Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ 2022 ಹುದ್ದೆಗಳಿಗೆ ಶೀಘ್ರವೇ ನೇಮಕ

---Advertisement---

 

ಬೆಂಗಳೂರು: ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆಯಲ್ಲಿ ಖಾಲಿ ಇರುವ 2022 ಹುದ್ದೆಗಳಿಗೆ ಶೀಘ್ರವೇ ನೇಮಕಾತಿ ನಡೆಯಲಿದ್ದು, ಆಯ್ಕೆಯಾದ ಅಭ್ಯರ್ಥಿಗಳು ನೇಮಕಾತಿ ಪತ್ರವನ್ನು ಪಡೆಯಲಿದ್ದಾರೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ‌.

 

ಕಳೆದ ಜನವರಿ 31ರಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ಇಲಾಖೆಯ ಹುದ್ದೆಗೆ ಅಧಿಸೂಚನೆ ಹೊರಡಿಸಿತ್ತು. 24 ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಗಳ ನೇಮಕಾತಿ ಆದೇಶವನ್ನು ಕರ್ನಾಟಕ ಲೋಕಸೇವಾ ಆಯೋಗವೂ ತಡೆಹಿಡಿದಿತ್ತು. ಇನ್ನುಳಿದಂತೆ ಬೇರೆ ಅಭ್ಯರ್ಥಿಗಳ ದಾಖಲೆಗಳ ಪರಿಶೀಲನೆ ನಡೆಯುತ್ತಿದೆ.

ಗ್ರಾಮೀಣಾಭಿವೃದ್ಧಿ ನೀರು ಮತ್ತು ನೈರ್ಮಲ್ಯ ಇಲಾಖೆಯಲ್ಲಿ 136 ಕಿರಿಯ ಎಂಜಿನಿಯರ್, 288 ಸಹಾಯಕ ಎಂಜಿನಿಯರ್ ಹಾಗೂ 24 ಸಹಾಯಕ ಕಾರ್ಯಪಾಳ ಎಂಜಿನಿಯರ್ ಹುದ್ದೆಗಳ ಭರ್ತಿಗೆ ಕರ್ನಾಟಕ ಲೋಕಸೇವಾ ಆಯೋಗ ಆದೇಶ ಹೊರಡಿಸಿತ್ತು. ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶಕ್ಕೆ ಮೀಸಲಾದ ವಿವಿಧ 91 ಹುದ್ದೆಗಳನ್ನುನೇರ ನೇಮಕಾತಿ ಕೋಟಾದಡಿ ಆನ್ಲೈನ್ ಮೂಲಕ ಭರ್ತಿ ಮಾಡಲು ಕರ್ನಾಟಕ ಲೋಕಸೇವಾ ಆಯೋಗಕ್ಕೆ ತಿಳಿಸಲಾಗಿದೆ.

ಈ ಹುದ್ದೆಗಳಳ್ಲಿ 20 ಕಿರಿಯ ಎಂಜನಿಯರ್, 18 ಪ್ರಥಮ ದರ್ಜೆ ಸಹಾಯಕರು. 3 ಪ್ರಥಮ ದರ್ಜೆ ಲೆಕ್ಕ ಸಹಾಯಕರು, 42 ದ್ವಿತೀಯ ದರ್ಜೆ ಸಹಾಯಕರು ಹಾಗೂ 8 ದ್ವಿತೀಯ ದರ್ಜೆ ಲೆಕ್ಕ ಸಹಾಯರು ಸೇರಿದ್ದು, ಈ ಸಂಬಂಧದಲ್ಲಿ ಕರ್ನಾಟಕ ಲೋಕಸೇವಾ ಆಯೋಗ ಅಧಿಸೂಚನೆ ಹೊರಡಿಸಿದೆ ಎಂದೂ ಸಚಿವ ಪ್ರಿಯಾಂಕ್ ಖರ್ಗೆ ಮಾಹಿತಿ ನೀಡಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

ಮಿಸ್ ಮಾಡ್ದೆ ಓದಿ

Leave a Comment