Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಸಚಿವ ಹೆಚ್.ಕೆ.ಪಾಟೀಲ್ ವಿರುದ್ಧ ನೂರಾರು ಕೋಟಿಯ ಆರೋಪ..!

Facebook
Twitter
Telegram
WhatsApp

 

ಗದಗ: ನಗರಸಭೆ ಆಸ್ತಿಯನ್ನು ಲೂಟಿ ಮಾಡುತ್ತಿದ್ದಾರೆ ಎಂದು ಗದಗ ಜಿಲ್ಲಾ ಉಸ್ತುವಾರಿ ಸಚಿವ ಹೆಚ್ ಕೆ ಪಾಟೀಲ್ ವಿರುದ್ಧ ಆರೋಪ ಕೇಳಿ ಬಂದಿದೆ. ನೂರಾರು ಕೋಟಿ ಬೆಲೆ ಬಾಳುವ ನಗರಸಭೆಯ ಆಸ್ತಿಯನ್ನು ಪ್ರಾಧಿಕಾರ್ ಮೂಲಕ ಲೂಟಿ ಮಾಡುತ್ತಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಬಿಜೆಪಿ ನಾಯಕರು ಈ ಆರೋಪ ಮಾಡಿ, ಆಕ್ರೋಶ ವ್ಯಕ್ತಪಡಿಸಿದ್ದಾರೆ.

 

ನಗರಸಭೆಯ ಬಿಜೆಪಿ ಸದಸ್ಯರು, ವಾಣಿಜ್ಯ, ಸಾಂಸ್ಕೃತಿಕ ವಸ್ತುಪ್ರದರ್ಶನ ಪ್ರಾಧಿಕಾರ ರಚನೆಗೂ ಭಾರೀ ವಿರೋಧ ವ್ಯಕ್ತಪಡಿಸಿದ್ದಾರೆ. ಪ್ರಾಧಿಕಾರದ ಮೂಲಕ ನಗರಸಭೆ ಆಸ್ತಿ ಕಬಳಿಕೆಗೆ ಯತ್ನ ನಡೆಯುತ್ತಿದೆ ಎಂದು ಕಿಡಿಕಾರಿದ್ದಾರೆ. ಇದೇ ವಿಚಾರಕ್ಕೆ ನಿನ್ನೆ ನಡೆದ ಸಾಮಾನ್ಯ ಸಭೆಯಲ್ಲೂ ಗೊಂದಲ ಉಂಟಾಗಿತ್ತು. ಮಾತಿನ ಚಕಮಕಿಯೂ ನಡೆದಿದೆ.

ನಾವೂ ಯಾವುದೇ ಕಾರಣಕ್ಕೂ ನಗರಸಭೆಯ ಆಸ್ತಿ ಕಬಳಿಕೆ ಮಾಡುವುದಕ್ಕೆ ಬಿಡುವುದಿಲ್ಲ. ಜಿಲ್ಲಾ ಉಸ್ತುವಾರಿ ಸಚಿವ ಹೆಚ್ ಕೆ ಪಾಟೀಲ್ ಅವರು ಆಸ್ತಿ ಕಬಳಿಕೆಗೆ ನಿಂತಿದ್ದಾರೆ. ಕಾಂಗ್ರೆಸ್ ಸದಸ್ಯರು ಇದಕ್ಕೆ ಬೆಂಬಲ ನೀಡುತ್ತಿದ್ದಾರೆ. ಆದರೆ ಯಾವುದೇ ಕಾರಣಕ್ಕೂ ಅದಕ್ಕೆ ನಾವೂಗಳು ಅವಕಾಶ ಮಾಡಿಕೊಡುವುದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ವೇಳೆ ಸಭೆಯ ನಡುವೆಯೇ ಗಲಾಟೆ ಜೋರಾಗಿದ್ದು, ಕಾಂಗ್ರೆಸ್ ಹಾಗೂ ಬಿಜೆಪಿ ನಾಯಕರ ನಡುವೆ ಒಂದು ಸ್ವಲ್ಪ ಸಮಯ ಗೊಂದಲದ ವಾತಾವರಣ ನಿರ್ಮಾಣವಾಗಿತ್ತು. ಬಳಿಕ ನೆರೆದಿದ್ದ ಸದಸ್ಯರೆಲ್ಲ ಸೇರಿ ವಾತಾವರಣವನ್ನು ತಿಳಿಗೊಳಿಸಿದ್ದಾರೆ. ಸಚಿವ ಹೆಚ್ ಕೆ ಪಾಟೀಲ್ ಅವರು ಅಧಿಕಾರ ಬಳಕೆ ಮಾಡಿ, ಆಸ್ತಿ ಕಬಳಿಕೆ ಮಾಡುತ್ತಿದ್ದಾರೆ ಎಂದು ಆರೋಪ ಮಾಡಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

SSLC ಪಾಸಾದ ಖುಷಿಯಲ್ಲಿದ್ದ ವಿದ್ಯಾರ್ಥಿನಿ : ಎಂಗೇಜ್ಮೆಂಟ್ ಮಾಡಿಕೊಳ್ಳಲು ಬಂದವನಿಂದ ಬರ್ಬರ ಹತ್ಯೆ..!

ಕೊಡಗು: ಎಸ್ಎಸ್ಎಲ್ಸಿ ಫಲಿತಾಂಶ ನಿನ್ನೆಯಷ್ಟೆ ಪ್ರಕಟಗೊಂಡಿದೆ. ಎಸ್ಎಸ್ಎಲ್ಸಿ ಪರೀಕ್ಷೆ ವಿದ್ಯಾರ್ಥಿಗಳ ಭವಿಷ್ಯದ ಬುನಾದಿ. ಮುಂದಿನ ಉಜ್ವಲ ಭವಿಷ್ಯ ಇಲ್ಲಿಂದ ಶುರು. ಇಂಥ ಪರೀಕ್ಷೆಯಲ್ಲಿ ಉತ್ತಮ ಅಂಕ ಪಡೆದು, ಮುಂದಿನ ಓದಿನ ಬಗ್ಗೆ ಆ ವಿದ್ಯಾರ್ಥಿನಿ

ಇಂದು ಅಕ್ಷಯ ತೃತೀಯ : 100 ವರ್ಷಗಳ ಬಳಿಕ ಗಜಕೇಸರಿ ಯೋಗ

ಅಕ್ಷಯ ತೃತೀತ ಎಂದರೆ ಹೆಣ್ಣು ಮಕ್ಕಳಿಗೆ ಬಲು ಪ್ರೀತಿ.‌ಈ ದಿನದಂದು ಚಿನ್ನ, ಬೆಳ್ಳಿ ಖರೀದಿ ಮಾಡಿದರೆ ಅಕ್ಷಯ ಪಾತ್ರಯಷ್ಟೇ ಸಮೃದ್ಧಿಯಾಗುತ್ತದೆ ಎಂಬ ನಂಬಿಕೆ. ಅದಕ್ಕಾಗಿಯೇ ಇಂದು ಬಂಗಾರ ಖರೀದಿ ಮಾಡಲು ಸಾಲು ಸಾಲು ಜನ

ಚಿತ್ರದುರ್ಗ | ಮರದ ಕೊಂಬೆ ಬಿದ್ದು 24 ಗಂಟೆಯಾದರೂ ತೆರವುಗೊಳಿಸದ ನಗರಸಭೆ

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,   ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 10 : ಜೆ.ಸಿ.ಆರ್. ಬಡಾವಣೆಯ ನಾಲ್ಕನೇ ಕ್ರಾಸ್‍ನಲ್ಲಿ ಬುಧವಾರ ಸಂಜೆ ಸುರಿದ ಮಳೆ ಮತ್ತು ಗಾಳಿಗೆ

error: Content is protected !!