Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ರಾಮೇಶ್ವರಂ ಕೆಫೆ : ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು..?

ಸಚಿವ ಪರಮೇಶ್ವರ್
---Advertisement---

ಬೆಂಗಳೂರು : ಇಂದಿರಾನಗರದಲ್ಲಿರುವ ರಾಮೇಶ್ವರಂ ಕೆಫೆ ಸ್ಪೋಟ ಸಿಲಿಕಾನ್ ಸಿಟಿ ಮಂದಿಯಲ್ಲಿ ಕೊಂಚ ಭಯದ ವಾತಾವರಣವನ್ನು ಉಂಟು ಮಾಡಿದೆ. ಸೇಫ್ ಬೆಂಗಳೂರು ಬಗ್ಗೆ ಅನೇಕ ಕಾರ್ಯಕ್ರಮಗಳನ್ನು ಮಾಡಲಾಗಿದೆ. ಆದರೂ ಈ ರೀತಿಯ ಬಾಂಬ್ ಬ್ಲಾಸ್ಟ್ ಘಟನೆಗಳ ಕೆಲವೊಂದು ಆತಂಕ ಸೃಷ್ಟಿ‌ ಮಾಡುತ್ತವೆ. ರಾಮೇಶ್ವರಂ ಕೆಫೆ ಬ್ಲಾಸ್ಟ್ ಬಗ್ಗೆ ನಿನ್ನೆಯಿಂದಾನೂ ತನಿಖೆ ನಡೆಯುತ್ತಿದೆ. ಈ ಬಗ್ಗೆ ಗೃಹ ಸಚಿವ ಜಿ ಪರಮೇಶ್ವರ್ ಮಾತನಾಡಿದ್ದಾರೆ.

‘ಘಟನೆ ಸಂಬಂಧ ಬಹಳ ಸೀರಿಯಸ್ ಆಗಿ, ಆಳವಾಗಿ ತನಿಖೆ ನಡೆಯುತ್ತಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಬಹಳಷ್ಟು ಕುರುಹುಗಳು ಸಿಕ್ಕಿವೆ. ಸಿಸಿಟಿವಿಯಲ್ಲೂ ಸಾಕ್ಷ್ಯಗಳು ಸಿಕ್ಕಿವೆ. ಆತ ಸುಮಾರು 28 ಬಸ್ ಗಳು ಓಡಾಡಿವೆ. ಆತ ಬಸ್ ನಲ್ಲಿ ಬಂದಿದ್ದಾನೆ ಎಂಬ ಮಾಹಿತಿ ನಮಗೆ ಸಿಕ್ಕಿದೆ. ಬಸ್ ಗಳಲ್ಲೂ ಸಿಸಿ ಕ್ಯಾಮೆರಾಗಳಿವೆ. ಯಾವುದೇ ಕಾರಣಕ್ಕೂ ಅಪರಾಧಿಯನ್ನು ತಪ್ಪಿಸಿಕೊಳ್ಳುವುದಕ್ಕೆ ಬಿಡುವುದಿಲ್ಲ.

ಈ ಕೃತ್ಯ ಒಬ್ಬನಿಂದ ಮಾತ್ರ ನಡೆದಿದೆಯೋ ಅಥವಾ ಅವನ ಹಿಂದೆ ಬೇರೆ ಯಾರಾದರೂ ಇದ್ದಾರ ಎಂಬೆಲ್ಲಾ ಮಾಹಿತಿಗಳನ್ನು ಕಲೆ ಹಾಕಲಾಗುತ್ತಿದೆ. ಹೊಟೇಲ್ ನವರು ಮೂರ್ನಾಲ್ಕು ಕಡೆ ಸಕ್ಸಸ್ ಆಗಿದ್ದಾರೆ ಎಂಬ ಕಾರಣಕ್ಕೂ ಹೀಗೆ ಮಾಡಿರಬಹುದು. ಸ್ಥಳಕ್ಕೆ ಹೋದಾಗ ಅಲ್ಲಿ ಕೆಲವರು ಈ ವಿಚಾರವಾಗಿ ಮಾತನಾಡಿದ್ದಾರೆ. ಹೀಗಾಗಿ ಎಲ್ಲಾ ಆಯಾಮದಿಂದಾನೂ ತನಿಖೆ ನಡೆಯುತ್ತಿದೆ. 2022ರಲ್ಲಿ ಕುಕ್ಕರ್ ಬ್ಲಾಸ್ಟ್ ಆದಾಗ ಅವರು ರಾಜೀನಾಮೆ ನೀಡಿದ್ರಾ..? ಅವರು ಎಲ್ಲದಕ್ಕೂ ರಾಜೀನಾಮೆ ಕೇಳ್ತಾರೆ. ಈ ಸಮಯದಲ್ಲಿ ಸಹಕಾರ ಕೋರಿದ್ದೇವೆ. ಇದು ರಾಜ್ಯದ ಮತ್ತು ಬೆಂಗಳೂರು ಸೇಫ್ಟಿಯ ಪ್ರಶ್ನೆ. ಹೀಗಾಗಿ ತನಿಖೆ ನಡೆಯುತ್ತಿದೆ ಎಂದಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment