Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ರಾಮೇಶ್ವರಂ ಕೆಫೆ ಬ್ಲಾಸ್ಟ್ : ಸಿಎಂ ಸಿದ್ದರಾಮಯ್ಯ ಹೇಳಿದ್ದೇನು..?

Facebook
Twitter
Telegram
WhatsApp

 

ಬೆಂಗಳೂರು: ಇಂದು ಸಿಲಿಕಾನ್ ಸಿಟಿಯ ಮಂದಿಯನ್ನೇ ಬೆಚ್ಚಿಬೀಳಿಸಿದೆ ರಾಮೇಶ್ವರಂ ಕೆಫೆ ಸ್ಪೋಟ. ಯಾಕಂದ್ರೆ ರಾಮೇಶ್ವರಂ ಕೆಫೆ ಸಿಕ್ಕಾಪಟ್ಟೆ ಫೇಮಸ್ ಆಗಿದೆ. ಪ್ರತಿ ದಿನ ಏನಿಲ್ಲ ಅಂದ್ರು ಐದರಿಂದ ಆರು ಸಾವಿರ ಮಂದಿ ಭೇಟಿ ನೀಡುತ್ತಾರೆ. ಇಂಥ ಜಾಗದಲ್ಲಿ ಬ್ಲಾಸ್ಟ್ ಆಗಿರುವುದು ಆತಂಕಕ್ಕೆ ಕಾರಣವಾಗಿದೆ. ಕುಂದಲಹಳ್ಳಿಯಲ್ಲಿರುವ ಕೆಫೆ ಬ್ಲಾಸ್ಟ್ ಆಗಿದ್ದು, ಹಲವರು ಗಾಯಗೊಂಡಿದ್ದಾರೆ.

 

ಮೈಸೂರು ಪ್ರವಾಸದಲ್ಲಿರುವ ಸಿಎಂ ಸಿದ್ದರಾಮಯ್ಯ ಅವರು ಈ ಸ್ಪೋಟದ ಬಗ್ಗೆ ಮಾಹಿತಿ ಪಡೆದುಕೊಂಡಿದ್ದಾರೆ. ಈ ಬಗ್ಗೆ ಮಾತನಾಡಿದ ಸಿದ್ದರಾಮಯ್ಯ ಅವರು, ಸ್ಪೋಟದ ಬಗ್ಗೆ ಮಾಹಿತಿ ಪಡೆದುಕೊಂಡಿದ್ದೇನೆ. ಟೆರರಿಸ್ಟ್ ಮಾಡಿರುವ ಸಂಗತಿ ಎಂಬುದು ನಮಗೆ ತಿಳಿದಿಲ್ಲ. ಘಟನೆಯಲ್ಲಿ ಹಲವರಿಗೆ ಗಾಯವಾಗಿದೆ. ಸಿಸಿಟಿವಿಯ‌ನ್ನು ಪರಿಶೀಲನೆ ಮಾಡಲಾಗುತ್ತಿದೆ. ಯಾರೋ ಒಬ್ಬ ಬ್ಯಾಗ್ ಇಟ್ಟಿದ್ದ ಎಂಬ ಮಾಹಿತಿ ತಿಳಿದು ಬಂದಿದೆ. ಪೊಲೀಸರು ಅದರ ತನಿಖೆ ನಡೆಸುತ್ತಿದ್ದಾರೆ.

ಸದ್ಯದ ಮಾಹಿತಿ ಪ್ರಕಾರ ಪೊಲೀಸರು ಸ್ಥಳಕ್ಕೆ ಹೋಗಿದ್ದಾರೆ. ಸ್ಪೋಟಕ ಬಾರೀ ಪ್ರಮಾಣದಲ್ಲಿ ನಡೆದಿಲ್ಲ. ಸಣ್ಣ ಪ್ರಮಾಣದ ಸ್ಪೋಟ ಅದು. ಆದರೂ ಪರಿಣಾಮಕಾರಿಯಾಗಿದೆ. ಇತ್ತಿಚೆಗೆ ಇಂತಹ ಘಟನೆಗಳು ನಡೆದಿರಲಿಲ್ಲ. ಮಂಗಳೂರಿನಲ್ಲಿ ಹಿಂದಿನ ಸರ್ಕಾರದ ಸಮಯದಲ್ಲಿ ನಡೆದಿತ್ತು. ನಮ್ಮ ಸರ್ಕಾರದಲ್ಲಿ ಈ ಘಟನೆ ನಡೆದಿದೆ. ಆರೋಪಿಗಳನ್ನು ಯಾವುದೇ ಕಾರಣಕ್ಕೂ ಬಿಡುವುದಿಲ್ಲ. ಪತ್ತೆ ಹಚ್ಚಿ ಶಿಕ್ಷೆ ನೀಡಲಾಗುತ್ತದೆ.

ಬ್ಲಾಸ್ಟ್ ಮಾಡಿರುವುದು ಸತ್ಯ. ಬ್ಲಾಸ್ಟ್ ಮಾಡಿರುವವರನ್ನು ಪತ್ತೆ ಹಚ್ಚಿ, ಅವರ ವಿರುದ್ಧ ಶಸ್ತಿನ, ಕಠಿಣ ಕ್ರಮ ತೆಗೆದುಕೊಳ್ಳುತ್ತೇವೆ. ಈ ವಿಚಾರದಲ್ಲಿ ಯಾವುದೇ ಕಾರಣಕ್ಕೂ ರಾಜಕಾತಣ ಮಾಡಬಾರದು. ಪೊಲೀಸರು ಸೂಕ್ತ ತನಿಖೆ ನಡೆಸುತ್ತಿದ್ದಾರೆ. ಆತ ಕ್ಯಾಶಿಯರ್ ಬಳಿ ಹೋಗಿ ಟೋಕನ್ ತೆಗೆದುಕೊಂಡಿದ್ದಾನೆ.ಅವರ ಬಳಿ ಬ್ಯಾಗ್ ಇರಿಸಿದ್ದಾನೆ. ಈ ಎಲ್ಲಾ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿದೆ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಅಶ್ವಿನಿ ಪುನೀತ್ ರಾಜ್‍ಕುಮಾರ್ ನಿಂದಿಸಿದ ಕಿಡಿಗೇಡಿಗಳು ಈಗ ಗಪ್ ಚಿಪ್..!

ಆರ್ಸಿಬಿ ಆಟಗಾರರು ಆರಂಭದಲ್ಲಿ ಬ್ಯಾಕ್ ಟು ಬ್ಯಾಕ್ ಸೋಲುತ್ತಾ ಬಂದಿತ್ತು. ಇದು ಅಭಿಮಾನಿಗಳಿಗೆ ಸಹಜವಾಗಿಯೇ ಬೇಸರವಾಗಿತ್ತು. ಆದರೆ ಈ ಸೋಲು-ನೋವಿನ ನಡುವೆ ಯಾರೋ ಕಿಡಿಗೇಡಿಗಳು ಅಶ್ವಿನಿ ಪುನೀತ್ ರಾಜ್‍ಕುಮಾರ್ ಬಗ್ಗೆ ಕೆಟ್ಟದಾಗಿ ಮಾತನಾಡಿದ್ದರು. ಕೆಟ್ಟ

ಚಿತ್ರದುರ್ಗ ಜಿಲ್ಲೆಯಲ್ಲಿ ಕಳೆದ 24 ಗಂಟೆಯಲ್ಲಿ ಎಲ್ಲೆಲ್ಲಿ ಮಳೆಯಾಗಿದೆ ? ಇಲ್ಲಿದೆ ಮಾಹಿತಿ…!

  ಚಿತ್ರದುರ್ಗ. ಮೇ.19 : ಜಿಲ್ಲೆಯಾದ್ಯಂತ ಕೃತಿಕಾ ಮಳೆ ಸುರಿಯುತ್ತಿದ್ದು, ಜಿಲ್ಲೆಯ ವಿವಿಧ ಭಾಗಗಳಲ್ಲಿ ಉತ್ತಮ ಮಳೆಯಾಗಿದೆ. ಶನಿವಾರ ಸುರಿದ ಮಳೆ ವಿವರದನ್ವಯ ಚಿತ್ರದುರ್ಗ -1ರಲ್ಲಿ 24.0, ಮಿ.ಮೀ ಚಿತ್ರದುರ್ಗ -2ರಲ್ಲಿ 33.7, ಭರಮಸಾಗರ

ಫೈನಲಿ ಪ್ಲೇ ಆಫ್ ಗೆ ಗ್ರ್ಯಾಂಡ್ ಎಂಟ್ರಿಯಾಯ್ತು RCB

ಬೆಂಗಳೂರು: ನಿನ್ನೆ ಸಂಜೆಯಿಂದ ಬೆಂಗಳೂರಿನಲ್ಲಿ ಬಾರೀ ಮಳೆ. ಆರ್ಸಿಬಿ ಪಂದ್ಯದ ವೇಳೆ ಮಳೆಯಾಟ ಜೋರಾಗಿತ್ತು. ಒಮ್ಮೊಮ್ಮೆ ಮಳೆ ಬಂದು ಬಂದು ನಿಲ್ಲುತ್ತಿತ್ತು. ಇದರಿಂದ ಆರ್ಸಿಬಿ ಅಭಿಮಾನಿಗಳಿಗೆ ಬೇಸರವೂ ಆಗಿತ್ತು. ಆದ್ರೆ ಆರ್ಸಿಬಿ ಕೊಟ್ಟ ಟಾರ್ಗೆಟ್‌

error: Content is protected !!