Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಎಸ್.ಜೆ.ಎಂ. ವಿದ್ಯಾಪೀಠದ ಆಡಳಿತಾಧಿಕಾರಿಯಾಗಿ ನಿವೃತ್ತ ಐಎಎಸ್ ಅಧಿಕಾರಿ ಸಿ. ಶಿವಯೋಗಿ ಕಳಸದ ನೇಮಕ

---Advertisement---

 

ಸುದ್ದಿಒನ್,  ಚಿತ್ರದುರ್ಗ, ಮಾರ್ಚ್. 02 : ಸುಪ್ರೀಂ ಕೋರ್ಟ್ ಆದೇಶದಂತೆ ಇದೀಗ ಮುರುಘಾ ಮಠದ ಆಡಳಿತ ಮಂಡಳಿಯನ್ನು ಸರ್ಕಾರ ಬದಲಾವಣೆ ಮಾಡಿದೆ.

ಗಡುವು ನೀಡಿದ ಬೆನ್ನಲ್ಲೇ ಅಧ್ಯಕ್ಷ ಸ್ಥಾನಕ್ಕೆ ಹೊಸಬರನ್ನು ನೇಮಕ ಮಾಡಿದೆ. ಸರ್ಕಾರದ ಆದೇಶದಂತೆ ಮುರುಘಾ ಮಠದ ಆಡಳಿತಕ್ಕೆ ನಿವೃತ್ತ ಐಎಎಸ್ ಅಧಿಕಾರಿ ಸಿ. ಶಿವಯೋಗಿ ಕಳಸದ ಅವರನ್ನು ನೇಮಕ ಮಾಡಿ, ಆದೇಶ ಹೊರಡಿಸಿದೆ. ಜೊತೆಗೆ ಸಮಿತಿಯನ್ನು ನೇಮಕ ಮಾಡಲಾಗುವುದು ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಫೆಬ್ರವರಿ 27ರಂದು ಸುಪ್ರೀಂಕೋರ್ಟ್ ಮಠ ಹಾಗೂ ಎಸ್‍ಜೆಎಂ ವಿದ್ಯಾಪೀಠದ ಆಡಳಿತ ನಿರ್ವಹಣೆಗೆ ಮೂರು ದಿನಗಳಲ್ಲಿ ಸಮಿತಿ ರಚನೆ ಮಾಡಲು ಆದೇಶಿಸಿತ್ತು. ಅದರಂತೆ ಮಠ ಎಸ್.ಜೆ.ಎಂ. ವಿದ್ಯಾಪೀಠದ ಆಡಳಿತಾಧಿಕಾರಿಯಾಗಿ ನೇಮಕ ಮಾಡಲಾಗಿದೆ.

ಮುರುಘಾ ಶರಣರು, ಮಠ ಹಾಗೂ ವಿದ್ಯಾಪೀಠದ ಆಡಳಿತದಲ್ಲಿ ಹಸ್ತಕ್ಷೇಪ ಮಾಡಬಾರದು ಎಂದು ಹಿರಿಯೂರಿನ ಮಾಜಿ ಸಚಿವ ಹೆಚ್. ಏಕಾಂತಯ್ಯ ಸುಪ್ರೀಂ ಕೋರ್ಟ್‍ನಲ್ಲಿ ಅರ್ಜಿ ಸಲ್ಲಿಸಿದ್ದರು. ಇವರ ಅರ್ಜಿಯನ್ನು ಪರಿಶೀಲಿಸಿದ ಸುಪ್ರೀಂಕೋರ್ಟ್ ಫೆಬ್ರವರಿ 27ರಂದು ಮಹತ್ವದ ತೀರ್ಪು ನೀಡಿ, ರಾಜ್ಯ ಸರ್ಕಾರಕ್ಕೆ ತಿಳಿಸಿತ್ತು. ಅದರಂತೆ ರಾಜ್ಯ ಸರ್ಕಾರ ಆಡಳಿತಾಧಿಕಾರಿಯನ್ನು ನೇಮಕ ಮಾಡಲಾಗಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...