Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಸುಮಲತಾ ಪರ ಈ ಬಾರಿಯೂ ದರ್ಶನ್, ಯಶ್ ಪ್ರಚಾರ ಮಾಡ್ತಾರಾ..? ಸುಮಲತಾ ಈ ಬಗ್ಗೆ ಹೇಳೋದೇನು..?

Facebook
Twitter
Telegram
WhatsApp

 

 

ಕಳೆದ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಮಂಡ್ಯ ಜಿಲ್ಲೆಯೇ ಹೈಲೇಟ್ ಆಗಿತ್ತು. ಚಿನಾವಣೆ ಹತ್ತಿರವಾಗುತ್ತಿದ್ದಂತೆ ಸ್ಪರ್ಧೆ ಜೋರಾಗಿತ್ತು. ಕುಮಾರಸ್ವಾಮಿ ವರ್ಸಸ್ ಸುಮಲತಾ ನಡುವೆ ಚುನಾವಣಾ ಯುದ್ಧ ನಡೆದಿತ್ತು. ಸುಮಲತಾ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ ನಡೆಸಿದ್ದರು. ಆಗ ದರ್ಶನ್ ಹಾಗೂ ಯಶ್ ದೊಡ್ಡ ಶಕ್ತಿಯಾಗಿ ನಿಂತಿದ್ದರು. ಈ ಬಾರಿಯೂ ಸುಮಲತಾ ಅವರು ಚುನಾವಣೆಗೆ ನಿಲ್ಲುವುದು ಪಕ್ಕಾ ಆಗಿದೆ. ಹೀಗಾಗಿ ಯಶ್ ಹಾಗೂ ದರ್ಶನ್ ಬೆಂಬಲವಾಗಿ ನಿಲ್ಲುತ್ತಾರಾ ಎಂಬ ಪ್ರಶ್ನೆ ಹುಟ್ಟಿಕೊಂಡಿದ್ದು, ಇದಕ್ಕೆ ಸುಮಲತಾ ಅವರೇ ಉತ್ತರ ನೀಡಿದ್ದಾರೆ.

 

ಮಂಡ್ಯದಲ್ಲಿ ಮಾತನಾಡಿರುವ ಸುಮಲತಾ ಅವರು, ಕಳೆದ ಬಾರಿ ನಾನು ಇಂಡಿಪೆಂಡೆಂಟ್ ಆಗಿ ನಿಂತಿದ್ದೆ. ಯಾವುದೇ ಅನುಭವ ಇಲ್ಲದೆ ಚುನಾವಣೆಗೆ ಹೋಗಿದ್ದೆ. ನಾನು ಅಂದು ಯಾರನ್ನೂ ಕರೆದಿರಲಿಲ್ಲ. ಆದರೆ ದರ್ಶನ್ ಹಾಗೂ ಯಶ್ ನನ್ನ ಪರವಾಗಿ ಗಟ್ಟಿಯಾಗಿ ನಿಂತಿದ್ದರು. ಆದರೆ ಇಂದಿನ ಸಂದರ್ಭವೇ ಬೇರೆ. ನಾನು ಒಂದು ಪಕ್ಷದಿಂದ ನಿಲ್ಲುತ್ತಿದ್ದೇನೆ. ಪಕ್ಷದ ಲೀಡರ್ಸ್ ಏನು ಹೇಳುತ್ತಾರೋ ನೋಡಬೇಕಿದೆ. ಈ ಬಾರಿಯ ಚುನಾವಣೆ ಕೂಡ ಬೇರೆ ರೀತಿಯಾಗಿಯೇ ಇರುತ್ತದೆ. ಪ್ರಚಾರ, ಕ್ಯಾಂಪೇನ್ ಎಲ್ಲವೂ ವಿಭಿನ್ನವಾಗಿರುತ್ತದೆ.

ನಟ ದರ್ಶನ್ ಮತ್ತು ಯಶ್ ದೊಡ್ಡ ಶಕ್ತಿ. ಬರುವುದಾದರೆ ಬರಲಿ. ಯಶ್ ಪ್ಯಾನ್ ಇಂಡಿಯಾ ಸ್ಟಾರ್, ದರ್ಶನ್ ಸೌತ್ ಇಂಡಿಯಾದಲ್ಲು ಬ್ಯುಸಿ ಇರುವ ನಟ. ಕಳೆದ ಬಾರಿ 25 ದಿನ ಬಂದು ಪ್ರಚಾರ ಮಾಡಿದ್ದರು. ಅವರಿಗಾಗಿ ಎಷ್ಟೋ ಮಂದಿ ಕಾಯುತ್ತಾರೆ. ಒಂದು ಸಿನಿಮಾದ ಮೇಲೆ ಎಷ್ಟೋ ಮಂದಿಯ ಜೀವನ ನಡೆಯುತ್ತದೆ. ಕ್ಯಾಂಪೇನ್ ಬನ್ನಿ ಅಂತ ಯಾರನ್ನು ಕರೆಯುವುದಕ್ಕೆ ಆಗಲ್ಲ. ಅವರೇ ಬರುವುದಾದರೆ ಖಂಡಿತ ಸ್ವಾಗತ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯವರು ಕೆಲಸದಲ್ಲಿ ಎಷ್ಟೇ ಶ್ರದ್ಧೆಯಿಂದ ದುಡಿದರೂ ಅಪವಾದ, ನಿಂದನೆ, ಆರ್ಥಿಕ ನಷ್ಟ ತಪ್ಪಿದ್ದಲ್ಲ

ಈ ರಾಶಿಯವರು ಕೆಲಸದಲ್ಲಿ ಎಷ್ಟೇ ಶ್ರದ್ಧೆಯಿಂದ ದುಡಿದರೂ ಅಪವಾದ, ನಿಂದನೆ, ಆರ್ಥಿಕ ನಷ್ಟ ತಪ್ಪಿದ್ದಲ್ಲ. ಶುಕ್ರವಾರ- ರಾಶಿ ಭವಿಷ್ಯ ಮೇ-17,2024 ಸೂರ್ಯೋದಯ: 05:47, ಸೂರ್ಯಾಸ್ತ : 06:37 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ

ಚಿತ್ರದುರ್ಗದಲ್ಲಿ ಐವರ ಅಸ್ಥಿಪಂಜರ ಪ್ರಕರಣ | ಕೊನೆಗೂ ಸಿಕ್ತು ಸಾವಿನ ಸುಳಿವು: ಎಸ್.ಪಿ. ಮಾಹಿತಿ…!

ಸುದ್ದಿಒನ್, ಚಿತ್ರದುರ್ಗ, ಮೇ. 16 : 2023ರ ಡಿಸೆಂಬರ್ ನಲ್ಲಿ ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ಪ್ರಕರಣ ಅದು. ನಗರದ ಬೆಂಗಳೂರು ರಸ್ತೆಯಲ್ಲಿರುವ ಪಾಳು ಬಿದ್ದ ಮನೆಯಲ್ಲಿ ಐವರ ಮೃತದೇಹ ಪತ್ತೆಯಾಗಿತ್ತು. ಅದು ಅವರೆಲ್ಲಾ ಸಾವನ್ನಪ್ಪಿ

ನೈರುತ್ಯ ಪದವೀಧರ ಚುನಾವಣೆ : ಬಿಜೆಪಿ ವಿರುದ್ಧ ರಘುಪತಿ ಭಟ್ ಬಂಡಾಯ, ಪಕ್ಷೇತರ ಸ್ಪರ್ಧೆ

ಮೈಸೂರು: ವಿಧಾನಸಭಾ ಚುನಾವಣೆ, ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಹಳಬರಿಗೆ, ಒಂದಷ್ಡು ವಿವಾದಗಳಿದ್ದವರಿಗೆ ಟಿಕೆಟ್ ನಿರಾಕರಣೆ ಮಾಡಿತ್ತು. ಹೊಸ ಮುಖಗಳಿಗೆ ಮಣೆ ಹಾಕಲು ಹೋಗಿ, ಹಿರಿಯ ತಲೆಗಳು ಬಂಡಾಯವೆದ್ದಿದ್ದರು. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಟಿಕೆಟ್

error: Content is protected !!