವಸ್ತು ಪ್ರದರ್ಶನ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಅವರು ಮಾತನಾಡಿದರು.

ಸಮಾಜದಲ್ಲಿರುವ ಮೌಢ್ಯ ಅಂಧಕಾರವನ್ನು ಅರ್ಥಮಾಡಿಕೊಳ್ಳಲು ಮತ್ತು ಅವುಗಳನ್ನು ವಿನಾಶಮಾಡಲು ವಿಜ್ಞಾನ ಅತ್ಯಂತ ಸಹಕಾರಿಯಾಗಲಿದೆ. ಅದರಲ್ಲೂ ಪ್ರಮುಖವಾಗಿ ಗ್ರಾಮೀಣ ಪ್ರದೇಶದಲ್ಲಿ ಮಾಟ ಮಂತ್ರ ತಂತ್ರ ಎಂಬ ಹಲವು ಮೌಢ್ಯಗಳನ್ನು ಕೆಲ ಪಟ್ಟಭದ್ರರು ಬಿತ್ತುತ್ತಿರುತ್ತಾರೆ. ಅವುಗಳನ್ನೇ ನಂಬಿ ಸಾರ್ವಜನಿಕರು ಮೋಸ ಹೋಗುತ್ತಾರೆ. ಈ ಎಲ್ಲ ಮಾಟಮಂತ್ರ ತಂತ್ರಗಳಲ್ಲಿ ಯಾವುದೇ ಅತಿಮಾನುಷ ಶಕ್ತಿ ಇರುವುದಿಲ್ಲ. ಬದಲಿಗೆ ಶುದ್ಧವಾದ ಮೂಲವಿಜ್ಞಾನದ ಅಂಶಗಳು ಅಡಗಿರುತ್ತವೆ. ಅವುಗಳನ್ನು ಅರ್ಥಮಾಡಿಕೊಳ್ಳಬೇಕಾದರೆ ಮಕ್ಕಳು ಪ್ರಾಥಮಿಕ ಶಿಕ್ಷಣದಿಂದ ಮೂಲ ವಿಜ್ಞಾನದ ಅಧ್ಯಯನದಲ್ಲಿ ತೊಡಗಬೇಕು ಎಂದರು.

ವಿದ್ಯಾರ್ಥಿಗಳು ಆರಂಭಿಕ ಹಂತದಲ್ಲಿ ಸಣ್ಣ ಸಣ್ಣ ಪ್ರಯೋಗಗಳು ಮತ್ತು ಮಾದರಿಗಳನ್ನು ರಚಿಸಲು ಮುಂದಾಗಬೇಕು. ಆಗ ವಿಜ್ಞಾನದ ಪರಿಚಯವಾಗಿ ವೈಜ್ಞಾನಿಕ ಮನೋಭಾವನೆಗಳನ್ನು ಬೆಳೆಸಿಕೊಳ್ಳಲು ಸಹಕಾರಿಯಾಗುತ್ತದೆ. ಇದರಿಂದ ವೈಜ್ಞಾನಿಕ ಚಿಂತನೆ ಮತ್ತು ವೈಚಾರಿಕ ಸಾಮಥ್ರ್ಯ ಲಭಿಸುತ್ತದೆ. ಆಗ ಮೌಢ್ಯತೆಗಳು, ಕಂದಾಚಾರಗಳು, ಮೂಢನಂಬಿಕೆಗಳ ಹಿಂದೆ ಇರುವ ತರ್ಕ ಅರ್ಥವಾಗಿ ಮೋಸ ಹೋಗುವುದು ತಪ್ಪುತ್ತದೆ. ಹಾಗಾಗಿ ಪ್ರತಿಯೊಬ್ಬ ವಿದ್ಯಾರ್ಥಿಯು ಗಮನವಿಟ್ಟು ವಿಜ್ಞಾನ ತರಗತಿಗಳನ್ನು ಕೇಳಬೇಕು. ಮತ್ತು ಆಸಕ್ತಿವಹಿಸಿ ವಿಜ್ಞಾನ ವಿಷಯವನ್ನು ಕಲಿಯಬೇಕು ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

ಪ.ಪಂ.ಸದಸ್ಯ ಸೈಯದ್‍ಅನ್ವರ್ ಮಾತನಾಡಿ, ಸರ್ಕಾರಿ ಶಾಲೆಯಲ್ಲಿ ಕಲಿಯುತ್ತಿರುವ ವಿದ್ಯಾರ್ಥಿಗಳು ಶಿಕ್ಷಕರ ಮಾರ್ಗದರ್ಶನದಲ್ಲಿ ಕಣ್ಮನ ಸೆಳೆಯುವ ವಿಜ್ಞಾನ ಮಾದರಿಗಳನ್ನು ತಯಾರಿಸಿ ಪ್ರದರ್ಶನ ನೀಡುತ್ತಿರುವುದು ತುಂಬಾ ಸಂತಸದ ಸಂಗತಿ. ಹಾಗೇ ಶಾಲಾ ಹಂತದಲ್ಲಿ ಪ್ರತಿ ಮಗುವೂ ಎಲ್ಲ ವಿಷಯಗಳಲ್ಲಿ ತೀವ್ರ ಕುತೂಹಲಿಗಳಾಗಿರಬೇಕು. ಕುತೂಹಲ ಕಲಿಕಾ ಸಾಮಥ್ರ್ಯವನ್ನು ಹೆಚ್ಚಿಸುತ್ತದೆ. ಅದರಲ್ಲೂ ವಿಜ್ಞಾನ ಅಧ್ಯಯನ ಕ್ರಮಬದ್ಧ ಮತ್ತು ಶಿಸ್ತು ಕಲಿಕೆಗೆ ಪೂರಕವಾಗಿರುತ್ತದೆ ಎಂದರು.

ಈ ಸಂದರ್ಭದಲ್ಲಿ ಶಾಲಾ ಹಿರಿಯ ಮುಖ್ಯಶಿಕ್ಷಕಿ ಎನ್.ಇಂದಿರಮ್ಮ, ಶಿಕ್ಷಕ ತೀರ್ಥಕುಮಾರ್, ಇಸಿಒ ಈರಸ್ವಾಮಿ, ಸಿಆರ್‍ಪಿ ಈಶ್ವರಪ್ಪ, ಡಾನ್‍ಬಾಸ್ಕೋ ಶಾಲೆ ಕಾರ್ಯದರ್ಶಿ ಎಸ್.ಟಿ.ಬೋರಸ್ವಾಮಿ ಮಾತನಾಡಿದರು.
ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷೆ ಸುಮಲತಾ, ಸದಸ್ಯರಾದ ರಾಜಣ್ಣ, ಸುಮಯ್ಯ, ಅನಿತಾ, ನಾಗರತ್ನಮ್ಮ ಶಿಕ್ಷಕರಾದ ಗಾಯಿತ್ರಮ್ಮ, ಮಂಜುಳಮ್ಮ, ಶಿಲ್ಪ, ಕೃಷ್ಣರೆಡ್ಡಿ, ಮಂಜುನಾಥ್, ಉಷಾ, ಸುಮಾ ಉಪಸ್ಥಿತರಿದ್ದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment