Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಕಿಚ್ಚ ಸುದೀಪ್ ಅವರಿಗೆ ಕೊಟ್ಟ ಎರಡನೇ ಮಾತನ್ನು ನೆರವೇರಿಸಿದ ಡ್ರೋನ್ ಪ್ರತಾಪ್

---Advertisement---

ಬೆಂಗಳೂರು: ಬಿಗ್ ಬಾಸ್ ಸೀಸನ್ 10ರಲ್ಲಿ ಈ ಬಾರಿ ಡ್ರೋನ್ ಪ್ರತಾಪ್ ಕೂಡ ಕಂಟೆಸ್ಟೆಂಟ್ ಆಗಿ ಬಂದಿದ್ದರು. ನೂರೆಂಟು ಆರೋಪಗಳನ್ನು ಹೊತ್ತು ಬಿಗ್ ಬಾಸ್ ಮನೆಗೆ ಎಂಟ್ರಿ ಕೊಟ್ಟಿದ್ದರು. ಆದರೆ ದಿನ ಕಳೆದಂತೆ ಪ್ರತಾಪ್ ಮುಗ್ಧತೆಗೆ ಜನ ಮರುಳಾಗಿದ್ದರು. ಹೀಗಾಗಿಯೇ ಜನರ ಮನಗೆದ್ದು ಫಸ್ಟ್ ರನ್ನರ್ ಅಪ್ ಆಗಿ ಹೊರ ಬಂದಿದ್ದರು.

ಅಂದು ಕಿಚ್ಚನ ವೇದಿಕೆಯಲ್ಲಿ ರನ್ನರ್ ಅಪ್ ಆದಾಗ ಹಲವು ಪ್ರಾಮೀಸ್ ಗಳನ್ನು ಮಾಡಿದ್ದರು. ಬಂದಂತಹ ಬಹುಮಾನದ ಹಣವನ್ನು ಅಗತ್ಯ ಇರುವ ಜನರಿಗೆ ಕೊಡುತ್ತೇನೆ ಎಂದಿದ್ದರು. ಅದರಂತೆ ಬೌನ್ಸ್ ಗಾಡಿಯನ್ನು ಫುಡ್ ಡೆಲಿವರಿ ಮಾಡುವ ಹುಡುಗನಿಗೆ ನೀಡಿದ್ದರು. ಇದೀಗ ಬಂದಂತ ಹಣವನ್ನು ಕಷ್ಟದಲ್ಲಿರುವವರಿಗೆ ನೀಡಿದ್ದಾರೆ.

ಬ್ಯುಸಿನೆಸ್​ನಲ್ಲಿ ಹಣ ಕಳೆದುಕೊಂಡ ಕುಟುಂಬ ಕಷ್ಟದ ದಿನಗಳನ್ನ ಕಳೆಯುತ್ತಿತ್ತು. ಆ ಕುಟುಂಬದ ಬಗ್ಗೆ ತಿಳಿದುಕೊಂಡ ಪ್ರತಾಪ್​ ಇಬ್ಬರೂ ಹೆಣ್ಣು ಮಕ್ಕಳಿಗೆ ಸಹಾಯ ಮಾಡಿದ್ದಾರೆ. ಒಟ್ಟಿನಲ್ಲಿ ಎಷ್ಟೋ ಭರವಸೆಗಳನ್ನ ಮರೆಯುವ ಈ ಕಾಲದಲ್ಲಿ ಮೂವರ ಬದುಕಿಗೆ ಆಸರೆ ಆಗಿದ್ದಾರೆ ಡ್ರೋನ್​​ ಪ್ರತಾಪ್​. ಅವರ ಈ ಕಾರ್ಯಕ್ಕೆ ಅಪಾರ ಜನಮನ್ನಣೆ ಸಿಗುತ್ತಿದೆ. ಇದಕ್ಕಿಂತ ಸಾರ್ಥಕತೆ ಇನ್ನೇನಿದೆ ಅಲ್ವಾ? ಇನ್ನೂ ಈ ವಿಡಿಯೋ ನೋಡಿದ ನೆಟ್ಟಿಗರು ತನ್ನ ಕಷ್ಟವನ್ನು ಬದಿಗಿಟ್ಟು ಪರರ ಕಷ್ಟಗಳಿಗೆ ಸ್ವಂದಿಸುವ ಗುಣ ನಿಮ್ಮದು, ನಿಮ್ಮಿಂದ ನೋಡಿ ಕಲಿಯಲಿಕ್ಕೆ ಸಾಕಷ್ಟಿದೆ ಎಂದು ಡ್ರೋನ್ ಪ್ರತಾಪ್ ಬಗ್ಗೆ ಪಾಸಿಟಿವ್ ಆಗಿ ಕಮೆಂಟ್ ಹಾಕುತ್ತಿದ್ದಾರೆ. ಡ್ರೋನ್ ಪ್ರತಾಪ್ ಸದ್ಯ ಕಲರ್ಸ್ ಕನ್ನಡದಲ್ಲಿಯೇ ಮನರಂಜನೆ ನೀಡುತ್ತಿದ್ದಾರೆ. ಗಿಚ್ಚಿ ಗಿಲಿಗಿಲಿಯಲ್ಲಿ ಕಾಮಿಡಿ ಮಾಡುತ್ತಾ ನಗಿಸುತ್ತಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment